ಕುಷ್ಟಗಿ: ಬೆಳೆಹಾನಿ ಪರಿಶೀಲನೆ
Team Udayavani, Nov 22, 2021, 3:17 PM IST
ಕುಷ್ಟಗಿ: ಅಕಾಲಿಕ ಬೆಳೆ ಹಾನಿಯಿಂದ ಕುಷ್ಟಗಿ ತಾಲೂಕಿನ ಎಲ್ಲಾ ಭತ್ತದ ಬೆಳೆಗೂ ಪರಿಹಾರಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ತಿಪ್ಪೇಸ್ವಾಮಿ ಹೇಳಿದರು.
ತಾಲೂಕಿನ ಬಳೂಟಗಿ ಗ್ರಾಮದ ರೈತ ಮಕ್ಬುಲ್ ಸಾಬ್ ವಾಲೀಕಾರ ಅವರ ಭತ್ತದ ಗದ್ದೆಗೆ ಭೇಟಿ ನೀಡಿ, ಹಾನಿಯ ಅಂದಾಜು ಪರಿಶೀಲಿಸಿದ ಬಳಿಕ ಪತ್ರಿಕೆಗೆ ಮಾಹಿತಿ ನೀಡಿದರು.
ತಾಲೂಕಿನಲ್ಲಿ ಅಂತರ್ಜಲ ನೀರಾವರಿ ಆಶ್ರೀತವಾಗಿ 150 ರಷ್ಟು ಹೆಕ್ಟೇರ್ ನಲ್ಲಿ ರೈತರು ಭತ್ತ ಬೆಳೆದಿದ್ದಾರೆ ಅಕಾಲಿಕ ಮಳೆಗೆ ಭತ್ತ ನೆನೆದು, ಅಲ್ಲಿಯೇ ಮೊಳಕೆಯೊಡೆದಿದೆ. ಕಟಾವು ಮಾಡಿದ್ದರೂ ತೆನೆಯ ಭತ್ತ ಭೂಮಿಯಲ್ಲಿ ಉದುರಿದೆ. ಜಿಟಿ ಜಿಟಿ ಮಳೆಯಿಂದ ಬೆಳೆ ನೆಲಕಚ್ಚಿದೆ. ಬಳೂಟಗಿ ಗ್ರಾಮದ ರೈತ ಮುಕ್ತುಂಸಾಬ್ ಅವರ 35 ಎಕರೆ ಭತ್ತದ ಬೆಳೆ ಸಂಪೂರ್ಣ ನೆಲಕಚ್ಚಿದ್ದು, ಗ್ರಾಮ ಲೆಕ್ಕಾಧಿಕಾರಿ ವರದಿಯನ್ನಾಧರಿಸಿ ಸದರಿ ರೈತರಿಗೆ ಸೂಕ್ತ ಪರಿಹಾರದ ಭರವಸೆ ನೀಡಿದರು.
ಈ ವೇಳೆ ಕೃಷಿ ಅಧಿಕಾರಿ ರಾಘವೇಂದ್ರ ಕೊಂಡಗುರಿ, ಪ್ರಕಾಶ ತಾರಿವಾಳ, ಆತ್ಮ ಯೋಜನೆಯ ತಾಂತ್ರಿಕ ವ್ಯವಸ್ಥಾಪಕ ಬಸವರಾಜ ಪಾಟೀಲ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ