Kushtagi: ದುಷ್ಕರ್ಮಿಗಳಿಂದ ವ್ಯಕ್ತಿಯ ಹತ್ಯೆ
Team Udayavani, Dec 10, 2023, 1:55 PM IST
ದೋಟಿಹಾಳ ( ಕುಷ್ಟಗಿ): ದುಷ್ಕರ್ಮಿಗಳು ಓರ್ವನನ್ನು ಹತ್ಯೆಗೈದು ಪರಾರಿಯಾದ ಘಟನೆ ಸಮೀಪದ ರಾಷ್ಟೀಯ 50 ಹೆದ್ದಾರಿಯ ಪಕ್ಕದ ಜಮೀನಿನಲ್ಲಿ ನಡೆದಿದೆ.
ಇಲಕಲ್ಲ ಮೂಲದ ಭೀಮರಾವ ಸುರೇಶ ಮಬ್ರುಂಕರ (32) ಕೊಲೆಯಾದ ವ್ಯಕ್ತಿಯಾಗಿದ್ದು, ಈತ ಸ್ವಂತ ಆಟೋ ಓಡಿಸುತ್ತಿದ್ದನು ಎಂದು ತಿಳಿದು ಬಂದಿದೆ.
ಸಮೀಪದ ರಾಷ್ಟೀಯ 50ಹೆದ್ದಾರಿಯ ಪಕ್ಕದಲ್ಲಿ ಶುಕ್ರವಾರ ರಾತ್ರಿ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಸಿಪಿಐ ಯಶವಂತ ಬಿಸನಳ್ಳಿ, ಪಿಎಸೈ ಮುದ್ದುರಂಗಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭೀಮರಾವ ಸುರೇಶ ಶುಕ್ರವಾರ ರಾತ್ರಿ ಇಲಕಲ್ ನಗರದಿಂದ ಬಾಡಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದು, ಶನಿವಾರ ಮಧ್ಯಾಹ್ನದವರೆಗೂ ಮನೆಗೆ ಬಂದಿರಲಿಲ್ಲ. ಕುಷ್ಟಗಿ ಕಡೆಯಿಂದ ಇಲಕಲ್ಲ ಬರುವ ಪರಿಚಯಸ್ಥರೊಬ್ಬರು ಭೀಮರಾವ ಸುರೇಶ ಅವರ ಮನೆಗೆ ಕರೆ ಮಾಡಿ ನಿಮ್ಮ ಆಟೋ ಇಲ್ಲಿ ನಿಂತಿದೆ ಎಂದು ಮಾಹಿತಿ ತಿಳಿಸಿದರು. ಆ ಕ್ಷಣ ಮನೆಯವರು ಆ ಸ್ಥಳಕ್ಕೆ ಹೋಗಿದ್ದು, ಆಗಲೇ ಭೀಮರಾವ ಸುರೇಶ ಕೊಲೆಯಾಗಿದ್ದು ಗೊತ್ತಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
MUST WATCH
ಹೊಸ ಸೇರ್ಪಡೆ
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!