Crime News: ದುಷ್ಕರ್ಮಿಗಳಿಂದ ಹತನಾದ ಹನುಮನಾಳ ಯುವಕ
Team Udayavani, Aug 20, 2023, 11:04 AM IST
ಕುಷ್ಟಗಿ: ತಾಲೂಕಿನ ಹನುಮನಾಳ ಗ್ರಾಮದ ಹೊರವಲಯದಲ್ಲಿ ಜಮೀನಿನಲ್ಲಿ ದುಷ್ಕರ್ಮಿಗಳು ಯುವಕನ ತಲೆ ಹಾಗೂ ಹೊಟ್ಟೆಯ ಭಾಗಕ್ಕೆ ಕಲ್ಲು ಎತ್ತಿ ಹಾಕಿ ನಿರ್ದಯಿಯಾಗಿ ಕೊಲೆ ಮಾಡಿದ ಪ್ರಕರಣ ಜನತೆಯನ್ನು ಬೆಚ್ಚಿ ಬೀಳಿಸಿದೆ.
ಕೊಲೆಯಾದ ಯುವಕ ಮಂಜಪ್ಪ ದ್ಯಾಮಣ್ಣ ಜಿಗರಿ(23) ಗುರುತಿಸಲಾಗಿದೆ. ತೋಟದಲ್ಲಿ ಮಲಗಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಮಂಜಪ್ಪನ ತಲೆ ಹಾಗೂ ಹೊಟ್ಟೆಯ ಭಾಗಕ್ಕೆ ಕಲ್ಲು ಎತ್ತಿ ಹಾಕಿದ್ದರಿಂದ ಆತ ಸ್ಥಳದಲ್ಲಿ ಮೃತನಾಗಿದ್ದು, ತಲೆಯ ಭಾಗ ಗುರುತು ಸಿಗದಂತಾಗಿದೆ. ಭೀಭತ್ಸ ಕೊಲೆಗೆ, ವೈಯಕ್ತಿಕ ದ್ವೇಷ ಹಾಗೂ ಅನೈತಿಕ ಸಂಬಂಧದ ಹಿನ್ನೆಲೆ ಎಂಬುದಾಗಿ ಕೊಲೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಈ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಹನುಮಸಾಗರ ಠಾಣೆಯ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಸಿಪಿಐ ಯಶವಂತ ಬಿಸನಹಳ್ಳಿ ಪ್ರತಿಕ್ರಿಯಿಸಿ, ತಡರಾತ್ರಿ ಯುವಕನ ಕೊಲೆಯಾಗಿದ್ದು, ಕೊಲೆಗೆ ಕಾರಣ ಹಾಗೂ ದುಷ್ಕರ್ಮಿಗಳ ಪತ್ಯೆ ಈ ನಿಟ್ಟಿನಲ್ಲಿ ತನಿಖೆ ಕೈಗೊಳ್ಳಲಾಗಿದೆ. ಹನುಮಸಾಗರ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ