Kushtagi: ವಸತಿ ನಿಲಯ ವಿದ್ಯಾರ್ಥಿಗಳೊಂದಿಗೆ ಅಡುಗೆ ಸಹಾಯಕ ಕಿರಿಕ್
ನ್ಯಾಯಕ್ಕಾಗಿ ಠಾಣೆಗೆ ಮೊರೆ ಹೋದ ವಿಧ್ಯಾರ್ಥಿಗಳು
Team Udayavani, Feb 17, 2024, 10:31 PM IST
ಕುಷ್ಟಗಿ: ಇಲ್ಲಿನ ತಹಶೀಲ್ದಾರ ಕಚೇರಿಂದ ಕೂಗಳತೆಯ ದೂರದಲ್ಲಿರುವ ಮೆಟ್ರಿಕ್ ನಂತರ ಪರಿಶಿಷ್ಟ ವರ್ಗದ ವಿದ್ಯಾರ್ಥಿ ವಸತಿ ಹೊರಗಿನವರ ಟಾರ್ಚರ್ ಗೆ ಹೆದರಿ ಪೊಲೀಸ್ ಠಾಣೆಯ ಮೊರೆ ಹೋದ ಘಟನೆ ಶನಿವಾರ ಸಂಜೆ ನಡೆದಿದೆ.
ಮೆಟ್ರಿಕ್ ನಂತರದ ಪರಿಶಿಷ್ಟ ವರ್ಗ ವಿದ್ಯಾರ್ಥಿ ವಸತಿ ನಿಲಯದಲ್ಲಿ ಸದ್ಯ 75ರಿಂದ 100ರವರೆಗೆ ಮಿತಿಯಲ್ಲಿ ವಿದ್ಯಾರ್ಥಿಗಳಿದ್ದಾರೆ.ನಾಲ್ವರು ಅಡುಗೆಯವರು, ಇಬ್ಬರು ಸಹಾಯಕರು, ಓರ್ವ ಮೇಲ್ವಿಚಾರಕರು ಸೇವೆಯಲ್ಲಿದ್ದಾರೆ. ಇತ್ತೀಚಿಗೆ ಸ್ಥಳೀಯ ಸಹಾಯಕ ಹಾಗೂ ವಿದ್ಯಾರ್ಥಿಗಳೊಂದಿಗೆ ಕಿರಿಕ್ ಶುರುವಾಗಿದೆ. ಆ ಕಿರಿಕ್ ಇಷ್ಟಕ್ಕೂ ಶಮನವಾಗದೇ ಅಡುಗೆ ಸಹಾಯಕನ ಸಂಬಂಧಿಕ ಮಧ್ಯ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಟಾರ್ಚರ್ ನೀಡಲಾರಂಭಿಸಿದ್ದಾನೆ. ಇದರಿಂದ ಅಸಹನೀಯಗೊಂಡ ವಿದ್ಯಾರ್ಥಿಗಳು ಒಗ್ಗೂಡಿ ಈ ವಿಷಯವನ್ನು ಮೇಲ್ವಿಚಾರಕ ಹಾಗೂ ಪರಿಶಿಷ್ಟ ವರ್ಗದ ಕಲ್ಯಾಧಿಕಾರಿಯ ಗಮನಕ್ಕೆ ತಂದರೂ ಪ್ರಯೋಜನೆ ಆಗಿರಲಿಲ್ಲ.
ಅಡುಗೆ ಸಹಾಯಕ ಸಿಬ್ಬಂದಿಯ ಸಂಬಂಧಿಕ ವಿದ್ಯಾರ್ಥಿಗಳಿಗೆ ಜೀವ ಬೆದರಿಕೆ ಹಾಕಿದ್ದಾರೆನ್ನುವುದು ವಿಧ್ಯಾರ್ಥಿಗಳ ಆರೋಪ. ಅಡುಗೆಯವರಿಗೆ ಸರಿಯಾಗಿ ಅಹಾರ ತಯಾರಿಸುತ್ತಿಲ್ಲ ಆಕ್ಷೇಪಕ್ಕೆ ವಸತಿ ನಿಕಯದ ಅಡುಗೆಯವರು ಹೊರಗಿನ ಸ್ಥಳೀಯ ವ್ಯಕ್ತಿಯನ್ನೇ ಬೆಂಬಲಿಸುತ್ತಿದ್ದಾರೆ. ಯಾವ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ಮೇಲೆ ಯಾವೂದೇ ರೀತಿಯಲ್ಲಿ ಅಟ್ಯಾಕ್ ಆಗಬಹುದೆಂಬ ಭೀತಿಗೆ ವಿದ್ಯಾರ್ಥಿಗಳು ಪೊಲೀಸ್ ಠಾಣೆಗೆ ಆಗಮಿಸಿದ್ದರು.
ಪಿಎಸೈ ಮುದ್ದುರಂಗಸ್ವಾಮಿ ಅವರಲ್ಲಿ ವಾಸ್ತವ ಸ್ಥಿತಿ ಗಮನಕ್ಕೆ ತಂದ ವಿದ್ಯಾರ್ಥಿಗಳಿಗೆ ಪಿಎಸೈ ಮುದ್ದುರಂಗಸ್ವಾಮಿ ಅವರು, ಅಭಯ ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ಹಾಗೂ ಅಡುಗೆಯವರಿಗೆ, ಅಡುಗೆ ಸಹಾಯಕರಿಗೆ ಪರಿಶಿಷ್ಟ ವರ್ಗ ಕಲ್ಯಾಣ ಆಧಿಕಾರಿಯ ಸಮ್ಮುಖದಲ್ಲಿ ಬುದ್ದಿವಾದ ಹೇಳಿ ಕಳುಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ