ಕುಷ್ಟಗಿ: ಅಕ್ಕ- ತಮ್ಮನಿಗೆ ಹುಚ್ಚು ನಾಯಿ ಕಡಿತ; ಗ್ರಾಮಸ್ಥರಲ್ಲಿ ಭೀತಿ
Team Udayavani, Dec 11, 2022, 10:36 AM IST
ಸಾಂದರ್ಭಿಕ ಚಿತ್ರ
ಕುಷ್ಟಗಿ: ತಾಲೂಕಿನ ತೆಗ್ಗಿಹಾಳ ಗ್ರಾಮದಲ್ಲಿ ಭಾನುವಾರ ಬೆಳ್ಳಂ ಬೆಳಗ್ಗೆ ಅಕ್ಕ- ತಮ್ಮನಿಗೆ ಹುಚ್ಚು ನಾಯಿ ಕಡಿದು ಗಾಯಗೊಳಿಸಿದ್ದು, ಗ್ರಾಮದಲ್ಲಿ ಆತಂಕ ಮೂಡಿಸಿದೆ.
ಬಾಲಕ ನಾಗರಾಜ ಕತ್ತಿ ಹಾಗೂ ಅವರ ಅಕ್ಕ ಮಲ್ಲಮ್ಮ ಎಂಬವರಿಗೆ ಹುಚ್ಚು ನಾಯಿ ಕಚ್ಚಿ ಗಾಯಗೊಳಿಸಿದೆ.
ಬಹಿರ್ದೆಸೆಗೆ ಹೋಗಿ ಬರುತ್ತಿದ್ದ ನಾಗರಾಜನಿಗೆ ನಾಯಿ ಹಿಂದಿನಿಂದ ಬಂದು ಕಚ್ಚಿದ್ದು, ಇದನ್ನು ತಡೆಯಲು ಹೋದ ಅಕ್ಕ ಮಲ್ಲಮ್ಮಳ ಕೈಗೂ ಬಲವಾಗಿ ಕಚ್ಚಿದೆ. ಇದಕ್ಕೂ ಮುನ್ನ ಮುತ್ತಣ್ಣ ಕುರಿ ಎಂಬವರ ಸಾಕು ನಾಯಿ ಮರಿಯನ್ನು ಕಚ್ಚಿ ಗಾಯಗೊಳಿಸಿರುವುದು ಗ್ರಾಮದಲ್ಲಿ ಆತಂಕಕ್ಕೀಡು ಮಾಡಿದೆ.
ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ ಹುಚ್ಚು ನಾಯಿ ಕಣ್ಮರೆಯಾಗಿದ್ದು, ಸ್ಥಳೀಯರು ಹುಡುಕಾಟ ತೀವ್ರಗೊಳಿಸಿದ್ದಾರೆ. ಗಾಯಗೊಂಡವರನ್ನು ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ