Kushtagi ; ಮಹಿಳೆಯ ಮಾಂಗಲ್ಯ ಸರ ಅಪಹರಿಸಿದ ದುಷ್ಕರ್ಮಿ
Team Udayavani, Oct 10, 2023, 9:28 PM IST
ಕುಷ್ಟಗಿ: ಬೈಕಿನಲ್ಲಿ ಬಂದ ದುಷ್ಕರ್ಮಿ ಮಹಿಳೆಯ 50 ಸಾವಿರ ರೂ. ಮೌಲ್ಯದ 2 ತೊಲ ಮಾಂಗಲ್ಯ ಸರ ಅಪಹರಿಸಿರುವ ಪ್ರಕರಣ ಮಂಗಳವಾರ ಸಂಜೆ ಕುಷ್ಟಗಿ ಪಟ್ಟಣದ 4ನೇ ವಾರ್ಡ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನ ಬಳಿ ನಡೆದಿದೆ.
ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುವ ಮಹಿಳೆ ಮಂಜುಳಾ ಮಾಂಬ್ರುಕರ್ ಅವರು, ಅಯ್ಯಪ್ಪ ಸ್ವಾಮಿ ದೇವಸ್ಥಾನ ಬಳಿ ಇರುವ ತಮ್ಮ ಮನೆಗೆ ಹೋಗುತ್ತಿದ್ದರು. ಬೈಕಿನಲ್ಲಿ ಅಪರಿಚಿತ ದುಷ್ಕರ್ಮಿ ಎದುರಿಗೆ ಬಂದವನಂತೆ ಮಾಡಿ, ಪುನಃ ಬೈಕ್ ಹಿಂತಿರುಗಿಸಿಕೊಂಡು ಬಂದು ಮಹಿಳೆಯ ಕತ್ತಿನಲ್ಲಿದ್ದ ಮಾಂಗಲ್ಯ ಸರ ಕಿತ್ತುಕೊಂಡು ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದಾನೆ.
ದುಷ್ಕರ್ಮಿ ಬೈಕಿನಲ್ಲಿ ವೇಗವಾಗಿ ಹೋದ ದಿಕ್ಕಿನತ್ತ ಮಹಿಳೆ ಬೆನ್ನತ್ತಿ, ಕೂಗಿ ಜನ ಸೇರಿಸುವ ಪ್ರಯತ್ನ ಮಾಡಿದರೂ, ದುಷ್ಕರ್ಮಿ ಸಿಗದೇ ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮಾಂಗಲ್ಯ ಸರ ಅಪಹರಿಸಿದ ದುಷ್ಕರ್ಮಿ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ