ಬೆದರು ಬೊಂಬೆ, ಉತ್ಸವ ಮೂರ್ತಿಗಳಾಗಿದ್ದೇವೆ..!


Team Udayavani, Jan 24, 2021, 2:58 PM IST

kushtagi: thaluk panchayath issue

ಕುಷ್ಟಗಿ: ತಾಲೂಕು ಪಂಚಾಯತ್‌ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯ ಸ್ಥಾನಗಳು ಕುರ್ಚಿಗೆ ಮೂಲವೇ ಹೊರತು ಅಧಿಕಾರಕ್ಕೆ ಇಲ್ಲ. ಗ್ರಾಪಂ ಸದಸ್ಯನಿಗೆ ಇರುವಷ್ಟು ಅಧಿಕಾರ, ಸಾಮರ್ಥ್ಯ ತಾಪಂ ಸದಸ್ಯರಿಗೆ ಎಲ್ಲಿದೆ?

ಇದು ತಾಪಂ ಅಧ್ಯಕ್ಷೆ ಮಹಾಂತಮ್ಮ ಕಾಶೀಮಪ್ಪ ಪೂಜಾರ ಅವರ ಪ್ರಶ್ನೆ. ತಾಪಂ ಚುನಾವಣೆಗೆ ಸ್ಪ ರ್ಧಿಸುವ ಪೂರ್ವದಲ್ಲಿ ಕ್ಷೇತ್ರದ ಜನತೆ ಹಲವು ಭರವಸೆ ನೀಡಿ, ಸದಸ್ಯರಾಗಿದ್ದೇವೆ. ಆದರೆ ಕ್ಷೇತ್ರ ಜನರ ಕನಿಷ್ಠ ಬೇಡಿಕೆ ಈಡೇರಿಸುವುದು ಅಸಾಧ್ಯದ ಮಾತಾಗಿದೆ. ಈಗಿನ ವ್ಯವಸ್ಥೆಯಲ್ಲಿ ಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಪ್ರಸ್ತಾಪಿಸಿದರೂ ಗುಡ್ಡಕ್ಕೆ ಒದರಿ ಹೊಟ್ಟೆ ಉಬ್ಬಿ ಸಾಯುವ ಪರಿಸ್ಥಿತಿ ತಾಪಂ ಸದಸ್ಯರದ್ದಾಗಿದೆ. ಕ್ರಮೇಣ ತಾಪಂ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸಿ ರದ್ದುಗೊಳಿಸುವ ಹುನ್ನಾರವೂ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಹಿಂದೆ ರಾಮಕೃಷ್ಣ ಹೆಗಡೆ ಹಾಗೂ ದೇವೇಗೌಡರ ಕಾಲದಲ್ಲಿ ತಾಪಂ ವ್ಯವಸ್ಥೆಗೆ ಇದ್ದ ಗಟ್ಟಿತನ ಈಗಿಲ್ಲ. ಇದೇ ಪರಿಸ್ಥಿತಿ ಮುಂದುವರಿಯುವಂತಾದರೆ ತಾಪಂ ವ್ಯವಸ್ಥೆ ತೆಗೆಯುವುದೇ ಲೇಸು ಎನಿಸುತ್ತಿದೆ. ಪಂಚಾಯತ್‌ ರಾಜ್‌ ಅಧಿ ಕಾರ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ತಾಪಂ ಎಂದರೆ ಸರ್ಕಾರ, ವಿಧಾನಸಭೆ ಸದಸ್ಯರು, ಜಿಪಂ ಸದಸ್ಯರು ಹಾಗೂ ಗ್ರಾಪಂ ಸದಸ್ಯರಿಗೆ ಸಂಪರ್ಕ ಕೊಂಡಿ ಇದ್ದಂತೆ ಗ್ರಾಮೀಣ ಮಟ್ಟದ ಸಮಸ್ಯೆಗಳನ್ನು ತಾಲೂಕು ಮಟ್ಟದಲ್ಲಿ ಚರ್ಚಿಸಿ ಜಿಲ್ಲೆ ಹಾಗೂ ಸರ್ಕಾರದ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಆದರೆ ಅ ಧಿಕಾರ ಹೆಸರಿಗೆ ಮಾತ್ರ ಎನ್ನುವುದಾದರೆ ಹುದ್ದೆಗೆ ಕಿಮ್ಮತ್ತಿಲ್ಲ. ತಾಪಂ ವ್ಯವಸ್ಥೆಯನ್ನು ಹೈಜಾಕ್‌ ಮಾಡಿರುವುದರಿಂದ ತಾಪಂ ಸದಸ್ಯರೆಂದರೆ ಅಧಿ ಕಾರಿಗಳಿಗೆ ಬೆದರು ಬೊಂಬೆ, ಸಭೆಯಲ್ಲಿ ಉತ್ಸವಮೂರ್ತಿಗಳಾಗಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ:ಬೇಕೀಗ ತಾಪಂ ಬಲವರ್ಧನೆಗೆ ಚಿಂತನೆ

ತಾಪಂ ಉಳಿಸುವುದಾದರೆ ನಮ್ಮ ಅಭ್ಯಂತರವಿಲ್ಲ. ವಾರ್ಷಿಕವಾಗಿ ತಾಪಂಗೆ 5ರಿಂದ 6 ಕೋಟಿ ಅನುದಾನ ನೀಡಬೇಕು. ತಾಪಂ ಅಧ್ಯಕ್ಷರಿಗೆ ಚೆಕ್‌, ಲಾಗಿನ್‌ ಪವರ್‌ ನೀಡಬೇಕಿದೆ. ಆದರೆ ಈಗಿನ ವ್ಯವಸ್ಥೆಯಲ್ಲಿ ನಿರ್ಬಂಧಿ ತ ಅನುದಾನ, ಅನಿರ್ಬಂಧಿ ತ ಅನುದಾನ, 12 ಹಾಗೂ 13ನೇ ಹಣಕಾಸು ಯೋಜನೆಗಳಲ್ಲಿ ರಸ್ತೆಗೆ ಮರಂ ಮಣ್ಣು, ಪೈಪ್‌ಲೈನ್‌, ಸುಣ್ಣಬಣ್ಣ ಇವಿಷ್ಟಕ್ಕೆ ಸೀಮಿತವಾಗಿದೆ. ಈ ಯೋಜನೆಗಳಿಗೆ ಅನುದಾನ ಹೆಚ್ಚಿದ್ದರೆ ಸಮರ್ಪಕವಾಗಿ ಅಭಿವೃದ್ಧಿ ಕೆಲಸ ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಿದೆ ಎನ್ನುವ ಅಭಿಪ್ರಾಯ ಹಂಚಿಕೊಂಡರು.

ನರೇಗಾ ಯೋಜನೆಯಡಿ ಗ್ರಾಪಂಗೆಕೋಟ್ಯಂತರ ಅನುದಾನ ಬರುತ್ತಿದೆ ಆದರೆ ತಾಪಂಗೆ ಏನಿದೆ? ಆತ್ಮಸಾಕ್ಷಿಯಾಗಿ ಪ್ರಶ್ನಿಸಿಕೊಳ್ಳುವಂತಾಗಿದೆ. ನಮ್ಮ ಆಡಳಿತ ವ್ಯವಸ್ಥೆಯಲ್ಲಿ ಪಿಡಿಒ, ತಾಲೂಕು ಮಟ್ಟದ ಅಧಿ ಕಾರಿಯನ್ನು ಪ್ರಶ್ನಿಸುವ ಹಕ್ಕು ಸಹ ಕಳೆದುಕೊಂಡಿದ್ದೇವೆ. ಇಷ್ಟು ವರ್ಷಗಳ ಅ ಧಿಕಾರವ ಧಿಯಲ್ಲಿ ಹೇಳಿಕೊಳ್ಳುವಂತಹ ಕೆಲಸ ಮಾಡಲು ಸಾಧ್ಯವಾಗಿಲ್ಲ. ಯಾಕೆಂದರೆ ಸಮರ್ಪಕ ಅನುದಾನ ಇಲ್ಲ. ಅನುದಾನ ದುರುಪಯೋಗ, ಕಳಪೆ ಕಾಮಗಾರಿ ದೂರುಗಳು ಬೇಕಾದಷ್ಟಿದ್ದರೂ ಸಂಬಂಧಿ  ಸಿದ ಅಧಿಕಾರಿ ಮುಂದೆ ಪ್ರಸ್ತಾಪಿಸಿದರೂ ಪ್ರಯೋಜನ ಇಲ್ಲ.

 

ಮಂಜುನಾಥ ಮಹಾಲಿಂಗಪುರ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.