ಕುಕನೂರು; ವಿವಿಧ ಗ್ರಾಮ ವ್ಯಾಪ್ತಿಯಲ್ಲಿ ಉತ್ತಮ ಮಳೆ
Team Udayavani, Jun 2, 2020, 12:19 PM IST
ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ವಿವಿಧ ಗ್ರಾಮ ವ್ಯಾಪ್ತಿಯಲ್ಲಿ ಸೋಮವಾರ ಉತ್ತಮ ಮಳೆಯಾಗಿದ್ದು, ಹಳ್ಳ-ಕೊಳ್ಳಗಳು ಹರಿದಿವೆ. ಕೊಪ್ಪಳ ತಾಲೂಕಿನ ಕೆಲವು ಹೋಬಳಿಯಲ್ಲಿ ತುಂತುರು ಹನಿಯಾಗಿದ್ದು, ಗಂಗಾವತಿ ಹಾಗೂ ಕುಷ್ಟಗಿಯಲ್ಲಿ ಮೋಡ ಕವಿದ ವಾತಾವರಣವಿತ್ತು.
ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ರೈತಾಪಿ ವರ್ಗವು ಕೃಷಿ ಚಟುವಟಿಕೆಯಲ್ಲಿ ಖುಷಿಯಿಂದಲೇ ತೊಡಗಿಕೊಂಡಿದೆ. ಉತ್ತಮ ಮಳೆಗಳ ನಿರೀಕ್ಷೆಯಲ್ಲಿಯೇ ಬಿತ್ತನೆಗೆ ಎಲ್ಲ ತಯಾರಿ ಮಾಡಿಕೊಂಡಿದ್ದಾರೆ. ವಿವಿಧ ಹೋಬಳಿಗಳಲ್ಲಿ ಮುಂಗಾರು ಪೂರ್ವ ಮಳೆಗಳು ಉತ್ತಮವಾಗಿ ಸುರಿದಿದ್ದು, ರೈತರು ಭೂಮಿ ಹಸನ ಮಾಡಿಕೊಂಡಿದ್ದಾರೆ. ಯಲಬುರ್ಗಾ ಭಾಗ ಹೆಸರು ಬಿತ್ತನೆ ಕಾರ್ಯ ನಡೆದಿವೆ. ಇನ್ನೂ ಸೋಮವಾರ ಕುಕನೂರು ತಾಲೂಕಿನ ಚಿಕ್ಕೇನಕೊಪ್ಪ, ಬಿನ್ನಾಳ, ಭಟಪ್ಪನಹಳ್ಳಿ, ಯರೆ ಹಂಚಿನಾಳ ಸೇರಿದಂತೆ ಇತರೆ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದ್ದು ರೈತರಲ್ಲಿ ಖುಷಿ ಮೂಡಿಸಿದೆ.
ಇನ್ನು ಕೊಪ್ಪಳ ತಾಲೂಕಿನ ವಿವಿಧ ಹೋಬಳಿಯಲ್ಲಿ ಜಿನುಗು ಮಳೆಯಾಗಿದೆ. ಗುಡುಗು-ಸಿಡಿಲಿನ ಆರ್ಭಟವೂ ಜೋರಾಗಿತ್ತು. ಆದರೆ ಅಂತಹ ದೊಡ್ಡ ಮಟ್ಟದ ಮಳೆಯಾಗಿಲ್ಲ. ಇನ್ನೂ ಗಂಗಾವತಿ, ಕನಕಗಿರಿ, ಕುಷ್ಟಗಿ ತಾಲೂಕು ವ್ಯಾಪ್ತಿಯಲ್ಲೂ ಸಂಜೆ ಮೋಡ ಕವಿದ ವಾತಾವರಣವಿದ್ದರೆ ಕೆಲವು ಗ್ರಾಮಗಳಲ್ಲಿ ತುಂತುರು ಮಳೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ