ಕುಷ್ಟಗಿ: ಅತಿಕ್ರಮಣ ಕಟ್ಟಡಗಳ ತೆರವು ; ಬೀದಿ ಬದಿ ವ್ಯಾಪಾರಸ್ಥರಿಂದ ವಿರೋಧ
Team Udayavani, Jan 4, 2022, 4:00 PM IST
ಕುಷ್ಟಗಿ: ಕುಷ್ಟಗಿ ಪಟ್ಟಣ ವ್ಯಾಪ್ತಿಯ ಮುಖ್ಯರಸ್ತೆಯಲ್ಲಿ ಅತಿಕ್ರಮಣಗೊಂಡಿರುವ ಕಟ್ಟಡಗಳ ಜೆಸಿಬಿಯೊಂದಿಗೆ ತೆರವು ಕಾರ್ಯಾಚರಣೆಗೆ ಇಳಿದ ಪುರಸಭೆ ನಡೆಗೆ ಸ್ಥಳೀಯ ಬೀದಿಯ ವ್ಯಾಪಾರಸ್ಥರಿಂದ ವಿರೋಧ ವ್ಯಕ್ತವಾಯಿತು.
ಪುರಸಭೆ ಮುಖ್ಯಾಧಿಕಾರಿ ಉಮೇ ಶ ಹಿರೇಮಠ, ಪಿಎಸೈ ತಿಮ್ಮಣ್ಣ ನಾಯಕ ನೇತೃತ್ವದಲ್ಲಿ ದಲ್ಲಿ ಏಕಾಏಕಿ ಕಾರ್ಯಚರಣೆಗೆ ತಬ್ಬಿಬ್ಬಾದ ಬೀದಿ ಬದಿ ವ್ಯಾಪಾತಸ್ಥರು ಹಾಗೂ ಗೂಡಂಗಡಿಕಾರರು ವಿರೋಧ ವ್ಯಕ್ತಪಡಿಸಿರಲ್ಲದೇ ತರಾಟೆಗೆ ತೆಗೆದುಕೊಂಡಾಗ ಗೊಂದಲದ ಪರಿಸ್ಥಿಗೆ ಕಾರಣವಾಯಿತು.
ಒಂದೆಡೆ ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತಿನ ಕಾರ್ಡ, ಸಾಲ ಸೌಲಭ್ಯ ನೀಡುವುದು ಒಂದೆಡೆಯಾದರೆ ಇನ್ನೊಂದೆಡೆ ಏಕಾಏಕಿಯಾಗಿ ಬೀದಿ ಬದಿಯಿಂದ ಒಕ್ಕಲೆಬ್ಬಿಸುತ್ತೀರೆಂದು ಪ್ರಶ್ನಿಸಿದ ಬೀದಿಬದಿ ವ್ಯಾಪಾರಸ್ಥರು ಇಲ್ಲಿಂದ ಕದಲುವುದಿಲ್ಲ ಪಟ್ಟು ಹಿಡಿದರು.
ಖಾಸಗಿ ಹಾಗೂ ವಕೀಲರು ನಿರ್ಮಿಸಿರುವ ಡಬ್ಬಾ ಅಂಗಡಿ ತೆರವುಗೊಳಿಸದೇ ನಮ್ಮನ್ನೇಕೆ ತೆರವುಗೊಳಿಸುತ್ತಿರಿ? ನಮಗೊಂದು ನ್ಯಾಯ ಅವರಿಗೊಂದು ನ್ಯಾಯ? ಎಂದು ಆಕ್ರೋಶ ಹೊರ ಹಾಕಿದರು. ಮುಖ್ಯಾಧಿಕಾರಿ ಉಮೇಶ ಹಿರೇಮಠ ಸಮಾಜಾಯಿಷಿ ನೀಡಿ, ಮುಖ್ಯರಸ್ತೆಗಳ ಅಗಲ 80 ಅಡಿ ಮಿತಿ ಇದೆ. ರಸ್ತೆಯ ಅತಿಕ್ರಮಿತ ಕಟ್ಟಡ ತೆರವುಗೊಳಿಸುವುದು ಅನಿವಾರ್ಯವಾಗಿದೆ. ಬೀದಿ ಬದಿ ವ್ಯಾಪಾರಸ್ಥರಿಗೆ ಸಂತೆ ಮೈದಾನದಲ್ಲಿ ಅವಕಾಶವಿದೆ. ಬದಲಿಗೆ ಪುಟ್ ಪಾತ್ ನಲ್ಲಿ ಅವಕಾಶವಿಲ್ಲ ಸ್ಪಷ್ಟಪಡಿಸಿದರು. ಈಗಾಗಲೇ ಅತಿಕ್ರಮಿತ ಕಟ್ಟಡ ತೆರವುಗೊಳಿಸಲು ಅವಕಾಶ ನೀಡಿದ್ದರೂ ತೆರವುಗೊಳಿಸಿಲ್ಲ. ಹೀಗಾಗಿ ಕಾರ್ಯಾಚರಣೆಗೆ ಮುಂದಾಗಿದ್ದು, ತಾವೇ ತೆರವುಗೊಳಿಸುವುದಾದಲ್ಲಿ ಅಂತಹುಗಳಿಗೆ ತೆರವಿಗೆ ಅವಕಾಶ ಕಲ್ಪಿಸಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ