ಪುರಾತನ ಹೊಂಡಕ್ಕೆ ಬೇಕಿದೆ ಕಾಯಕಲ್ಪ

ಹೊಂಡ ಭರ್ತಿಯಾದರೆ ಅಂತರ್ಜಲ ಹೆಚ್ಚಳ; ಉದ್ಯಾನವನ ನಿರ್ಮಿಸಿ, ಬೋಟಿಂಗ್‌ ವ್ಯವಸ್ಥೆ ಮಾಡಿ

Team Udayavani, Sep 5, 2022, 3:50 PM IST

14

ಕುಕನೂರು: ತಾಲೂಕಿನ ಸುತ್ತಮುತ್ತಲಿನ ಸುಮಾರು 15 ಗ್ರಾಪಂಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿಯಲ್ಲಿ ಅಮೃತ ಸರೋವರ, ಕೆರೆ ಕಟ್ಟೆ, ಉದ್ಯಾನವನಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ, ಆದರೆ ಪಟ್ಟಣದ ಸೌಂದರ್ಯ, ಜಲಮೂಲ ರಕ್ಷಣೆಗಾಗಿ ಯಾವುದೇ ಹೊಂಡ, ಕೆರೆ, ಉದ್ಯಾನವನ, ಅಭಿವೃದ್ಧಿಗೊಳ್ಳದಿರುವುದು ಖೇದಕರ ಸಂಗತಿ.

ನಮ್ಮ ಪೂರ್ವಜರು ನಿರ್ಮಿಸಿದ ಹೊಂಡ(ಕೊಂಡ) ವು ಸಂಪ್ರದಾಯ, ಸಂಸ್ಕಾರ, ವಿಧಿ, ವಿಧಾನಗಳನ್ನು ಪೂರೈಸುವ ಭಾವೈಕ್ಯತೆಯ ಸ್ಥಳವಾಗಿತ್ತು. ಸುಮಾರು 15 ಎಕರೆ ವಿಸ್ತೀರ್ಣದ ಈ ಹೊಂಡ ಭರ್ತಿಯಾದರೆ ಸುತ್ತಲಿನ ಸಾವಿರಾರು ಎಕರೆ ಭೂಮಿಯ ತೇವಾಂಶ ವೃದ್ಧಿಸುತ್ತಿತ್ತು. ಆಗೀನ ಕುಡಿಯುವ ನೀರಿನ ನೀಲಪ್ಪನ ಬಾವಿ, ತಿಪ್ಪನಬಾವಿ ಇನ್ನಿತರ ಕೃಷಿ ಭಾವಿಗಳಲ್ಲಿ ಜೀವಜಲ ಹೆಚ್ಚಳವಾಗುತ್ತಿತ್ತು. ಬೇಸಿಗೆಯಲ್ಲಿ ಮಕ್ಕಳ ಜಲ ಕ್ರೀಡೆಗೆ ಸಹಕಾರಿಯಾಗಿತ್ತು. ರೈತರ ದನಕರುಗಳ ಸ್ವಚ್ಛತೆ, ಬಟ್ಟೆ ತೊಳೆಯಲು, ಜಾತ್ರೆ, ಹಬ್ಬ ಹರಿದಿನಗಳಲ್ಲಿ ವಿವಿಧ ಮೂರ್ತಿಗಳ ವಿಸರ್ಜನೆಗೆ ಧಾರ್ಮಿಕ ಕಾರ್ಯದ ಕೇಂದ್ರ ಸ್ಥಳವಾಗಿ ಬಿಂಬಿತವಾಗಿತ್ತು. ಹೊಂಡದ ಫಲವತ್ತಾದ ಕೆಂಪು ಮಣ್ಣನ್ನು ಮಣ್ಣೆತ್ತು, ಬಸವಣ್ಣ, ನಾಗರ, ಗಣೇಶ ಮೂರ್ತಿ ತಯಾರಿಕೆಗೆ ಬಳಕೆ ಮಾಡುತ್ತಿದ್ದರು.

ದಶಕಗಳಿಂದ ಈ ಹೊಂಡಕ್ಕೆ ನೀರು ಹರಿದು ಬರುವ ಮಾರ್ಗಗಳು ಬಂದಾಗಿ, ನೀರು ನಿಲ್ಲದೇ ಭತ್ತುತ್ತಿದೆ. ಇದರಿಂದ ಸುತ್ತಮುತ್ತಲಿನ ಬಾವಿ ಬರಡಾಗುತ್ತಿವೆ. ಇದಲ್ಲದೇ ಪ್ರಭಾವಿಗಳು ಹೊಂಡದ ಒಡಲ ಬಗೆದು ತಮ್ಮ ಲಾಭಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಸ್ತೆಯಿಂದ ತೆಗೆದ ನಿರುಪಯುಕ್ತ ಕಸದ ರಾಶಿಯನ್ನು ಹೊಂಡಕ್ಕೆ ಹಾಕುತ್ತಿರುವುದು ದುರಂತ ಸಂಗತಿ.

ಕಾಯಕಲ್ಪಕ್ಕೆ ಮುಂದಾಗಬೇಕಿದೆ: ಪೂರ್ವಜರು ನಿರ್ಮಿಸಿದ ಕೆರೆ, ಕಟ್ಟೆ ಉಳಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಪಟ್ಟಣದ ಹೊಂಡ, ನೃಪತುಂಗ ಕೆರೆಯ ಜೀರ್ಣೋದ್ಧಾರಗೊಳಿಸಬೇಕಿದೆ. ಜನಪ್ರತಿನಿಧಿಗಳು ಸುಂದರವಾದ ಉದ್ಯಾನವನ ನಿರ್ಮಿಸಿ, ಬೋಟಿಂಗ್‌ ವ್ಯವಸ್ಥೆ ಕಲ್ಪಿಸಿದರೆ ಪಟ್ಟಣದ ಸೌಂದರ್ಯ ವೃದ್ಧಿಸುತ್ತದೆ. ಇಡೀ ಪಟ್ಟಣದ ಜನತೆಗೆ ವಾಯು ವಿಹಾರ ಸ್ಥಳವಾಗಿ ಮಾದರಿ ಪಟ್ಟಣವಾಗುತ್ತದೆ ಎನ್ನುವುದು ಪಟ್ಟಣದ ಜನತೆ ಅಭಿಲಾಷೆ. ಗದಗ ರಸ್ತೆಯಲ್ಲರುವ ನೃಪತುಂಗ ಕೆರೆ ಹೂಳೆತ್ತಿಸಿದರೆ ನೀರಿನ ಸಂಗ್ರಹ ಹೆಚ್ಚಳವಾಗಿ ಅಂತರ್ಜಲಮಟ್ಟ ಕಡಿಮೆಯಾಗಿ ರೈತರಿಗೆ ಸಹಕಾರಿಯಾಗಲಿದೆ.

ಪುರಾತನ ಹೊಂಡ ಮತ್ತು ನೃಪತುಂಗ ಕೆರೆಗಳಲ್ಲಿ ನೀರು ಸಂಗ್ರಹದಿಂದ ಪಟ್ಟಣದ ತೇವಾಂಶ ರಕ್ಷಣೆಗೆ ಸಹಕಾರಿಯಾಗಿದೆ.ಆದರೆ ಇತ್ತೀಚಿಗೆ ಹೊಂಡ ಮತ್ತು ಕೆರೆಯಲ್ಲಿ ಹೂಳು ತುಂಬಿರುವ ಕಾರಣ ನೀರು ಸಂಗ್ರಹ ಕಡಿಮೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಚರ್ಚಿಸಿ ಪುರಾತನ ಹೊಂಡ ಮತ್ತು ನೃಪತುಂಗ ಕೆರೆಯ ಜೀರ್ಣೋದ್ಧಾರಕ್ಕೆ ಕ್ರಮ ಕೈಗೊಳ್ಳಲಾಗುವುದು. –ಚಿದಾನಂದ ಗುರುಸ್ವಾಮಿ, ತಹಶೀಲ್ದಾರ್‌, ಪಪಂ ಆಡಳಿತ ಅಧಿಕಾರಿ

-ಬಸವರಾಜ ಕೋನಾರಿ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.