Kushtagi: ಗೃಹಲಕ್ಷ್ಮೀಯ ಹಣ ಬೇಕು ಬೇಕು ಎನ್ನುವವರ ಮದ್ಯೆ ಬೇಡ ಎನ್ನುವ ಅಜ್ಜಿ


Team Udayavani, Sep 1, 2023, 8:02 AM IST

2-kushtagi

ಕುಷ್ಟಗಿ: ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳನ್ನು ಪಡೆಯಲು ಜನರು ಮುಗಿಬೀಳುತ್ತಿದ್ದಾರೆ. ಅಂತಹದ್ದರಲ್ಲಿ ಇಲ್ಲೊಬ್ಬ ವೃದ್ಧೆ ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮೀ ಯೋಜನೆಯ ಫಲ ಬೇಡ ಎನ್ನುತ್ತಿದ್ದಾರೆ. ಬದುಕು ನಡೆಸಲು ಎಷ್ಟು ಬೇಕೋ ಅಷ್ಟು ಇದ್ದು ಹೆಚ್ಚಿನದ್ದು ನನಗ್ಯಾಕೆ ಎಂದು ಆ ಶಿವಶರಣೆ ಗೃಹಲಕ್ಷ್ಮೀ ಯೋಜನೆಯನ್ನು ನಯವಾಗಿ ತಿರಸ್ಕರಿಸಿದ್ದಾರೆ.

ನಿಡಶೇಸಿ ಗ್ರಾಮದ 78ರ ಇಳಿವಯಸ್ಸಿನ ಅಜ್ಜಿ ಶಿವಶರಣೆಯಾಗಿ ಸರಳ ಜೀವನ ನಡೆಸುತ್ತಿರುವ ಶಿವಮ್ಮ ಸಜ್ಜನ ಸಮಾಜಕ್ಕೆ ಮಾದರಿಯಾಗಿದ್ದಾರೆ. 50 ವರ್ಷಗಳ ಹಿಂದೆ ಸರ್ಕಾರಿ ನೌಕರ ಆಗಿದ್ದ ಪತಿಯಿಂದ ದೂರವೇ ಉಳಿದು ಗೆಜ್ಜೆಬಾವಿ ಮಠದಲ್ಲಿ ಸೇವೆ ಸಲ್ಲಿಸಿ ನಂತರ, ನಿಡಶೇಸಿ ಗ್ರಾಮದಲ್ಲಿ ಚಿಕ್ಕ ಮನೆಯಲ್ಲಿ ವಾಸವಾಗಿದ್ದಾರೆ. ಒಬ್ಬಂಟಿ ಜೀವನ ನಡೆಸುತ್ತಿರುವ ಶಿವವ್ವ ಅಜ್ಜಿಗೆ ಶಿವಶರಣರ ವಚನ ಪುಸ್ತಕಗಳು ಜೀವನ ಸಂಗಾತಿಯಾಗಿದೆ.

ಬಸವಾದಿ ಶರಣರ ಪುರಾಣ ಪ್ರವಚನ ಎಲ್ಲಿಯೇ ಜರುಗಲಿ ತಪ್ಪದೇ ಹಾಜರಾಗುವ ಸರಳ ಸ್ವಭಾವ ಹಿರಿಯ ಜೀವಿ. ಯಾರಿಂದಲೂ ಸಹಾಯ ನಿರೀಕ್ಷಿಸದ ಈ ಅಜ್ಜಿ ಸ್ಥಳೀಯ ಗ್ರಾಮ ಪಂಚಾಯತಿಯಿಂದ ಶೌಚಾಲಯ ನಿರೀಕ್ಷಿಸಿದ್ದು, ಆದರೆ ಇಲ್ಲಿಯವರೆಗೂ ಸಾದ್ಯವಾಗಿಲ್ಲ. ಹೀಗಾಗಿ ಮತ್ತೆ ಕೇಳುವುದನ್ನೇ ಬಿಟ್ಟಿದ್ದಾರೆ. ಅವರ ಜಮೀನು ನಿಡಶೇಸಿ ಕೆರೆ ಮುಳುಗಡೆಯ ಪರಿಹಾರವನ್ನು ಬ್ಯಾಂಕಿನಲ್ಲಿ ಠೇವಣಿಯಲ್ಲಿರಿಸಿದ್ದಾರೆ. ಅದರ ಬಡ್ಡಿಯ ಹಣ ಹಾಗೂ ರೇಷನ್ ಕಾರ್ಡ್ ನಿಂದ ದೊರೆಯುವ ಅಕ್ಕಿ ನಮ್ಮ ಜೀವನಕ್ಕೆ ಇಷ್ಟು ಸಾಕು ಹೆಚ್ಚಿನದು ನಮಗೇಕೆ ಬೇಕು?  ಈ ಅಜ್ಜಿ ಗೃಹಲಕ್ಷ್ಮೀ ಯ 2 ಸಾವಿರ ರೂ. ಹಣ ಒಲ್ಲೆ ಎಂದಿರುವುದು ಗಮನಾರ್ಹ ಎನಿಸಿದೆ.

ಟಾಪ್ ನ್ಯೂಸ್

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.