Kushtagi; ಪಾಕಿಸ್ಥಾನ ಧ್ವಜ ಸ್ಟೇಟಸ್ ಹಾಕಿಕೊಂಡ ಯುವಕ ಪೊಲೀಸರ ವಶಕ್ಕೆ
ಪಾಕಿಸ್ಥಾನ ಬಾಂಧವರಿಗೆ ಸ್ವಾಗತ....!
Team Udayavani, Nov 24, 2023, 9:37 PM IST
ಕುಷ್ಟಗಿ : ಪಾಕಿಸ್ಥಾನ ಧ್ವಜವನ್ನು ಮೊಬೈಲ್ ಸ್ಟೇಟಸ್ ಹಾಕಿಕೊಂಡ ಯುವಕನನ್ನು ದೇಶದ್ರೋಹ ಆರೋಪದ ಮೇರೆಗೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಪಂಚರ್ ಶಾಪ್ ನ ರಾಜೇಸಾಬ್ ಮಹ್ಮದ್ ಸಾಬ್ ನಾಯಕ ಎಂಬ ಯುವಕ ತನ್ನ ಮೊಬೈಲ್ ನಲ್ಲಿ ಪಾಕ್ ಧ್ವಜದ ಸ್ಟೇಟಸ್ ಹಾಕಿಕೊಂಡಿದ್ದ. ಅಲ್ಲದೇ ಶುಕ್ರವಾರ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಕ್ಕೆ ಪಾಕಿಸ್ಥಾನ ಬಾಂಧವರಿಗೆ ಸ್ವಾಗತ ಕೋರಿದ್ದ.
ಈ ಬೆಳವಣಿಗೆಯನ್ನೂ ಹಿಂದೂ ಸಂಘಟನೆಯ ಕಾರ್ಯಕರ್ತ ಗುಡಸಲಿ ಅವರು ಖಂಡಿಸಿ ಸ್ಥಳೀಯ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿ ದೇಶದ್ರೋಹದ ಆರೋಪದ ಮೇರೆಗೆ ಬಂಧಿಸಬೇಕೆಂದು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಕುಷ್ಟಗಿ ಸಿಪಿಐ ಯಶವಂತ ಬಿಸನಳ್ಳಿ ಅವರು, ಯುವಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ತಾವರಗೇರಾ ಪೊಲೀಸ್ ಠಾಣೆಯೆಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ