ಕುಷ್ಟಗಿಯ 5 ತಾಪಂ ಕ್ಷೇತ್ರ ರದ್ದು


Team Udayavani, Mar 26, 2021, 8:13 PM IST

Kushtagi thaluku panchayath

 ಕುಷ್ಟಗಿ: ತಾಲೂಕು ಪಂಚಾಯತ್‌ ಕ್ಷೇತ್ರಗಳ ಪುನರ್‌ ವಿಂಗಡಣೆ ಕನ್ನಡಿಯೊಳಗಿನ ಗಂಟಾಗಿದ್ದು, ರದ್ದಾಗಲಿರುವ 5 ತಾಲೂಕು ಪಂಚಾಯತ್‌ ಕ್ಷೇತ್ರಗಳ ವಿವರಣೆ ನಿಖರವಾಗಿ ತಿಳಿಯದ ಕಾರಣ ಆಂತರಿಕ ಗೊಂದಲ, ಕುತೂಹಲಕ್ಕೆ ಎಡೆಮಾಡಿದೆ. 25 ತಾಪಂ ಕ್ಷೇತ್ರಗಳು, 7 ಜಿಪಂ ಕ್ಷೇತ್ರಗಳಿರುವ ಕುಷ್ಟಗಿ ತಾಲೂಕಿನಲ್ಲಿ ತಾಪಂ ಕ್ಷೇತ್ರಗಳ ಪುನರ್‌ ವಿಂಗಡಣೆಯಲ್ಲಿ 5 ತಾಪಂ ರದ್ದಾಗಲಿದ್ದು, ಜಿಪಂ ಕ್ಷೇತ್ರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.

ಇದೀಗ ರದ್ದಾಗಲಿರುವ ತಾಪಂ ಕ್ಷೇತ್ರಗಳು ಯಾವವು ಎನ್ನುವುದು ಖಚಿತವಾಗಿಲ್ಲ. ಲಭ್ಯವಾದ ಮಾಹಿತಿಗಳ ಪ್ರಕಾರ ತಾಪಂ ಕ್ಷೇತ್ರಗಳ ಪುನರ್‌ ವಿಂಗಡಣೆಯಾಗಿರುವ ಎರಡೂ¾ರು ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ಮೂರು ಪ್ರಸ್ತಾವನೆಯಲ್ಲಿ ಅಂತಿಮ ಯಾವುದು ಎನ್ನುವುದು ಅಸ್ಪಷ್ಟ. ಸಂಬಂ ಧಿಸಿದ ಅ ಧಿಕಾರಿಗಳನ್ನು ವಿಚಾರಿಸಿದರೆಸರ್ಕಾರದತ್ತ ಬೆರಳು ಮಾಡುತ್ತಿದ್ದಾರೆ. ರದ್ದಾಗಲಿರುವ ತಾಪಂ ಕ್ಷೇತ್ರಗಳ ಮಾನದಂಡ ವಿಚಾರದಲ್ಲಿ ಸ್ಥಳೀಯ ಅ ಧಿಕಾರಿಗಳ ನಡೆ ಗೊಂದಲ ಮೂಡಿಸಿದೆ.

ಜಿಪಂ ಹಾಗೂ ತಾಪಂ ಕ್ಷೇತ್ರ ಪುನರ್‌ ವಿಂಗಡಣೆ 10 ವರ್ಷಕ್ಕೊಮ್ಮೆ ಆಗಿರುವ ಹಿನ್ನೆಲೆ ಇದೆ. 1999-2000ರಲ್ಲಿ 18 ತಾಪಂ ಕ್ಷೇತ್ರಗಳಿದ್ದವು. 2004-05ರ ಪುನರ್‌ ವಿಂಗಡಣೆಯಲ್ಲಿ ಹೊಸದಾಗಿ 4 ಪಂಚಾಯತ್‌ ಗಳು ಉದಯವಾಗಿ 22 ತಾಪಂ ಕ್ಷೇತ್ರಗಳಾಗಿದ್ದವು. ಆಗ ಹಿರೇಮನ್ನಾಪುರ ಜಿಪಂ ಕ್ಷೇತ್ರವಾಗಿ ಉದಯಿಸಿತ್ತು.

2009-10ರಲ್ಲಿ ಯಾವುದೇ ಪುನರ್‌ ವಿಂಗಡನೆಯಾಗದೇ ಕುಷ್ಟಗಿ ತಾಲೂಕಿನಲ್ಲಿ 22 ತಾಪಂ ಹಾಗೂ 6 ಜಿಪಂ ಕ್ಷೇತ್ರಗಳಾಗಿದ್ದವು. 2015ರ ಮಧ್ಯಂತರದಲ್ಲಿ ಮತ್ತೆ ಕಳಮಳ್ಳಿ, ಕುಂಬಳಾವತಿ, ಬಿಜಕಲ್‌ ತಾಪಂ ಕ್ಷೇತ್ರಗಳು ಹಾಗೂ ಯರಗೇರಾ ಜಿಪಂ ಕ್ಷೇತ್ರ ಉದಯಿಸಿದ್ದವು. 2015ರಿಂದ ಇಲ್ಲಿಯವರೆಗೂ ಕುಷ್ಟಗಿ ತಾಲೂಕಿನಲ್ಲಿ 25 ತಾಪಂ ಕ್ಷೇತ್ರಗಳು, 7 ಜಿಪಂ ಕ್ಷೇತ್ರಗಳಿವೆ. ಇದೀಗ 2021ರ ಪುನರ್‌ ವಿಂಗಡಣೆ ಸಂದರ್ಭದಲ್ಲಿ 5 ತಾಪಂ ಕ್ಷೇತ್ರಗಳು ರದ್ದಾಗಿದ್ದು, ಜಿಪಂ ಕ್ಷೇತ್ರಗಳು ಯಥಾಸ್ಥಿತಿಯಲ್ಲಿವೆ. ಇದೀಗ ರದ್ದಾಗಲಿರುವ ತಾಪಂ ಕ್ಷೇತ್ರಗಳನ್ನು ಪ್ರಕಟಿಸಿದರೆ ಅಸಮಾಧಾನ ಸ್ಫೋಟವಾಗುವ ಸಾಧ್ಯತೆ ಇದೆ.

ಈಗಾಗಲೇ ಮಾಲಗಿತ್ತಿ, ಮುದೇನೂರು ತಾಪಂ ಕ್ಷೇತ್ರಗಳು ರದ್ದಾಗದಂತೆ ಸ್ಥಳೀಯರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದು, ಕೇಸೂರು ಗ್ರಾಪಂನ್ನು ಅಡವಿಬಾವಿ ತಾಪಂ ಕ್ಷೇತ್ರದಲ್ಲಿ ಸೇರ್ಪಡೆ ಮಾಡದಂತೆ ಮನವಿ ಸಲ್ಲಿಸಲಾಗಿದೆ. ಈ ಗೊಂದಲದ ನಡುವೆಯೂ ತಾಪಂ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಯುತ್ತಿದ್ದು, ಅಂತಿಮ ನಿರ್ಧಾರ ಏನಾಗುತ್ತದೋ ಎಂಬ ಕುತೂಹಲ ಹೆಚ್ಚಿಸಿದೆ.

2011ರ ಜನಸಂಖ್ಯೆ ಪ್ರಕಾರ ಪ್ರತಿ ತಾಪಂ ಕ್ಷೇತ್ರಕ್ಕೆ 10 ಸಾವಿರ ಜನಸಂಖ್ಯೆಯ ಮಾನದಂಡ ಬದಲಿಗೆ ಶೇ. 2ರಷ್ಟು ಹೆಚ್ಚಿಸಿ 12 ಸಾವಿರ ಜನಸಂಖ್ಯೆಯಿಂದ 18 ಸಾವಿರ ಜನಸಂಖ್ಯೆ ಮಿತಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ 20 ತಾಪಂ ಕ್ಷೇತ್ರಗಳನ್ನು ಸರಿಹೊಂದಿಸುವ ಪ್ರಯತ್ನ ನಡೆಸಲಾಗಿದೆ.

 

ಮಂಜುನಾಥ ಮಹಾಲಿಂಗಪುರ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.