Kushtagi: ಸಾವಿನಲ್ಲೂ ಒಂದಾದ ದಂಪತಿ
Team Udayavani, Oct 3, 2023, 9:02 AM IST
ಕುಷ್ಟಗಿ: ಪಟ್ಟಣದ ಅನ್ನದಾನೇಶ್ವರ ನಗರದ ನಿವಾಸಿ ವಯೋವೃದ್ದ ದಂಪತಿಗಳು ಸಾವಿನಲ್ಲೂ ಒಂದಾಗಿದ್ದಾರೆ.
ಮೂಲತಃ ಯಲಬುರ್ಗಾ ತಾಲೂಕಿನ ಹಿರೇಅರಳಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಪ್ರಸ್ತುತ ಕುಷ್ಟಗಿಯ ಅನ್ನದಾನೇಶ್ವರ ನಗರದ ನಿವಾಸಿಯಾಗಿದ್ದರು.
ನಿವೃತ್ತ ಮುಖ್ಯ ಶಿಕ್ಷಕ ಹನುಮಂತಪ್ಪ ತಂದೆ ಹನಮಪ್ಪ ಮೇಟಿ ಅವರು, ಅ.2 ರಂದು ಸೋಮವಾರ ರಾತ್ರಿ 10.30ಕ್ಕೆ ಹೃಧಯಘಾತದಿಂದ ನಿಧನರಾಗಿದ್ದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಪತಿಯ ಸಾವಿನಿಂದ ಆಘಾತಗೊಂಡಿದ್ದ ಪತ್ನಿ 65 ವರ್ಷದ ಗೌರಮ್ಮ ಅವರು ಕೂಡಾ ಮಂಗಳವಾರ ಬೆಳಗಿನ ಜಾವ ಹೃಧಯಘಾತದಿಂದ ನಿಧನರಾಗಿದ್ದಾರೆ. ಐದಾರು ತಾಸಿನ ಅಂತರದಲ್ಲಿ ವೃದ್ದ ದಂಪತಿ ಸಾವಿನಲ್ಲಿ ಒಂದಾಗಿದ್ದಾರೆ.
ಕೆಲವೇ ತಾಸುಗಳಲ್ಲಿ ಇವರಿಬ್ಬರ ಸಾವು ಕುಟುಂಬ ವರ್ಗದಲ್ಲಿ ಶೋಕ ಮಡುಗಟ್ಟಿದೆ. ಈ ಪ್ರಕರಣ ಕುಷ್ಟಗಿ ಪಟ್ಟಣದ ಸಾರ್ವಜನಿಕರಲ್ಲಿ ಅಚ್ಚರಿ ಹುಟ್ಟಿಸಿದ್ದು ಎಂತಹ ವಿಚಿತ್ರ ಸಾವು ಎಂದು ಶೋಕ ವ್ಯಕ್ತಪಡಿಸಿದ್ದಾರೆ.
ಮೃತರು ಕುಷ್ಟಗಿ ಆರೋಗ್ಯ ಇಲಾಖೆಯ ಆರೋಗ್ಯ ಶಿಕ್ಷಣಾಧಿಕಾರಿ ಸೋಮಶೇಖರ್ ಮೇಟಿ ಸೇರಿದಂತೆ ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಯಲಬುರ್ಗಾ ತಾಲೂಕಿನ ಅವರ ಜಮೀನಿನಲ್ಲಿ ಅ.3ರ ಮಂಗಳವಾರ ಮದ್ಯಾಹ್ನ 1 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ