ಕೊರೊನಾ ಭೀತಿಯಲ್ಲಿ ನೀರಿನ ಸಮಸ್ಯೆಯಾಗದಿರಲಿ
Team Udayavani, Apr 7, 2020, 3:07 PM IST
ಕುಷ್ಟಗಿ: ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಅಧ್ಯಕ್ಷತೆಯಲ್ಲಿ ಕೊರೊನಾ ಜಾಗೃತಿ ಹಾಗೂ ನೀರಿನ ಸಮಸ್ಯೆ ನಿರ್ವಹಣೆ ಸಭೆ ನಡೆಯಿತು.
ಕುಷ್ಟಗಿ: ಕೊರೊನಾ ವೈರಸ್ ಭೀತಿಯ ಸಂಕಷ್ಟದ ಪರಿಸ್ಥಿತಿಯಲ್ಲಿ ಬೇಸಿಗೆಯ ಕುಡಿಯುವ ನೀರಿನ ಸಮಸ್ಯೆ ನಿಭಾಯಿಸಲು ಖಾಸಗಿ ಕೊಳವೆಬಾವಿಗಳಿಂದ ನೀರು
ಪೂರೈಸುವುದು ಮೊದಲಾದ್ಯತೆಯಾಗಿರಬೇಕು ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಹೇಳಿದರು.
ಇಲ್ಲಿನ ತಾಪಂ ಸಭಾಂಗಣದಲ್ಲಿ ಕೊರೊನಾ ವೈರಸ್ ಜಾಗೃತಿ ಹಾಗೂ ಬೇಸಿಗೆಯಲ್ಲಿ ಕುಡಿಯುವ ನೀರಿನ ಕುರಿತು ನಡೆದ ತುರ್ತುಸಭೆಯಲ್ಲಿ ಗ್ರಾಪಂ ಪಿಡಿಒಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಬೇಸಿಗೆ ಆರಂಭವಾಗಿದ್ದು, ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿಕೊಂಡು ಸಮಸ್ಯೆ ನಿಭಾಯಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ಸ್ವಯಂ ಸೇವೆ: ಕೊರೊನಾ ವೈರಸ್ ಸಮುದಾಯಿಕವಾಗಿ ಹರಡದಂತೆ ಗ್ರಾಪಂ ಪಿಡಿಒ ಸ್ವಯಂ ಸೇವೆ ಎಂದು ಕಾರ್ಯ
ನಿರ್ವಹಿಸಬೇಕಿದೆ. ಹೊರ ಜಿಲ್ಲೆ, ರಾಜ್ಯಗಳಿಂದ ವಲಸೆ ಹೋಗಿ ಸ್ವಗ್ರಾಮಕ್ಕೆ ವಾಪಸ್ಸಾದವರು, ವಿದೇಶದಿಂದ ಸ್ವಗ್ರಾಮಕ್ಕೆ ಬಂದವರು ಗ್ರಾಮಗಳಲ್ಲಿ ಅನಗತ್ಯವಾಗಿ ಸಂಚರಿಸದಂತೆ ನಿಗಾವಹಿಸಬೇಕು. ಪ್ರತಿ ಗ್ರಾಮಗಳಲ್ಲೂ ಸ್ವತ್ಛತೆ ಮುಖ್ಯವಾಗಿದ್ದು, ಚರಂಡಿಗಳಲ್ಲಿ ಕ್ರಿಮಿನಾಶಕವನ್ನು ರೈತರು ಬಳಸುವ
ಸ್ಪ್ರೆಯರ್ದಿಂದ ಬಳಸಿದರೆ ಪರಿಣಾಮಕಾರಿ. ಸದ್ಯದ ಕೊರೊನಾ ಪರಿಸ್ಥಿತಿಯಲ್ಲಿ ಸಭೆ ಜಿಪಂ ಸಿಇಒ ಸಭೆ ಕರೆಯುವುದು ಸಾದ್ಯತೆ ಕಡಿಮೆ. ಹೀಗಾಗಿ ಕುಡಿಯುವ ನಿರಿನ ಸಮಸ್ಯೆ ನಿರ್ವಹಣೆಗಾಗಿ ಪ್ರತ್ಯೇಕವಾಗಿ ತಾಲೂಕಿನ 7 ಜಿಪಂ ಸದಸ್ಯರ ಸಭೆ ಆಯೋಜಿಸಿ ಬಳಕೆಯಾಗದ ಅನುದಾನವನ್ನು ಬಳಸಿಕೊಂಡರೆ ಈಗಿನ ಪರಿಸ್ಥಿತಿಯಲ್ಲಿ ಪ್ರತಿ ಗ್ರಾಪಂಗೆ 50 ಸಾವಿರ ರೂ. ಹಂಚಿಕೆಯಾದರೂ ಎಷ್ಟೋ ಅನುಕೂಲವಾಗಲಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಗತ್ಯ
ಕ್ರಮಗಳನ್ನು ಕೈಗೊಳ್ಳಲು ಸಾದ್ಯವಾಗುತ್ತದೆ ಎಂದರು.
ಜಿಪಂ ಸದಸ್ಯರಾದ ಕೆ. ಮಹೇಶ, ಭೀಮಣ್ಣ ಅಗಸಿಮುಂದಿನ, ಹನುಮಗೌಡ ಪಾಟೀಲ, ತಾಪಂ ಇಒ ಕೆ. ತಿಮ್ಮಪ್ಪ, ನರೇಗಾ ಸಹಾಯಕ ನಿರ್ದೇಶಕ ಅರುಣಕುಮಾರ ದಳವಾಯಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ