ಕೃಷ್ಣಾರ್ಪಣಮಸ್ತು ಆಗದಿರಲಿ ಬಿ ಸ್ಕಿಂ


Team Udayavani, Feb 10, 2019, 10:38 AM IST

10-february-14.jpg

ಕೊಪ್ಪಳ: ಬರದ ನಾಡಿನ ದಶಕಗಳ ಬೇಡಿಕೆಯಾದ ಕೃಷ್ಣಾ ಬಿ ಸ್ಕಿಂನಡಿ ಬರುವ ಕೊಪ್ಪಳ ಏತ ನೀರಾವರಿ ಯೋಜನೆಗೆ ಮೈತ್ರಿ ಸರ್ಕಾರ ಬಜೆಟ್‌ನಲ್ಲಿ 210 ಕೋಟಿ ರೂ. ಘೋಷಣೆ ಮಾಡಿ ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ ಅನುದಾನ ನೀಡಿ ಕೈ ತೊಳೆದುಕೊಂಡಿದೆ. 2013ರಲ್ಲೇ ಯೋಜನೆಗೆ ಚಾಲನೆ ಸಿಕ್ಕಿದ್ದರೂ ಅನುದಾನ ಸಿಗದೇ ಆಮೆಗತಿಯಲ್ಲಿ ನಡೆದು ನಿತ್ರಾಣಕ್ಕೆ ಬಿದ್ದಿದೆ. ಹಾಗಾಗಿ ಈ ಭಾಗದ 2.80 ಲಕ್ಷ ಎಕರೆ ಪ್ರದೇಶಕ್ಕೆ ಕೃಷ್ಣೆಯ ನೀರು ಗಗನ ಕುಸುಮದಂತಾಗಿದೆ.

ಕೃಷ್ಣಾ ಕೊಳ್ಳದ ನದಿಗಳ ಮೂಲದಿಂದ ಬರದ ನಾಡಿಗೆ ನೀರಾವರಿ ಭಾಗ್ಯ ಕಲ್ಪಿಸಿ ಎಂದು ರೈತರು ದಶಕಗಳಿಂದಲೂ ಹೋರಾಟ ಮಾಡುತ್ತಿದ್ದಾರೆ. ಇಲ್ಲಿನ ನೀರಾವರಿ ಯೋಜನೆಗಳ ಸ್ಥಿತಿಯನ್ನೊಮ್ಮೆ ನೋಡಿದರೆ ಅಯ್ಯೋ.. ಎಂದೆನಿಸುತ್ತದೆ.

ಕೃಷ್ಣಾ ಜಲವಿವಾದ ನ್ಯಾಯಾಧೀಕರಣ-2ರ ಅಂತಿಮ ತೀರ್ಪಿನಂತೆ ಕೃಷ್ಣಾ ಮೂರನೇ ಹಂತದ ಎಲ್ಲ ಯೋಜನೆಗಳಿಗೆ 177 ಟಿಎಂಸಿ ಅಡಿ ನೀರನ್ನು ಹಂಚಿಕೆ ಮಾಡಿದೆ. ಈ ಯೋಜನೆಯಲ್ಲಿ ಒಟ್ಟು 9 ಯೋಜನೆಗಳು ಒಳಪಡಲಿವೆ. ಅದರಲ್ಲಿ ಕೊಪ್ಪಳ ಏತ ನೀರಾವರಿ ಯೋಜನೆಯೂ ಒಂದಾಗಿದೆ. ಈ ಕೊಪ್ಪಳ ಏತ ನೀರಾವರಿ ಯೋಜನೆಗೆ 12 ಟಿಎಂಸಿ ಅಡಿ ನೀರು ಹಂಚಿಕೆಯಾಗಿದೆ. ಇದನ್ನು ಹನಿ ನೀರಾವರಿ(ಮೈಕ್ರೋ ಇರಿಗೇಷನ್‌)ಅಡಿಯಲ್ಲಿ ನೀರಾವರಿಯಾಗಲಿದೆ. ಕೊಪ್ಪಳ ಜಿಲ್ಲೆಯ ಜನರು ದಶಕಗಳಿಂದಲೂ ಬರದ ನಾಡಿಗೆ ಕೃಷ್ಣೆಯ ನೀರು ಹರಿಸಿ ಎಂದು ಹೋರಾಟ ಮಾಡುತ್ತಲೇ ಇದ್ದಾರೆ. ಆದರೆ, ರೈತರ ಕೂಗು ಸರ್ಕಾರಕ್ಕೆ ಕೇಳುತ್ತಲೇ ಇಲ್ಲ. 2013ರಲ್ಲಿ ಈ ಭಾಗದ ನೂರಾರು ನಾಯಕರು ಬೆಂಗಳೂರಿಗೆ ನಿಯೋಗ ತೆರಳಿ ಆಗಿನ ಬಿಜೆಪಿ ಸರ್ಕಾರ ಆಡಳಿತದಲ್ಲಿ ಸಿಎಂ ಆಗಿದ್ದ ಜಗದೀಶ ಶೆಟ್ಟರ್‌ ಅವರಿಗೆ ಮನವಿ ಮಾಡಿ ಸಮಸ್ಯೆ ಪ್ರಸ್ತಾಪಿಸಿದ್ದರು. ನಾನಾ ರಾಜಕೀಯದಾಟದ ಮಧ್ಯೆ ಕುಷ್ಟಗಿ ತಾಲೂಕಿನ ಕಲಾಲಬಂಡಿಯಲ್ಲಿ ಬಿ ಸ್ಕಿಂ ಯೋಜನೆಗೆ ಶೆಟ್ಟರ್‌ ಅವರು ಚಾಲನೆ ಅಡಿಗಲ್ಲು ಸಮಾರಂಭ ನೆರವೇರಿಸಿದ್ದರು. ಬಳಿಕ ಕಾಮಗಾರಿಗೆ ವೇಗ ಪಡೆಯದೇ ನನೆಗುದಿಗೆ ಬಿದ್ದಿತು.

ಕಾಂಗ್ರೆಸ್‌ ನಡೆ ಕೃಷ್ಣೇಯ ಕಡೆ ಎಂದ್ರು: 2013ರ ಚುನಾವಣಾ ಸಂದರ್ಭದಲ್ಲಿ ಕೃಷ್ಣಾ ಯೋಜನೆಗಳ ಬಗ್ಗೆ ಚಿತ್ತ ಹರಿಸಿದ್ದ ಕಾಂಗ್ರೆಸ್‌ ಪಕ್ಷ ಬೆಂಗಳೂರಿನಿಂದ ಕಾಂಗ್ರೆಸ್‌ ನಡೆ-ಕೃಷ್ಣೆಯ ಕಡೆ ಎಂದು ಪಾದಯಾತ್ರೆ ಮಾಡಿದರು. ಕೊಪ್ಪಳ ಸೇರಿ ಇತರೆ ಭಾಗದಲ್ಲಿ ಕೃಷ್ಣಾ ಕೊಳ್ಳದ ಯೋಜನೆಗಳಿಗೆ ಪ್ರತಿ ವರ್ಷ 10 ಸಾವಿರ ಕೋಟಿ ರೂ. ಅನುದಾನ ಕೊಡುವ ನೀಡುವ ಭರವಸೆ ನೀಡಿದ್ದರು. ತಮ್ಮ ಅಧಿಕಾರವಧಿಯಲ್ಲಿ ಕೃಷ್ಣಾ ಯೋಜನೆ ಎಲ್ಲ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದ್ದರು. ಆದರೆ ಐದು ವರ್ಷ ಅಧಿಕಾರ ಪೂರ್ಣಗೊಳಿಸಿದರೂ ಯೋಜನೆಗಳು ಪೂರ್ಣಗೊಂಡಿಲ್ಲ. ಈ ಯೋಜನೆಗೆ ಸರ್ಕಾರ 7769 ಕೋಟಿ ರೂ. ಅಂದಾಜು ಮಾಡಲಾಗಿದ್ದು, ಇಲ್ಲಿವರೆಗೂ ಹಂತ ಹಂತವಾಗಿ ಕೇವಲ 1302.58 ಕೋಟಿ ರೂ. ಮಾತ್ರ ಬಿಡುಗಡೆಯಾಗಿದೆ.

ನಾರಾಯಣಪುರ ಜಲಾಶಯದ ಹಿನ್ನೀರು ಭಾಗದಿಂದ ನೀರನ್ನು ತಂದು ಈ ಭಾಗದ 2.82 ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಬೇಕಿದೆ. ಇದು ಕಾಲುವೆ ಮೂಲಕ ನೀರು ಹರಿಸುವ ಯೋಜನೆಯಲ್ಲ. ಹನಿ ನೀರಾವರಿ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸುವುದಾಗಿದೆ. ಆದರೆ ಕುಷ್ಟಗಿ ತಾಲೂಕಿನ ಕಲಾಲಬಂಡಿ ವರೆಗೂ ಕಾಲುವೆ ಕಾಮಗಾರಿ ನಡೆದಿದೆ. ಮುಂದೆ ಹಣದ ಅಭಾವ ಎದುರಾಗಿದ್ದರಿಂದ ಕಾಮಗಾರಿ ಸ್ಥಗಿತಗೊಂಡಿದೆ. ಯಲಬುರ್ಗಾ ತಾಲೂಕಿನಲ್ಲಿಯೇ ಅತಿ ಹೆಚ್ಚು ನೀರಾವರಿ ಸೌಲಭ್ಯ ಪಡೆಯಲಿದ್ದರೆ, ಕುಷ್ಟಗಿ ಬಳಿಕ ಕನಕಗಿರಿ ಹಾಗೂ ಕೊಪ್ಪಳ ತಾಲೂಕು ಸ್ವಲ್ಪ ನೀರಾವರಿಗೆ ಒಳಪಡಲಿವೆ.

2265 ಕೋಟಿ ಘೋಷಣೆಯಾದ್ರೂ ಇಲ್ಲ: ಕಳೆದ ಕಾಂಗ್ರೆಸ್‌ ಸರ್ಕಾರದ ಕೊನೆ ಗಳಿಗೆಯಲ್ಲಿ ಕೊಪ್ಪಳ ಏತ ನೀರಾವರಿ ಯೋಜನೆಗೆ 10 ಸಾವಿರ ಕೋಟಿ ರೂ. ಯೋಜನೆಯ ವಿಸ್ತೃತ ವರದಿ ಸಿದ್ಧಪಡಿಸಲಾಗಿತ್ತು. ಉಪ ಸಮಿತಿಯೂ ಈ ಭಾಗದಲ್ಲಿ ರೈತರ ಸಭೆ ನಡೆಸಿತ್ತು. ಅದಾದ ಕೆಲವೇ ದಿನಗಳಲ್ಲಿ ಸಿದ್ದರಾಮಯ್ಯ ಅವರು ಕೊಪ್ಪಳದಲ್ಲಿಯೇ ಕೃಷ್ಣಾ ಬಿ ಸ್ಕಿಂನ ಯೋಜನೆಗಳಿಗೆ 2265 ಕೋಟಿ ರೂ. ಅನುದಾನ ಕೊಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಅವರ ಸರ್ಕಾರದ ಅವಧಿ ಪೂರ್ಣಗೊಂಡ ಬಳಿಕ ಆ ಅನುದಾನವೇ ಇಲ್ಲದಂತಾಗಿದೆ. ಘೋಷಣೆ ಬರಿ ಘೋಷಣೆಯಾಗಿಯೇ ಉಳಿದಿದೆ. ಕೊಪ್ಪಳ ಏತ ನೀರಾವರಿ ಯೋಜನೆ ಪೂರ್ಣಗೊಳಿಸಲು ಪ್ರತ್ಯೇಕ 10-20 ಸಾವಿರ ಕೋಟಿ ಅನುದಾನ ಅವಶ್ಯಕತೆಯಿದೆ ಎಂದು ನೀರಾವರಿ ತಜ್ಞರೇ ಹೇಳುತ್ತಿದ್ದಾರೆ. ಆದರೆ ಈಗಿನ ಮೈತ್ರಿ ಸರ್ಕಾರ ಈ ಯೋಜನೆಗೆ 210 ಕೋಟಿ ರೂ. ಪುಡಿಗಾಸಿನ ಅನುದಾನ ಘೋಷಣೆ ಮಾಡಿ ಹಸಿದ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ನೀಡಿದಂತೆ ಮಾಡಿದೆ.

ಆಳ್ವಿಕೆ ನಡೆಸುವ ಸರ್ಕಾರಗಳು ಇನ್ನಾದರೂ ರೈತರ ವೇದನೆ ಅರಿತು ನೀರಾವರಿ ಯೋಜನೆಗೆ ಮಹತ್ವ ನೀಡಿ ರೈತರ ಕೃಷಿ ಭೂಮಿಗೆ ನೀರು ಹರಿಸುವ ಕಾಯಕಕ್ಕೆ ಮುಂದಾಗಬೇಕಿದೆ.

ನೀರಾವರಿಯಲ್ಲೂ ರಾಜಕೀಯ
ನೀರಾವರಿ ವಿಷಯದಲ್ಲೂ ರಾಜಕೀಯದ ಆಟ ಜೋರಾಗಿದೆ. ಬಿ ಸ್ಕಿಂ ಕನಸಿನ ಮಾತು ಎಂದು ಕೆಲವರು ಹೇಳುತ್ತಿದ್ದರೆ, ನಾವು ಜಾರಿ ಮಾಡಿಯೇ ಸಿದ್ದ ಎಂದು ಇನ್ನೂ ಕೆಲವರು ಹೇಳುತ್ತಿದ್ದಾರೆ. ಬಿಜೆಪಿ ನಾಯಕರು ಬಿ ಸ್ಕಿಂ ಜಾರಿಗಾಗಿ ಕುಷ್ಟಗಿ-ಕೊಪ್ಪಳದವರೆಗೂ ಪಾದಯಾತ್ರೆ ನಡೆಸಿದ್ದಲ್ಲದೆ ಸರ್ಕಾರದ ಗಮನ ಸೆಳೆದಿವೆ. ಕಾಂಗ್ರೆಸ್‌ ಸಹಿತ ಕೊಪ್ಪಳ ಏತ ನೀರಾವರಿ ಯೋಜನೆಗೆ ಕವಡೆ ಕಾಸಿನಿ ಕಿಮ್ಮತ್ತು ನೀಡಲಿಲ್ಲ. ರಾಜಕೀಯದಾಟದಿಂದ ರೈತರ ಬದುಕು ದುಸ್ಥರವಾಗಿ ದುಡಿಮೆ ಅರಸಿ ಗುಳೆ ಹೋಗುವಂತ ಸ್ಥಿತಿ ಬಂದಿದೆ. ದೂರದೃಷ್ಟಿ ಇಲ್ಲದೇ ಯೋಜನೆಗಳನ್ನು ಜೀವಂತವಿಡಲು, ಜನರ ಸಮಾಧಾನಕ್ಕಾಗಿ ಪುಡಿಗಾಸು ಅನುದಾನ ನೀಡಿ ಸೈ ಎನಿಸಿಕೊಳ್ಳುತ್ತಿವೆ.

ದತ್ತು ಕಮ್ಮಾರ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.