Kushtagi: ಟೋಲ್ ಫ್ರೀ ಬಗ್ಗೆ ಪ್ರಶ್ನಿಸಿದ್ದಕ್ಕೆ ಟೋಲ್ ಕಲೆಕ್ಟರ್ ಮೇಲೆ ಹಲ್ಲೆ
Team Udayavani, Aug 31, 2023, 11:31 AM IST
ಕುಷ್ಟಗಿ: ಟೋಲ್ ಫ್ರೀ ಬಗ್ಗೆ ಪ್ರಶ್ನಿಸಿದ್ದಕ್ಕೆ ಟೋಲ್ ಕಲೆಕ್ಟರ್ ಮೇಲೆ ಮನಸೋಯಿಚ್ಚೆ ಥಳಿಸಿದ ಘಟನೆ ಸಮೀಪ ಸುವರ್ಣ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ವಣಗೇರಾ ಟೋಲ್ ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಥಳಿಸಿಕೊಂಡ ಯುವಕ ಯರಗೇರಾ ಮೂಲದ ಹಿರೇಮನ್ನಾಪೂರ ನಿವಾಸಿ, ಟೋಲ್ ಕಲೆಕ್ಟರ್ ದೊಡ್ಡಬಸವ ಎಂದು ಗುರುತಿಸಲಾಗಿದೆ.
ಕಳೆದ ಆ.28ರಂದು ತಡರಾತ್ರಿ ವಣಗೇರಾ ಮಿನಿ ಗೂಡ್ಸ್ ವಾಹನದ ಟೋಲ್ ಪ್ರವೇಶ ಸಂಧರ್ಭದಲ್ಲಿ ಟೋಲ್ ಕಲೆಕ್ಟರ್ ದೊಡ್ಡಬಸವ, ವಣಗೇರಾ ಗೂಡ್ಸ್ ವಾಹನ ಪ್ರವೇಶಕ್ಕೆ ಟೋಲ್ ಫೀ ಪ್ರಸ್ತಾಪಿಸಿದ್ದಾನೆ. ಆಗ ಮಾತಿಗೆ ಮಾತು ಬೆಳೆದು ವಾಗ್ವಾದದ ಸಂದರ್ಭದಲ್ಲಿ ಅಲ್ಲಿಯೇ ಇದ್ದ ಸ್ವಾಯಿಂಗ್ ಮಿಷನ್ ನಿಂದ ವ್ಯಕ್ತಿ ಮೇಲೆ ಹೊಡೆದಿದ್ದಾರೆ.
ಈ ಪರಿಣಾಮ ದಾಳಿ ಮಾಡಿದ ವ್ಯಕ್ತಿಗೆ ರಕ್ತ- ಗಾಯಗಳಾಗಿದ್ದು ಇದರಿಂದ ಸಿಟ್ಟಿಗೆದ್ದು ಹೊರಗೆ ಎಳೆದು ಥಳಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಮಿನಿ ಗೂಡ್ಸ್ ವಾಹನ ಚಾಲಕ ಸೇರಿದಂತೆ ಆತನ ಸ್ನೇಹಿತರು, ಗುಂಪು ಕಟ್ಟಿಕೊಂಡು ದೊಡ್ಡಬಸವನನ್ನು ಹೊರಗೆ ಎಳೆದು, ಮನಸೋ ಇಚ್ಚೆ ಥಳಿಸಿರುವುದಲ್ಲದೇ, ಕಾಲಿನಿಂದ ಒದ್ದಿದ್ದಾರೆ.
ಸೆಕ್ಯೂರಿಟಿ ಗಾರ್ಡ್ ರಕ್ಷಣೆಗೆ ಬಂದರೂ ಲೆಕ್ಕಿಸದೇ ಅಟ್ಟಾಡಿಸಿ ಹೊಡೆದಿದ್ದಾರೆ. ಥಳಿಸಿರುವುದು ಟೋಲ್ ಪ್ಲಾಜಾದ ಸಿಸಿ ಟಿವಿಯಲ್ಲಿ ದಾಖಲಾಗಿದೆ.
ತೀವ್ರ ಒಳಪೆಟ್ಟಿನ ಗಾಯಗೊಂಡಿರುವ ದೊಡ್ಡಬಸವ ಕೊಪ್ಪಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬುಧವಾರ ಸ್ಥಳೀಯ ಕುಷ್ಟಗಿ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ