ಕುಷ್ಟಗಿ: ಬಯಲು ಸೀಮೆಗೆ ಮಲೆನಾಡಿನ ಬೆಳೆಗಳ ಪರಿಚಯಿಸಲು ಮುಂದಾದ ಕೃಷಿಕ ದೇವೇಂದ್ರಪ್ಪ ಬಳೂಟಗಿ


Team Udayavani, Sep 22, 2022, 2:55 PM IST

20

ಕುಷ್ಟಗಿ: ಕುಷ್ಟಗಿಯ ಪ್ರಗತಿ ಪರ ಕೃಷಿಕ ದೇವೇಂದ್ರಪ್ಪ ಬಳೂಟಗಿ ಅವರು, ಬಿಸಿಲನಾಡು ಕುಷ್ಟಗಿ ಈ ಭಾಗಕ್ಕೆ ಮಲೆನಾಡಿನ ಪ್ರಮುಖ ಬೆಳೆಗಳನ್ನು ಪ್ರಾಯೋಗಿಕವಾಗಿ ಬೆಳೆಯಲು ಮುಂದಾಗಿದ್ದಾರೆ.

ಈ ಭಾಗ ಮೊದಲೇ ಬಿಸಿಲು ಹೆಚ್ಚು, ಮಳೆ ಕಡಿಮೆ. ಹೀಗಾಗಿ ಈ ಪ್ರದೇಶಕ್ಕೆ ಒಗ್ಗುವ ಬೆಳೆಗಳನ್ನು ಬೆಳೆಯುವುದು ಈ ಭಾಗದಲ್ಲಿ ಕಾಣಬಹುದು. ಮಲೆನಾಡಿನಲ್ಲಿ ಅಧಿಕ ಮಳೆ, ಕಾಡು ಹೆಚ್ಚು ಹೀಗಾಗಿ ಕಾಫಿ, ಏಲಕ್ಕಿ, ಲವಂಗ, ಅಡಿಕೆ, ಮೆಣಸು ಇತ್ಯಾದಿ ಬೆಳೆಗಳು ಸಹಜವಾಗಿ ಬೆಳೆಯುತ್ತಿವೆ. ಮಲೆನಾಡಿನ ಸೀಮಿತ ಬೆಳೆಗಳನ್ನು ಈ ಪ್ರದೇಶದಲ್ಲಿ ಪರಿಚಯಿಸುವ ಪ್ರಯತ್ನ ಇದಾಗಿದೆ.

ಈಗಾಗಲೇ ಶ್ರೀಗಂಧ 8 ಸಾವಿರ, ರಕ್ತ ಚಂದನ 6 ಸಾವಿರ, 600 ಮಾವು, 500 ಸಪೋಟ, 3 ಸಾವಿರ ತೇಗ ನೇರಳೆ ಇತ್ಯಾದಿ ಬೆಳೆದು ಈ ಪ್ರದೇಶ ಕಾಡಾಗಿ ಪರಿವರ್ತಿಸಿದ್ದಾರೆ. ಇದರಲ್ಲಿಯೇ ಮಲೆನಾಡಿನ ಪ್ರಮುಖ ಬೆಳೆಗಳಾದ ಕಾಫಿ, ಏಲಕ್ಕಿ, ಲವಂಗ ಅಡಿಕೆ, ಮೆಣಸು, ಬಟರ್ ಪ್ರೂಟ್ (ಬೆಣ್ಣೆ ಹಣ್ಣು) ಪ್ರಾಯೋಗಿಕವಾಗಿ ಬೆಳೆಸಿದ್ದಾರೆ. ಅಲ್ಲಿನ ಬೆಳೆಗಳು ಈ ಪ್ರದೇಶದಲ್ಲಿ ಪ್ರಾಯೋಗಿಕವಾಗಿ ಬೆಳೆಯಲಾಗಿದೆ.

ಈ ಪ್ರದೇಶದಲ್ಲಿ ಎಲೆ ಬಳ್ಳಿ ಚೆನ್ನಾಗಿ ಬೆಳೆಯುತ್ತದೆ. ಮೆಣಸು ಯಾಕೆ ಬೆಳೆಯುವುದಿಲ್ಲ ಎಂದು 4 ಎಕೆರೆಯಲ್ಲಿ ಪ್ರತಿ ತೇಗದ ಗಿಡಕ್ಕೆ ಮೆಣಸು ಬಳ್ಳಿ ಹಬ್ಬಿಸಲಾಗಿದೆ. ಮಲೆನಾಡಿನ ಸೀಮಿತ ಬೆಳೆಗಳನ್ನು ಇಲ್ಲೂ ಬೆಳೆಯಬಹುದಾಗಿದ್ದು, ಈ ಎಲ್ಲಾ ಬೆಳೆಗಳನ್ನು ಸಾವಯವ ಆಧಾರಿತವಾಗಿ ಶೂನ್ಯ ನಿರ್ವಹಣೆಯಲ್ಲಿ ಬೆಳೆದಿರುವುದು ವಿಶೇಷ.

ಈ ಬೆಳೆ ಮಾತ್ರವಲ್ಲದೇ ನುಗ್ಗೆ, ನೋನಿ, ಕರಿಬೇವು, ನೆಲ್ಲಿ, ಎಲೆಬಳ್ಳಿ, ರೇಷ್ಮೇ ಅಲ್ಲದೇ ಕೆಲವು ಔಷಧಿಯ ಬೆಳೆ ಬೆಳೆಯಲಾಗಿದೆ. ಈ ಬೆಳೆಗಳು ಆದಾಯ ತರುವ ಬೆಳೆಗಳಾಗಿದ್ದು ಮಾಸಿಕವಾಗಿ ಏನಿಲ್ಲವೆಂದರೂ ಎಕ್ರೆಗೆ 1 ಲಕ್ಷ ರೂ. ಆದಾಯ ನಿರೀಕ್ಷಿಸಬಹುದಾಗಿದೆ.

ತೇಗ, ಶ್ರೀಗಂಧ, ರಕ್ತ ಚಂದನ ದೀರ್ಘಾವಧಿಯ ಈ ಬೆಳೆಗಳ ನಿಶ್ಚಿತ ಠೇವಣಿ ಇದ್ದಂತೆ ಉಳಿದ ಬೆಳೆಗಳು ಅಯಾ ಕಾಲದಲ್ಲಿ ಆದಾಯ ನಿರೀಕ್ಷಿಸಬಹುದಾಗಿದ್ದು, ಕೃಷಿಯಿಂದ ವಿಮುಖರಾಗುವ ಈ ಸಂಧರ್ಭದಲ್ಲಿ ಸಾವಯವ ಕೃಷಿಯಿಂದ ಸಮಗ್ರ ಕೃಷಿಯಿಂದ ಪದ್ದತಿ ಅಳವಡಿಸಿಕೊಂಡು ಒಬ್ಬ ವ್ಯಕ್ತಿಯಿಂದ ನಿರ್ವಹಣೆ ಸಾದ್ಯ ಎನ್ನುತ್ತಾರೆ ದೇವೇಂದ್ರಪ್ಪ ಬಳೂಟಗಿ.

-ಮಂಜುನಾಥ ಮಹಾಲಿಂಗಪುರ ಕುಷ್ಟಗಿ

ಟಾಪ್ ನ್ಯೂಸ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.