ಹಂಚಿ ಉಣ್ಣುವುದು ಶರಣ ಸಂಸ್ಕೃತಿ


Team Udayavani, Mar 23, 2019, 10:45 AM IST

23-march-16.jpg

ಕುಷ್ಟಗಿ: ಕರೆದುಕೊಂಡು, ಹಂಚಿಕೊಂಡು ಉಣ್ಣುವುದರಿಂದ ಆರೋಗ್ಯ ಪ್ರಾಪ್ತಿಯಾಗಲಿದ್ದು, ಕದ ಹಾಕಿಕೊಂಡು ಉಣ್ಣುವುದರಿಂದ ಆರೋಗ್ಯ ದೂರವಾಗಲಿದೆ. ತಳವಗೇರಾದಲ್ಲಿ ಆಚರಿಸಿಕೊಂಡು ಬಂದಿರುವ ಈ ಬೆಳದಿಂಗಳ ಬುತ್ತಿ ಜಾತ್ರೆಯ ಸಂಪ್ರದಾಯ ಈಗಾಗಲೇ ಕರೆದುಕೊಂಡು ಉಣ್ಣುವ ಸಂಸ್ಕೃತಿ ಶರಣ ಸಂಸ್ಕೃತಿ ಎಂಬುದು ನಿರೂಪಿಸಿದೆ ಎಂದು ಬಾಳೆಹೊಸೂರು ದಿಂಗಾಲೇಶ್ವರಮಠದ ಶ್ರೀ ದಿಂಗಾಲೇಶ್ವರ ಶ್ರೀಗಳು ಹೇಳಿದರು.

ಇಲ್ಲಿನ ಆದರ್ಶ ಮಹಾವಿದ್ಯಾಲಯ ಮೈದಾನದಲ್ಲಿ ನಡೆದ ಭಾವೈಕ್ಯತೆ ಬೆಸೆಯುವ ಬೆಳದಿಂಗಳ ಬುತ್ತಿ ಜಾತ್ರೆಯಲ್ಲಿ ಅವರು ಆಶೀರ್ವಚನ ನೀಡಿದರು. ದೇಹದ ತೃಪ್ತಿಗಾಗಿ ವಿವಿಧ ತರಹದ ಅಡುಗೆಗಳಿರಬಹುದು, ಆದರೆ ಮನಸ್ಸಿನ ತೃಪ್ತಿಗಾಗಿ ಈ ರೀತಿಯಾಗಿ ಊಟ ಮಾಡುವವರು. ಮನೆಯಲ್ಲಿ ವಿವಿಧ ತರಹದ ಅಡುಗೆ ಮಾಡಿ ತಾವು ಮಾಡಿದ್ದನ್ನು ಕದ ಹಾಕಿಕೊಂಡು ಕೀಳು ಮಟ್ಟದ ಭಾವನೆಯಲ್ಲಿ ಊಟ ಮಾಡುವುದು ದೇಹದ ತೃಪ್ತಿಯಾಗಿದೆ. ಇದರಿಂದ ದೇಹ ಬಲಿಷ್ಠವಾಗುತ್ತಿದೆ, ಮನಸ್ಸು ದುರ್ಬಲವಾಗುತ್ತಿದೆ. ಅದೇ ರೀತಿ ಕದ ಹಾಕಿಕೊಳ್ಳದೇ ಕರೆದುಕೊಂಡು, ಹಂಚಿಕೊಂಡು, ಮಾತನಾಡಿಕೊಂಡು ಉಣ್ಣುವುದು ಮನಸ್ಸಿನ ತೃಪ್ತಿಗಾಗಿ ಎಂದರು.

ಅನ್ನ, ನೀರು, ಗಾಳಿ ಜಗತ್ತಿನಲ್ಲಿರುವ ಮೂರೇ ಮೂರು ಒಳ್ಳೆಯ ರತ್ನಗಳು. ಯಾವುದೇ ಕಾರಣಕ್ಕೂ ತಿನ್ನುವ ಅನ್ನ, ಕುಡಿಯುವ ನೀರು, ಉಸಿರಾಡುವ ಗಾಳಿಯನ್ನು ಕೆಡಿಸಬಾರದು. ಯಾವುದೇ ಕಾರಣಕ್ಕೂ ತಟ್ಟೆಯಲ್ಲಿರುವ ಒಂದು ಅಗುಳು ಕೆಡಿಸದಂತೆ ಸಂಕಲ್ಪಿಸಬೇಕಿದೆ. ಅನ್ನದ ಅಗಳು ಭೂಮಿಯಲ್ಲಿ ಬೆಳೆಯಲು ಆರು ತಿಂಗಳು ಕಷ್ಟಪಡಬೇಕು. ಅದೇ ಬೆಳೆದ ಅನ್ನವಾದ ಅಗಳು ಕೆಡಿಸಲು 6 ಸೆಕೆಂಡ್‌ ಸಾಕು. ಹೀಗಾಗಿ ಯಾವುದೇ ಕಾರಣಕ್ಕೂ ತಿನ್ನುವ ಅನ್ನವನ್ನು ಕೆಡಿಸುವುದಿಲ್ಲ ಎನ್ನುವ ಸಂಕಲ್ಪ ಇಂದು ಮಾಡಬೇಕಿದೆ. ತಿನ್ನುವ ಅನ್ನ ಸಾಕಷ್ಟಿದ್ದರೂ ಚೆಲ್ಲುವುದೇ ಬಹಳವಾಗುತ್ತಿದೆ.
ದೇಶಕ್ಕೆ ಬರಗಾಲ ಅನ್ನ ಕೊರತೆಯಿಂದ ಅಲ್ಲ ಚೆಲ್ಲುವುದರಿಂದ ಎಂದು ದಿಂಗಾಲೇಶ್ವರ ಶ್ರೀಗಳ ಕಳವಳ ವ್ಯಕ್ತಪಡಿಸಿದರು.

ಮೂವತ್ತನೇ ವರ್ಷಕ್ಕೆ 3 ಹೊತ್ತು, 60ನೇ ವರ್ಷಕ್ಕೆ 2 ಹೊತ್ತು, 60ರ ನಂತರ ಒಂದು ಹೊತ್ತು, 90ರ ನಂತರ ಹಣ್ಣಿನ ರಸ ಸೇವಿಸಬೇಕೆಂದು ಆರೋಗ್ಯ ಸೂತ್ರ ಹೇಳುತ್ತದೆ ಎಂದರು.

ಇದೇ ವೇಳೆ ಶರಣಬಸವೇಶ್ವರ ಜಾತ್ರೋತ್ಸವ ಸಮಿತಿಯಿಂದ ದಿಂಗಾಲೇಶ್ವರ ಶ್ರೀಗಳನ್ನು ಸನ್ಮಾನಿಸಿದರು. ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಜಿಪಂ ಸದಸ್ಯ ಕೆ. ಮಹೇಶ ಇತರರು ಭಾಗವಹಿಸಿದ್ದರು.

ಬೆಳದಿಂಗಳ ಬೆಳಕಲ್ಲಿ ಭೋಜನ
ಈ ಬುತ್ತಿ ಜಾತ್ರೆಯಲ್ಲಿ ತಳವಗೇರಾ, ತೋಪಲಕಟ್ಟಿಯ ಭಕ್ತರು ಬುತ್ತಿಗಂಟಿನೊಂದಿಗೆ ಮೆರವಣಿಗೆಯಲ್ಲಿ ಶರಣಬಸವೇಶ್ವರ ಸನ್ನಿಧಿ ಗೆ ಆಗಮಿಸಿದರು. ಅಲ್ಲಿಂದ ಬುತ್ತಿ ಜಾತ್ರೆ ನಡೆಯುವ ಬಯಲು ಸ್ಥಳದಲ್ಲಿ ಬೆಳದಿಂಗಳ ಬೆಳಕಿನಲ್ಲಿ ಎಲ್ಲರೂ ಸೇರಿ ಶರಣಬಸವೇಶ್ವರ ಮೂರ್ತಿಗೆ ಪೂಜೆ ಸಲ್ಲಿಸಿದರು. ಬಳಿಕ ಜಂಗಮ ಗಣಾರಾಧನೆ ನಂತರ ತಾವು ತಂದಿರುವ ಬುತ್ತಿಯನ್ನು ಸವಿದರು. ಊಟ ಮಾಡುವಾಗಿನ ಮನಸ್ಸಿನ ಪರಿಣಾಮದಂತೆ ರಕ್ತ ಉತ್ಪತ್ತಿಯಾಗುತ್ತಿದೆ. ಪ್ರತಿಯೊಬ್ಬರೂ ಊಟವನ್ನು ಸಮಾಧಾನದಿಂದ ಮಾಡುವುದನ್ನು ರೂಢಿಸಿಕೊಳ್ಳಬೇಕು.
ಶ್ರೀ ದಿಂಗಾಲೇಶ್ವರ ಸ್ವಾಮೀಜಿ,
ದಿಂಗಾಲೇಶ್ವರಮಠ ಬಾಲೆಹೊಸೂರು

ಊಟ ಮಾಡುವಾಗಿನ ಮನಸ್ಸಿನ ಪರಿಣಾಮದಂತೆ ರಕ್ತ ಉತ್ಪತ್ತಿಯಾಗುತ್ತಿದೆ. ಪ್ರತಿಯೊಬ್ಬರೂ ಊಟವನ್ನು ಸಮಾಧಾನದಿಂದ ಮಾಡುವುದನ್ನು ರೂಢಿಸಿಕೊಳ್ಳಬೇಕು.
 ಶ್ರೀ ದಿಂಗಾಲೇಶ್ವರ ಸ್ವಾಮೀಜಿ,
 ದಿಂಗಾಲೇಶ್ವರಮಠ ಬಾಲೆಹೊಸೂರು

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.