ನಿಲೋಗಲ್ ಗ್ರಾಮದಲ್ಲಿ ಆತಂಕದ ಛಾಯೆ
Team Udayavani, May 8, 2020, 4:46 PM IST
ಸಾಂದರ್ಭಿಕ ಚಿತ್ರ
ಕುಷ್ಟಗಿ: ತಾಲೂಕಿನ ನಿಲೋಗಲ್ ಗ್ರಾಮದ ಕೆಲವರಿಗೆ ಡಾಣಕಶಿರೂರು ಜೊತೆಗಿನ ಸಂಪರ್ಕ ತಾಲೂಕಿನಾದ್ಯಂತ ಆತಂಕ ಮೂಡಿಸಿದೆ. ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಡಾಣಕಶಿರೂರಿಗೆ ಹೋಗಿ ಬಂದ ಹಿನ್ನೆಲೆಯಲ್ಲಿ ನಿಲೋಗಲ್ ಗ್ರಾಮದ ಇಬ್ಬರು ಆಟೋ ಚಾಲಕರು, 8 ಮಕ್ಕಳು ಸೇರಿದಂತೆ ಒಟ್ಟು 18 ಜನ ದ್ವಿತೀಯ ಸಂಪರ್ಕದ ಹಿನ್ನೆಲೆಯಲ್ಲಿ ನಿಡಶೇಸಿ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಏ. 4ರಂದು ಕ್ವಾರಂಟೈನ್ ಮಾಡಲಾಗಿತ್ತು. ದ್ವಿತೀಯ ಸಂಪರ್ಕದಲ್ಲಿ ನಿಲೋಗಲ್ 18 ಜನರನ್ನು ಬುಧವಾರ ರಾತ್ರಿ ನಿಡಶೇಸಿ ಕ್ವಾರಂಟೈನ್ನಿಂದ ಕೊಪ್ಪಳದ ಖಾಸಗಿ ಹೋಟೆಲ್ಗೆ ಸ್ಥಳಾಂತರಿಸುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಹಿನ್ನೆಲೆ: ಮೇ 2ರಂದು ನಿಲೋಗಲ್ ಗ್ರಾಮದ 18 ಜನರು, ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಡಾಣಕಶಿರೂರಿನ ಗರ್ಭಿಣಿ ಮನೆಯ ಪಕ್ಕದಲ್ಲಿ ಆಯೋಜಿಸಿದ್ದ ಮದುವೆಗೆ ತೆರಳಿದ್ದರು. ಮದುವೆ ರದ್ದಾದ ಹಿನ್ನೆಲೆಯಲ್ಲಿ ಗರ್ಭಿಣಿ ಮನೆಯಲ್ಲಿ ಉಳಿದುಕೊಂಡಿದ್ದರು. ಈ ಜನರು ಮೇ 3ರಂದು ನಿಲೋಗಲ್ ಗ್ರಾಮಕ್ಕೆ ವಾಪಸ್ಸಾಗಿದ್ದರು. ಈ ಜನರು ನಿಲೋಗಲ್ ಗ್ರಾಮಕ್ಕೆ ಹಿಂತಿರುಗಿದ ದಿನವೇ ಡಾಣಕಶಿರೂರು ಗ್ರಾಮದ ಗರ್ಭಿಣಿಗೆ ಸೋಂಕು ದೃಢವಾಗಿತ್ತು.
ನಿಲೋಗಲ್ ಗ್ರಾಮದ 18 ಜನರ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ. ಪರೀಕ್ಷೆಯ ವರದಿ ನಿರೀಕ್ಷೆಯಲ್ಲಿದ್ದೇವೆ. ಯಾವುದೇ ಕಾರಣಕ್ಕೂ ಆತಂಕ ಪಡುವುದು ಅಗತ್ಯವಿಲ್ಲ.
ಎಂ. ಸಿದ್ದೇಶ, ತಹಶೀಲ್ದಾರ್
ಡಾಣಕಶಿರೂರು ಗ್ರಾಮಕ್ಕೆ ಹೋಗಿ ವಾಪಸ್ ಬಂದ ನಿಲೋಗಲ್ ಗ್ರಾಮದ 18 ಜನ, ತಮ್ಮ ತಮ್ಮ ಮನೆಯಲ್ಲಿ ಒಂದು ರಾತ್ರಿ ಕಳೆದಿದ್ದಾರೆ. ಈ ವಿಷಯ ಹನುಮಸಾಗರ ಪಿಎಸ್ಐ ಅಮರೇಶ ಹುಬ್ಬಳ್ಳಿ ಅವರ ಗಮನಕ್ಕೆ ಬರುತ್ತಿದ್ದಂತೆ, ಈ ಎಲ್ಲರನ್ನು ಬಲವಂತವಾಗಿ ನಿಡಶೇಸಿಯಲ್ಲಿ ಕ್ವಾರಂಟೈನ್ ಮಾಡಿಸಿದ್ದಾರೆ.
ಮಹಾಂತೇಶ ಶೆಟ್ಟರ,
ಗ್ರಾಮಸ್ಥ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ