ಕುಷ್ಟಗಿ ಪುರಸಭೆ ಬಜೆಟ್ ಪೂರ್ವ ಸಭೆ


Team Udayavani, Feb 6, 2023, 5:38 PM IST

kustagi

ಕುಷ್ಟಗಿ: ಕುಷ್ಟಗಿ ಪುರಸಭೆ ವ್ಯಾಪ್ತಿಯಲ್ಲಿ ನೀರು ಸರಬರಾಜು ನಿರ್ವಹಣೆಗೆ ಕೆ.ಯು.ಡಬ್ಲ್ಯೂ.ಎಸ್ ಬಿ. (ಕರ್ನಾಟಕ ನಗರ‌ ನೀರು ಸರಬರಾಜು ಒಳ ಚರಂಡಿ ಮಂಡಳಿ) ಗೆ ಪ್ರತಿ ತಿಂಗಳ 8.50 ಲಕ್ಷ ರೂ. ಪಾವತಿಸಬೇಕು. ನೀರು ಬಳಕೆದಾರರಿಂದ 1 ಲಕ್ಷ ರೂ. ಸಂಗ್ರಹವಾಗುವುದಿಲ್ಲ ಎಂದು ಪುರಸಭೆ ಅಧ್ಯಕ್ಷ ಗಂಗಾಧರಸ್ವಾಮಿ ಹಿರೇಮಠ ಕಳವಳ‌ ವ್ಯಕ್ತಪಡಿಸಿದರು.

ಇಲ್ಲಿನ ಪುರಸಭೆ ಆವರಣದಲ್ಲಿ 2023-24 ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸ್ಥಳೀಯರ ಪ್ರಶ್ನೆ ಪ್ರತಿಕ್ರಿಸಿದ ಅವರು, ಕುಷ್ಟಗಿ ಪಟ್ಟಣದಲ್ಲಿ 2 ರಿಂದ 7 ವಾರ್ಡ ಗಳಲ್ಲಿ ಕೃಷ್ಣಾ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಂಡಿದೆ. ಪ್ರಧಾನಮಂತ್ರಿ ಅಮೃತ ಯೋಜನೆಯಲ್ಲಿ 1ನೇ ವಾರ್ಡ್ ಹಾಗೂ 8 ರಿಂದ 23 ವಾರ್ಡಗಳಿಗೆ ಪೈಪಲೈನ್ ವಿಸ್ತರಿಸಲಾಗುವುದು ಎಂದ ಅವರು ನೀರು ನಿರ್ವಹಣೆಗೆ ಆದ್ಯತೆ ನೀಡಿದರು ಜನ ಸಹಕರಿಸುತ್ತಿಲ್ಲ. ನೀರು ಕಣ್ಮುಂದೆ ಪೋಲಾಗುತ್ತಿದ್ದರೂ ಸಾರ್ವಜನಿಕರು ಗಮನಿಸಿ ಬಂದ್ ಮಾಡುವುದಿಲ್ಲ. ಕುಡಿಯುವ ನೀರು ಚರಂಡಿಗೆ ಹರಿದು ಹಾಳಾಗುತ್ತಿದೆ. ಅಲ್ಲದೇ ನೀರಿನ ಕರ ಪಾವತಿಸುತ್ತಿಲ್ಲ ಸುಮಾರು 1.50 ಕೋಟಿ ನಿರೀಕ್ಷೆಯಲ್ಲಿ ಕೇವಲ 30ರಿಂದ 35 ಲಕ್ಷ ರೂ. ಜಮೆಯಾಗುತ್ತಿದೆ. 10 ವರ್ಷ, 15 ವರ್ಷ, 20 ವರ್ಷದ ಕರ ಪಾವತಿಸಲಾಗಿಲ್ಲ ಎಂದರು.

ಕುಷ್ಟಗಿ ಪಟ್ಟಣದಲ್ಲಿ 10 ಸುಲಭ ಮಾದರಿ ಶೌಚಾಲಯ ನಿರ್ಮಿಸಲಾಗಿದ್ದು ಬಳಕೆಯಾಗದ ಬಗ್ಗೆ ಪುರಸಭೆ ಅಧ್ಯಕ್ಷ ಗಂಗಾಧರಸ್ವಾಮಿ ಹಿರೇಮಠ ಪ್ರತಿಕ್ರಿಯಿಸಿ ಪ್ರತಿ ಶೌಚಾಲಯ ನಿರ್ವಹಣೆಗೆ ಪ್ರತಿ ತಿಂಗಳು 30 ಸಾವಿರ ರೂ. ನಿರ್ವಹಣೆ ಅಷ್ಟು ಮೊತ್ತಕ್ಕೆ ಸಾಲ ಮಾಡುವ ಪರಿಸ್ಥಿತಿ ಇದೆ ಎಂದರು.

ಕುಷ್ಟಗಿ ಪಟ್ಟಣದ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗಿಡಗಳನ್ನು ತೆರವು ಮಾಡಲಾಗಿದ್ದು, ಒಂದು ಗಿಡ ಕಡಿದರೆ 10 ಗಿಡ ನೆಟ್ಟು 2 ವರ್ಷದವರೆಗೂ ಪೋಷಣೆಗೆ ಅರಣ್ಯ ಇಲಾಖೆಗೆ16 ಲಕ್ಷ ರೂ ಪಾವತಿಸಲಾಗಿದೆ ಎಂದರು. ಇನ್ನುಳಿದಂತೆ ಸ್ಥಳೀಯರು ಪುರಸಭೆ ಸದಸ್ಯರು ಕುಷ್ಟಗಿ ಪಟ್ಟಣ ಅಭಿವೃದ್ಧಿ ಪೂರಕವಾಗಿ ಸಲಹೆ ನೀಡಿದರು.

ಮುಖ್ಯಾಧಿಕಾರಿ ಬಿ.ಟಿ. ಬಂಡಿ ಒಡ್ಡರ, ಉಪಾಧ್ಯಕ್ಷೆ ಹನುಮವ್ವ ಕೋರಿ, ಸದಸ್ಯರಾದ ಕಲ್ಲೇಶ ತಾಳದ್, ಸಯ್ಯದ್ ಖಾಜಾ‌ ಮೈನುದ್ದೀನ್ ಮುಲ್ಲಾ, ಬಸವರಾಜ ಬುಡಕುಂಟಿ, ವಿಜಯಲಕ್ಷ್ಮಿ ಕಟ್ಟಿಮನಿ, ಇಮಾಂಬಿ ಕಲಬುರಗಿ ಸೇರಿದಂತೆ ನಾಮನಿರ್ದೇಶಿತ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.