ರೈತರ ಧ್ವನಿಯಾಗಿದ್ದ ತೋಂಟದಾರ್ಯ ಶ್ರೀ


Team Udayavani, Oct 21, 2018, 3:46 PM IST

21-october-17.gif

ಕೊಪ್ಪಳ: ರೈತರ ಕೃಷಿ ಭೂಮಿಯನ್ನು ಪೋಸ್ಕೋ ಕಂಪನಿಗೆ ಒಂದಿಚ್ಚು ಕೊಡುವುದಿಲ್ಲ ಎಂದು ಗದಗಿನ ತೋಂಟದಾರ್ಯ ಶ್ರೀಗಳು 2011-12ನೇ ಸಾಲಿನಲ್ಲಿ ನಡೆಸಿದ್ದ ರೈತಪರ ಹೋರಾಟವನ್ನು ಬೆಂಬಲಿಸಿ ಕೊಪ್ಪಳ ಜಿಲ್ಲೆಯಲ್ಲೂ ಹೋರಾಟಗಳು ನಡೆದವು. ಅನ್ನದಾತನ ಕೃಷಿ ಭೂಮಿ ಉಳಿಯುವಂತೆ ಮಾಡಿದ ಶ್ರೀಗಳಿಗೆ ಇಡೀ ರೈತ ಸಮೂಹವೇ ಚಿರಋಣಿಯಾಗಿದ್ದು, ಅವರ ಲಿಂಗೈಕ್ಯಕ್ಕೆ ಭಕ್ತ ಸಮೂಹ ಕಂಬನಿ ಮಿಡಿಯುತ್ತಿದೆ.

ವಿದೇಶದ ಪೋಸ್ಕೋ ಕಂಪನಿಯು 2011-12ನೇ ಸಾಲಿನಲ್ಲಿ ಗದಗ ಜಿಲ್ಲೆಯಲ್ಲಿ ನೆಲೆ ಕಾಣಲು ಹವಣಿಸುತ್ತಿತ್ತು. ಆ ವೇಳೆ ಗದಗ ಜಿಲ್ಲೆಯ ರೈತ ಸಮೂಹವೇ ಧ್ವನಿ ಎತ್ತಿ ದೊಡ್ಡ ಮಟ್ಟದ ಹೋರಾಟ ಮಾಡೆಸಿತ್ತು. ಈ ಹೋರಾಟಕ್ಕೆ ತೋಂಟದಾರ್ಯ ಶ್ರೀಗಳೇ ಮುಂದಾಳತ್ವ ವಹಿಸಿ ಪೋಸ್ಕೋ ಕಂಪನಿಯನ್ನೇ ಓಡಿಸಿದ್ದರು. ಅಲ್ಲಿನ ರೈತರು ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳು ಧರಣಿ ನಡೆಸಿ ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಕೊಪ್ಪಳ-ಗದಗ ಗಡಿ ಭಾಗದಲ್ಲಿನ ಹಳ್ಳಿಗುಡಿ ಭಾಗದಲ್ಲಿ ರೈತರ ಭೂಮಿ ಸರ್ವೇ ಕಾರ್ಯ ನಡೆದ ಬಗ್ಗೆ ಸುದ್ದಿ ಹರಡುತ್ತಿದ್ದಂತೆ ಸ್ವಾಮೀಜಿ ಸರ್ಕಾರ ಹಾಗೂ ಕಂಪನಿ ವಿರುದ್ಧ ವಾಕ್ಸಮರ ನಡೆಸಿದ್ದರು. ಹೋರಾಟಕ್ಕೆ ಕೊಪ್ಪಳ ಜಿಲ್ಲೆಯ ರೈತ ಸಮೂಹ ಬೆಂಬಲ ಕೊಟ್ಟಿದ್ದಲ್ಲದೇ, ಇಲ್ಲಿನ ಹಲವು ಕನ್ನಡ ಪರ ಸಂಘಟನೆಗಳು ದೊಡ್ಡ ಮಟ್ಟದ ಹೋರಾಟ ನಡೆಸಿದ್ದವು.

ಗದಗ ಜಿಲ್ಲೆಯಲ್ಲಿ ನಡೆದ ರೈತ ಚಳವಳಿಗೆ ಬೆಚ್ಚಿದ ಪೋಸ್ಕೋ ಕಂಪನಿ ಕೊಪ್ಪಳ ಭಾಗದಲ್ಲಿ ನೆಲೆ ಹುಡುಕಾಟ ನಡೆಸಿತ್ತು. ಒಂದು ವೇಳೆ ಕೊಪ್ಪಳದಲ್ಲಿ ಪೋಸ್ಕೋ ಸ್ಥಾಪನೆ ಮಾಡಿದರೆ ಅಲ್ಲಿಯೂ ನಮ್ಮ ವಿರೋಧವಿದೆ. ನನಗೆ ಗದಗ ಜಿಲ್ಲೆಯ ರೈತರೂ ಒಂದೇ, ಕೊಪ್ಪಳ ಜಿಲ್ಲೆಯ ರೈತರು ಒಂದೇ ಎನ್ನುವ ಮಾತನ್ನಾಡಿದ್ದರು. ಕರ್ನಾಟಕದಲ್ಲೇ ಪೋಸ್ಕೋ ಕಂಪನಿ ನೆಲೆ ಕಾಣುವಂತಿಲ್ಲ ಎಂದು ಗುಡುಗಿ ರೈತರ ಬದುಕಿನ ಬಗ್ಗೆ ಕಳಕಳಿ ತೋರಿದ್ದರು. ಅನ್ನದಾತನ ಪರ ನಿಲವು ತಾಳಿದ್ದಕ್ಕೆ ಶ್ರೀಗಳ ಹೋರಾಟದ ಬಗ್ಗೆ ಇಡೀ ರೈತ ಸಮೂಹ ಮೆಚ್ಚಿ ಕೊಂಡಾಡಿದ್ದಲ್ಲದೇ, ಶ್ರೀಗಳಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಹೀಗಾಗಿ ಕೊಪ್ಪಳದ ಜನರೂ ಸಹಿತ ಶ್ರೀಗಳ ಪರ ಧ್ವನಿ ಎತ್ತಿದ್ದರು.

ವಚನ ಸಾಹಿತ್ಯದ ಮಹಾರತ್ನ
ತೋಂಟದಾರ್ಯ ಶ್ರೀಗಳು ಶರಣರ ನಾಡು ಕೊಪ್ಪಳ ಜಿಲ್ಲೆಯೊಂದಿಗೆ ಅವಿನಾಭಾವ ನಂಟು ಹೊಂದಿದ್ದರು. ಪ್ರತಿಯೊಂದು ವಚನ ಸಂಬಂಧಿತ ಕಾರ್ಯಕ್ರಮದಲ್ಲಿ ಅವರ ಉಪಸ್ಥಿತಿ ಇದ್ದೇ ಇರುತ್ತಿತ್ತು. ಕೊಪ್ಪಳ-ಗದಗ ಗಡಿಯಲ್ಲಿ ಅವರ ವಚನಕ್ರಾಂತಿ ಇಂದಿಗೂ ಜನಮಾನಸದಲ್ಲಿ ಉಳಿದಿದೆ. ಪ್ರತಿ ವರ್ಷವೂ ಬಸವ ಜಯಂತಿ ಉತ್ಸವ ಸಮಿತಿ ಆಯೋಜಿಸುವ ಪ್ರವಚನ ಕಾರ್ಯಕ್ರಮದಲ್ಲಿ ಶ್ರೀಗಳ ಸಾನಿಧ್ಯವಿರುತ್ತಿತ್ತು. ಅಸ್ಪೃಶತೆಯ ವಿರುದ್ಧ ಶ್ರೀಗಳು ಧ್ವನಿ ಎತ್ತಿದ್ದರು. ಅಂತಹ ಮಹಾನ್‌ ರತ್ನ ಭಕ್ತ ಸಮೂಹವನ್ನು ಅಗಲಿದ್ದಕ್ಕೆ ಜಿಲ್ಲೆಯ ಜನರು ಕಂಬನಿ ಮಿಡಿದಿದ್ದಾರೆ. 

ಪೋಕ್ಸೋ ಕಂಪನಿ ಸ್ಥಾಪನೆಯ ವಿರುದ್ಧ ತೋಂಟದಾರ್ಯ ಶ್ರೀಗಳು ರೈತರ ಪರ ದೊಡ್ಡ ಮಟ್ಟದ ಹೋರಾಟ ಮಾಡಿದ್ದರು. ಅವರ ಹೋರಾಟಕ್ಕೆ ನಾವೂ ಬೆಂಬಲ ವ್ಯಕ್ತಪಡಿಸಿ ಕಂಪನಿ ನೆಲೆಯೂರದಂತೆ ಕೊಪ್ಪಳದಲ್ಲೂ ಹೋರಾಟ ಮಾಡಿದ್ದೆವು. ಶ್ರೀಗಳು ಇಂದು ನಮ್ಮನ್ನೆಲ್ಲ ಬಿಟ್ಟು ಅಗಲಿದ್ದಾರೆ. ಅವರು ರೈತಪರವಾಗಿರುವುದನ್ನು ನಾವು ಇಂದಿಗೂ ಸ್ಮರಿಸಬಹುದಾಗಿದೆ.
 ಡಿ.ಎಚ್‌. ಪೂಜಾರ,
 ಹೋರಾಟಗಾರ
.

„ದತ್ತು ಕಮ್ಮಾರ 

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.