ಕುಷ್ಟಗಿ: ಬಸ್ ಸೇವೆ ಕಲ್ಪಿಸುವಂತೆ ವಿದ್ಯಾರ್ಥಿಗಳಿಂದ ಪ್ರತಿಭಟನೆ


Team Udayavani, Sep 15, 2022, 1:25 PM IST

10

ಕುಷ್ಟಗಿ: ತಳವಗೇರಾ ಸರ್ಕಾರಿ ಪ್ರೌಢಶಾಲೆ ಹಾಗೂ ಆದರ್ಶ ವಿದ್ಯಾಲಯದಲ್ಲಿ ಅಭ್ಯಾಸ ಮಾಡುವ ನಿಡಶೇಸಿ ಗ್ರಾಮದ ವಿದ್ಯಾರ್ಥಿಗಳಿಗೆ ಶಾಲಾ ವೇಳೆಗೆ ಬಸ್ ಸೇವೆ ಕಲ್ಪಿಸುವಂತೆ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

70ಕ್ಕೂ ಅಧಿಕ ವಿದ್ಯಾರ್ಥಿಗಳು ಕುಷ್ಟಗಿ ಪ್ರಮುಖ ರಸ್ತೆಯಲ್ಲಿ ಬಸ್ ಬೇಕೆ ಬೇಕು ಎಂದು ಘೋಷಣೆ ಕೂಗುತ್ತಾ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕುಷ್ಟಗಿ ಘಟಕದವರೆಗೆ ಸಂಚರಿಸಿದರು. ನಂತರ ಘಟಕದ ಪ್ರವೇಶ ದ್ವಾರದಲ್ಲಿ ಧರಣಿ ನಿರತರಾಗಿ ಡಿಪೋ ವ್ಯವಸ್ಥಾಪಕ, ಜಿಲ್ಲಾ ಅಧಿಕಾರಿ ವಿರುದ್ದ ಘೋಷಣೆ ಕೂಗಿದರು.

ಕುಷ್ಟಗಿ ಘಟಕ ವ್ಯವಸ್ಥಾಪಕ ಧರಣಿ ನಿರತ ಸ್ಥಳಕ್ಕೆ ಬರುವುದು ವಿಳಂಬವಾಗುತ್ತಿದ್ದಂತೆ ವಿದ್ಯಾರ್ಥಿಗಳು ಡಿಪೋ ಒಳಗೆ ನುಗ್ಗಿದ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿ ತಡೆದರು. ಘಟಕ ವ್ಯವಸ್ಥಾಪಕ ಜಡೇಶ್ ಅವರು ವಿದ್ಯಾರ್ಥಿಗಳ ಅಹವಾಲು ಆಲಿಸಿದರು.

ಇದೇ ವೇಳೆ ವಿದ್ಯಾರ್ಥಿನಿಯರು ಮಾತನಾಡಿ, ಪ್ರತಿ ದಿನ ಕುಷ್ಟಗಿಯಿಂದ ಹನುಮಸಾಗರಕ್ಕೆ ಇರುವ ಬಸ್  ಸಂಚಾರ ವ್ಯವಸ್ಥೆಯಲ್ಲಿ ಬಸ್ಸಿನಲ್ಲಿ ಕುಷ್ಟಗಿಯಿಂದ ತಳವಗೇರಾಕ್ಕೆ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳೇ ತುಂಬಿರುತ್ತಾರೆ. ನಿಡಶೇಸಿ ವಿದ್ಯಾರ್ಥಿಗಳಿಗೆ ಕಾಲು ಇಡುವಷ್ಟು ಜಾಗ ಇರುವುದಿಲ್ಲ. ವಿದ್ಯಾರ್ಥಿಗಳು ನಿಡಶೇಸಿಯಿಂದ ತಳವಗೇರಾದ ಸರ್ಕಾರಿ ಪ್ರೌಢಶಾಲಾ ಬಹುತೇಕ ವಿದ್ಯಾರ್ಥಿಗಳಿಗೆ ಬಸ್ಸು ಇದ್ದರೂ ಇಲ್ಲದಂತಿದ್ದು ಖಾಸಗಿ ವಾಹನ ಅವಲಂಬಿಸಬೇಕಿದೆ. ನಿಡಶೇಸಿಯ ಕೆಲವು ವಿದ್ಯಾರ್ಥಿಗಳು ಜೋತು ಬಿದ್ದು ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸಬೇಕಿದೆ. ಈ ವೇಳೆ ಬಸ್ಸಿನಿಂದ ಜಾರಿ ಬಿದ್ದಿರುವ ಉದಾಹರಣೆಗಳಗವೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮೊದಲ ತರಗತಿ ತಪ್ಪುತ್ತಿದ್ದು ಶಿಕ್ಷಕರಿಂದ ಬೈಗುಳ ಕೇಳಬೇಕಾಗುತ್ತಿದೆ. ಪ್ರತಿ ದಿನ ಖಾಸಗಿ ವಾಹನಕ್ಕಾಗಿ ಪಾಲಕರು ಹಣ ನೀಡುವುದಿಲ್ಲ. ಬಸ್ ಪಾಸ್ ಮಾಡಿಸಿದರೂ ವ್ಯರ್ಥವಾಗಿದೆ ಎಂದು ಅಳಲು ತೋಡಿಕೊಂಡರು.

ಘಟಕ ವ್ಯವಸ್ಥಾಪಕ ಜಡೇಶ ಪ್ರತಿಕ್ರಿಯಿಸಿ, ಏಕಕಾಲಕ್ಕೆ ಎರಡೆರೆಡು ಬಸ್ ಗಳನ್ನು ಬಿಡಲು ಸಾದ್ಯವಿಲ್ಲ. ಸಕಾಲಿಕ ಬಸ್ ವ್ಯವಸ್ಥೆಗಾಗಿ ಅಧಿಕಾರಿಗಳನ್ನು ವಾಸ್ತವ ಸ್ಥಿತಿ ಪರಿಶೀಲನೆಗೆ ಕಳುಹಿಸಿ ಅವರು ನೀಡುವ ವರದಿ ಆಧಾರಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.