ಕುಷ್ಟಗಿ: ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ
Team Udayavani, Oct 10, 2022, 9:32 AM IST
ಕುಷ್ಟಗಿ: ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಹಾಗೂ ಕುಷ್ಟಗಿ ತಾಲೂಕಿನ ಮಾಲಗಿತ್ತಿ ಗಡಚಿಂತಿ ಮೊದಲಾದ ಗ್ರಾಮಗಳ ಗ್ರಾಮಸ್ಥರನ್ನು ನಿದ್ದೆಗೆಡಿಸಿದ್ದ ಗಂಡು ಚಿರತೆ ಮಾಲಗಿತ್ತಿ ಅರಣ್ಯ ಪ್ರದೇಶದ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಸೆರೆಯಾಗಿದೆ.
ಈ ಚಿರತೆ ಊರಿನ ನಾಯಿ, ಹಸು ತಿಂದು ಹಾಕಿ ಗ್ರಾಮಸ್ಥರಲ್ಲಿ ಭಯ ಸೃಷ್ಟಿಸಿತ್ತು. ಇದರ ಹಾವಳಿಗೆ ಮಾಲಗಿತ್ತಿ, ಗಡಚಿಂತಿ, ನಾಗೇಂದ್ರಗಡ ಸುತ್ತಮುತ್ತಲಿನ ಗ್ರಾಮಸ್ಥರು ಕಂಗೆಟ್ಟಿದ್ದರು. ಈ ಹಿನ್ನೆಲೆಯಲ್ಲಿ ದನಗಾಯಿ, ಕುರಿಗಾಯಿಗಳು ಅರಣ್ಯ ಪ್ರದೇಶದಲ್ಲಿ ಕುರಿ, ದನ ಮೇಯಿಸುವುದಕ್ಕೆ, ರೈತರು ಒಬ್ಬಂಟಿಯಾಗಿ ಜಮೀನುಗಳಿಗೆ ಹೋಗುವುದಕ್ಕೂ ಜೀವ ಭಯ ಸೃಷ್ಟಿಸಿತ್ತು.
ಈ ಹಿನ್ನೆಲೆಯಲ್ಲಿ ಕಳೆದ ಶನಿವಾರ ನಾಗೇಂದ್ರಗಡ, ಗಡಚಿಂತಿ, ಮಾಲಗಿತ್ತಿ ಗುಡ್ಡದಲ್ಲಿ ಚಿರತೆ ಬೋನಿನ ವ್ಯವಸ್ಥೆ ಮಾಡಿದ್ದರು. ಬೋನು ಇಟ್ಟು ಮೂರು ದಿನಗಳಲ್ಲಿ ಚಿರತೆ ಸೆರೆಯಾಗಿದ್ದು, ಬಹು ದಿನಗಳ ಆತಂಕ ನಿವಾರಣೆಯಾಗಿದೆ.
ಈ ಚಿರತೆ ಸೆರೆಯಾಗಿಸಲು ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಚೈತ್ರಾ ಮೆಣಸಿನಕಾಯಿ, ಉಪ ವಲಯ ಅರಣ್ಯಾಧಿಕಾರಿ ಲಾಲ್ ಸಾಬ್ ಸೂಳಿಬಾವಿ, ಅರಣ್ಯ ರಕ್ಷಕ ಕಳಕಪ್ಪ ಬ್ಯಾಳಿ ಶಂಕರಗೌಡ ಅಕ್ಕೇರೆ ಹಾಗೂ ವಾಸ ಸ್ಥಳದ ಮಾಯಪ್ಪ ಶೇಖಪ್ಪ ದೇವಪ್ಪ ಇವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಈ ಕುರಿತು ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಚೈತ್ರಾ ಮೆಣಸಿನಕಾಯಿ ಉದಯವಾಣಿ ಪ್ರತಿನಿಧಿಯೊಂದಿಗೆ ಪ್ರತಿಕ್ರಿಯಿಸಿ, ಮಾಲಗಿತ್ತಿ ಗುಡ್ಡದಲ್ಲಿ ಸೆರೆ ಸಿಕ್ಕ ಚಿರತೆ ವಯಸ್ಕ ಚಿರತೆಯಾಗಿದ್ದು, ಅಂದಾಜು ಐದಾರು ವರ್ಷಗಳ ಚಿರತೆಯಾಗಿದೆ. ಈ ಚಿರತೆಯನ್ನು ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ಸುರಕ್ಷಿತ ಪ್ರದೇಶಕ್ಕೆ ಸಾಗಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ