ಕುಷ್ಟಗಿ : ಅನುಮತಿ ಇಲ್ಲದೆ ಶೌಚಾಲಯ ತೆರವಿಗೆ ಮುಂದಾದ ಕಾರ್ಯಕರ್ತನ ಬೆವರಿಳಿಸಿದ ಮಹಿಳೆಯರು
Team Udayavani, Jun 5, 2022, 8:17 PM IST
ಕುಷ್ಟಗಿ: ಪಟ್ಟಣದ 5ನೇ ವಾರ್ಡನಲ್ಲಿ ಪುರಸಭೆ ಅನುಮತಿ ಇಲ್ಲದೇ ಮಹಿಳಾ ಶೌಚಾಲಯ ತೆರವಿಗೆ ಮುಂದಾದ ಸಾಮಾಜಿಕ ಕಾರ್ಯಕರ್ತನಿಗೆ ಮಹಿಳೆಯರು ಬುಡಕ್ಕೆ ನೀರು ಕಾಯಿಸಿದ ಘಟನೆ ನಡೆದಿದೆ.
ಪಟ್ಟಣದ 5 ವಾರ್ಡ ನಲ್ಲಿರುವ ಮಹಿಳಾ ಸಾಮೂಹಿಕ ಶೌಚಾಲಯದ ಮರ್ಯಾದೆ ಗೋಡೆ ಈಗಲೂ ಬಳಕೆ ಇದೆ. ಪುರಸಭೆ ಮುಖ್ಯಾಧಿಕಾರಿ ಅನುಮತಿ ಇಲ್ಲದೇ ಭಾನುವಾರ ರಜೆ ದಿನದಂದು, ಪುರಸಭೆ ಆಧ್ಯಕ್ಷರ ಅನುಮತಿ ಇದೆ ಎಂದು ಜೆಸಿಬಿಯಿಂದ ಶೌಚಾಲಯದ ಕಟ್ಟಡ ತೆರವಿಗೆ ಮುಂದಾಗಿದ್ದರು.
ಶೌಚಾಲಯದ ಮೂಲೆಯ ಗೋಡೆ ಒಡೆಯುತ್ತಿದ್ದಾಗ ರೊಚ್ಚಿಗೆದ್ದ ಮಹಿಳೆಯರು ಏಕಾಏಕಿ ಮುತ್ತಿಗೆ ಹಾಕಿ ಕಾರ್ಯಕರ್ತನಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು ನೀರಿಳಿಸಿದ್ದಾರೆ.
ಈ ಘಟನೆ ಹಿನ್ನೆಲೆಯಲ್ಲಿ ಜೆಸಿಬಿ ಚಾಲಕ ಹಾಗೂ ಸಾಮಾಜಿಕ ಕಾರ್ಯಕರ್ತ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಪುರಸಭೆ ಸದಸ್ಯ ಚಿರಂಜೀವಿ ಹಿರೇಮಠ ಪ್ರತಿಕ್ರಿಯಿಸಿ ಈ ಪ್ರಕರಣದಲ್ಲಿ ಪುರಸಭೆ ಅಧ್ಯಕ್ಷರ ಕುಮ್ಮಕ್ಕು ಇದ್ದು, ಸಾಮಾಜಿಕ ಕಾರ್ಯಕರ್ತ ಪುರಸಭೆ ಅಧ್ಯಕ್ಷರ ಚೇಲಾ ಆಗಿದ್ದಾನೆ.
ಶೌಚಾಲಯದ ಜಾಗೆ ಕಬಳಿಸುವ ಹುನ್ನಾರ ಇದೆ. ಈ ಪ್ರಕರಣ ಬಗ್ಗೆ ಸೋಮವಾರ ಮುಖ್ಯಾಧಿಕಾರಿಗೆ ದೂರು ಸಲ್ಲಿಸುವೆ. ಕ್ರಮ ಕೈಗೊಳ್ಳದೆ ಇದ್ದರೆ ಜಿಲ್ಲಾಧಿಕಾರಿಗೆ ದೂರು ಸಲ್ಲಿಸುವೆ ಎಂದಿದ್ದಾರೆ.
ಇದನ್ನೂ ಓದಿ : ಜೂ. 11 : ಕಾಪು ಶ್ರೀ ಹೊಸ ಮಾರಿಗುಡಿ ಜೀರ್ಣೋದ್ಧಾರದ ಮುಂಬಯಿ ಸಮಿತಿ ರಚನೆಗೆ ಪೂರ್ವಬಾವಿ ಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ