Kushtagi : 1 ರೂ.ಸಿಹಿ ತಿನಿಸಿಗೆ ಮೂರು ವರ್ಷದ ಬಾಲಕ ಬಲಿ
Team Udayavani, Apr 29, 2023, 4:30 PM IST
ಕುಷ್ಟಗಿ:1 ರೂ. ಸಿಹಿ ತಿನಿಸಿಗೆ ಮೂರು ವರ್ಷದ ಬಾಲಕ ಬಲಿಯಾಗಿದ್ದಾನೆ. ಮಕ್ಕಳ ಸಿಹಿ ತಿನಿಸು ಹೆಬ್ಬೆರೆಳು ಗಾತ್ರದ ಜೇಮ್ಸ್ ಗಾಜಿನ ಬಾಟಲಿ ಗಂಟಲಲ್ಲಿ ಸಿಲುಕಿ ಅಕಾಲಿಕ ಸಾವೀಗೀಡಾದ ಹೃದಯವಿದ್ರಾವಕ ಘಟನೆ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ.
ಕುಷ್ಟಗಿ ವಾರ್ಡ್ ನಂ.8 ಮದಿನಾ ಗಲ್ಲಿಯ ನಿವಾಸಿ ರಬ್ಬಾನಿ ಬಾಗೇವಾಡಿ ಅವರ ಮಗ ಮಹ್ಮದ್ ಅಹ್ಮದ್ ರಬ್ಬಾನಿ ಬಾಗೇವಾಡಿ ಎಂದು ಗುರುತಿಸಲಾಗಿದೆ. ಬಾಲಕ 1ರೂ.ಗೆ ಸಿಹಿ ತಿನಿಸು ಜೇಮ್ಸ್ ಬಾಟಲಿ ಖರೀದಿಸಿದ್ದು ಅದರ ಮುಚ್ಚಳ ಬಾಯಿಂದ ತೆಗೆಯಲು ಯತ್ನಿಸಿದ ಸಂದರ್ಭದಲ್ಲಿ ಗಂಟಲಿನ ಅನ್ನನಾಳದಲ್ಲಿ ಅಡ್ಡ ಸಿಲುಕಿ ಅಸ್ವಸ್ಥಗೊಂಡಿದ್ದ. ಪಾಲಕರಿಗೆ ಗಮನಕ್ಕೆ ಬರುತ್ತಿದ್ದಂತೆ ಕೂಡಲೇ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರಾದರೂ ಮಾರ್ಗ ಮದ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ.
ಬಾಲಕನ ದುರಂತ ಸಾವಿಗೆ ಕುಟುಂಬ ವರ್ಗ ಕಂಗಾಲಾಗಿದೆ. ಅಡಿಕೊಂಡಿದ್ದ ಮಗು ಇನ್ನಿಲ್ಲವಾಗಿರುವುದು ಕುಟುಂಬ ವರ್ಗಕ್ಕೆ ಬರಸಿಡಿಲು ಬಡಿದಂತಾಗಿದೆ.
ಕೇವಲ ಒಂದು ರೂಪಾಯಿಗೆ ಸಿಗುವ ಜೆಮ್ಸ್ ಮಕ್ಕಳಿಗೆ ಆಕರ್ಷವಾಗುತ್ತಿದ್ದು ಇದನ್ನು ತಿನ್ನಲು ಆಸೆ ಪಡುವ ಮಕ್ಕಳು ಈ ರೀತಿ ದುರ್ಮರಣಕ್ಕೀಡಾಗಿರುವುದು ವಿಷಾದಕರ ಸಂಗತಿ ಇಂತಹ ಸಿಹಿ ತಿನಿಸು, ಗುಣಮಟ್ಟ ರಹಿತ ತಿನಿಸನ್ನು ಬ್ಯಾನ್ ಮಾಡಬೇಂದು ವಾರ್ಡ್ ಸದಸ್ಯ ಸಯ್ಯದ್ ಖಾಜಾ ಮೈನುದ್ದೀನ್ ಮುಲ್ಲಾ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ