ಕುಷ್ಟಗಿ : ಅಮೃತ ಸರೋವರ ಯೋಜನೆಗೆ ತಾಲೂಕಿನ 23 ಕೆರೆಗಳು ಆಯ್ಕೆ
Team Udayavani, Jul 19, 2022, 7:35 PM IST
ಕುಷ್ಟಗಿ : 75 ನೇ ವರ್ಷದ ಆಗಸ್ಟ್ 15 ಸ್ವಾತಂತ್ರ್ಯ ಮಹೋತ್ಸವದ ಹಿನ್ನೆಲೆಯಲ್ಲಿ ಅಮೃತ ಸರೋವರ ಯೋಜನೆಯ ವ್ಯಾಪ್ತಿಯಲ್ಲಿ ಕುಷ್ಟಗಿ ತಾಲೂಕಿನ 23 ಕೆರೆಗಳನ್ನು ಆಯ್ಕೆ ಮಾಡಲಾಗಿದೆ.
ಆಗಸ್ಟ್ -15 ಸ್ವಾತಂತ್ರ್ಯ ದಿನೋತ್ಸವದ ವೇಳೆಗೆ ನಾಲ್ಕು ಸಣ್ಣ ಕೆರೆಗಳನ್ನು ಸದರಿ ಯೋಜನೆ ಅಡಿಯಲ್ಲಿ ಮಾದರಿಯಾಗಿ ಅಭಿವೃದ್ಧಿ ಪಡಿಸಲು ನಿಗದಿತ ಗುರಿ ಹೊಂದಲಾಗಿದ್ದು ಕಾಮಗಾರಿ ತ್ವರಿತಗತಿಯಲ್ಲಿ ಸಾಗಿದೆ.
ತಾಲೂಕಿನ ಕಾಟಾಪೂರ ಕೆರೆ, ಮುದೇನೂರು ಗ್ರಾಮ ಪಂಚಾಯತಿಯ ಮಾದಾಪೂರ ಕೆರೆ, ಮೆಣೆದಾಳ ಗ್ರಾಮ ಪಂಚಾಯತಿಯ ಹುಲಿಕೆರೆ ಹಾಗೂ ಗುಮಗೇರಾ ಕೆರೆ ಅಮೃತ ಸರೋವರ ಕೆರೆಗಳಾಗಿ ಅಭಿವೃದ್ಧಿಗೆ ಕೈಗೆತ್ತಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಮಂಗಳವಾರ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಪೌಜಿಯಾ ತರನ್ನುಮ್ ಅವರು, ಗುಮಗೇರಾ ಗ್ರಾಮದ ಕೆರೆಯನ್ನು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಅಮೃತ ಸರೋವರ ಕೆರೆಯನ್ನಾಗಿ ನಿರ್ಮಿಸಲು ಕ್ರಮ ಕೈಗೊಂಡಿದೆ. ಈಗಾಗಲೇ ಹೂಳೆತ್ತಲಾಗಿರುವ ಕೆರೆಯಲ್ಲಿ ಬಂಡಿಂಗ್, ಪಿಶ್ಚಿಂಗ್, ಅರಣ್ಯೀಕರಣ ಸಸಿ ನೆಡುವಿಕೆ, ಪಾದಚಾರಿ ರಸ್ತೆ ಇತ್ಯಾದಿಗಳನ್ನು ನಿಯಮಾನುಸಾರವಾಗಿ ಅನುಷ್ಠಾನಿಸುವಂತೆ ಪಂಚಾಯತ ಅಭಿವೃದ್ಧಿ ಅಧಿಕಾರಿ ಶಿವಪ್ಪ ಸುಭೇಧಾರ ಹಾಗು ತಾಂತ್ರಿಕ ಸಹಾಯಕರಿಗೆ ಸೂಚಿಸಿದರು.
ಇದೇ ವೇಳೆ ಮೆಣೆಧಾಳ ಗ್ರಾಮದ ಜಿನುಗು ಕೆರೆ, ಹುಲಿಕೆರೆಗಳನ್ನು ಅಮೃತ ಸರೋವರ ಕೆರೆಗಳನ್ನಾಗಿ ನಿರ್ಮಿಸಲು ಉದ್ದೇಶದ ಹಿನ್ನೆಲೆಯಲ್ಲಿ ಸದರಿ ಕೆರೆಗಳ ಪ್ರಗತಿಯನ್ನು ಸ್ಥಳಕ್ಕೆ ಖುದ್ದು ಭೇಟಿ ಪರಿಶೀಲಿಸಿ ಅನಗತ್ಯ ಕಾಮಗಾರಿಗಳನ್ನು ನಿರ್ವಹಿಸದಂತೆ ಎಚ್ಚರಿಸಿದರು.
ಇದನ್ನೂ ಓದಿ : ಈ ಬಾರಿ ಅದ್ಧೂರಿ ದಸರಾ ಆಚರಣೆಗೆ ನಿರ್ಧಾರ; ಮೈಸೂರು ದಸರಾ ಬ್ರ್ಯಾಂಡ್ ಸೃಜನೆ; ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ