ಕೆರೆ ಹೂಳೆತ್ತುವುದು ಅನಿವಾರ್ಯ


Team Udayavani, Jan 20, 2019, 11:07 AM IST

20-january-20.jpg

ಕುಷ್ಟಗಿ: ಪಟ್ಟಣದ ಸೇರಿದಂತೆ 30ಕ್ಕೂ ಅಧಿಕ ಗ್ರಾಮಗಳಿಗೆ ನಿಡಶೇಸಿ ಕೆರೆ ಅಂತರ್ಜಲದ ಮೂಲವಾಗಿರುವ ಹಿನ್ನೆಲೆಯಲ್ಲಿ ಕೆರೆಯ ಹೂಳೆತ್ತುವುದು ಅನಿವಾರ್ಯವಾಗಿದೆ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.

ತಾಲೂಕಿನ ವಜ್ರಬಂಡಿ ಕ್ರಾಸ್‌ ದೇವೇಂದ್ರಪ್ಪ ಬಳೂಟಗಿ ಅವರ ತೋಟದಲ್ಲಿ ನಿಡಶೇಷಿ ಕೆರೆ ಪುನಶ್ಚೇತನ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೆರೆಯ ಹೂಳೆತ್ತುವುದು ಸದ್ಯ ಸಕಾಲಿಕವಾಗಿದೆ. ಈಗಲಾದರೂ ಕೆರೆ ಹೂಳೆತ್ತಲು ಮನಸ್ಸು ಮಾಡಿರುವುದು ಆರೋಗ್ಯಕರ ಬೆಳವಣಿಗೆಯಾಗಿದೆ. ತಾವು ಶಾಸಕರಾಗಿದ್ದಾಗ ಈ ಕೆರೆಯ ಹೂಳೆತ್ತುವುದು, ಆಳ ಹೆಚ್ಚಿಸಲು ಸಮಗ್ರ ಅಭಿವೃದಿœಗಾಗಿ ಸಿ.ಎಂ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 5 ಕೋಟಿ ರೂ. ಮಂಜೂರಾಗಿತ್ತು. ಆದರೆ ಇಲ್ಲಿನ ಸಣ್ಣ ನೀರಾವರಿ ಇಲಾಖೆಯ ಬಹುಕೋಟಿ ತುಂಡು ಗುತ್ತಿಗೆ ಹಗರಣದಿಂದಾಗಿ ಮಂಜೂರಿಯಾದ ಅನುದಾನ ವಾಪಸ್ಸಾಯಿತು. ತನಿಖೆ ನಂತರ ಬಿಡುಗಡೆಗೊಳಿಸುವ ಭರವಸೆ ಸಿಕ್ಕಿದ್ದರೂ ಪುನಃ ಸದರಿ ಮೊತ್ತ ಬಿಡುಗಡೆಗೊಳಿಸುವ ಪ್ರಯತ್ನವೂ ನಡೆಯಲಿ, ಇತ್ತ ಜನತೆಯ ಸಹಭಾಗಿತ್ವದಲ್ಲಿ ಹೂಳೆತ್ತುವ ಕೆಲಸವು ನಡೆಯಲಿ. ಈ ಹೂಳೆತ್ತುವ ಕಾರ್ಯಯೋಜನೆಗೆ ನಮ್ಮ ಬೆಂಬಲವಿದ್ದು, ಸಮಿತಿ ಕೈಗೊಳ್ಳುವ ನಿರ್ಧಾರಗಳಿಗೆ ಬದ್ಧನಾಗಿರುವೆ ಎಂದರು.

ಕೆರೆ ಹೂಳೆತ್ತುವ ಸಮಿತಿಯ ದೇವೇಂದ್ರಪ್ಪ ಬಳೂಟಗಿ ಮಾತನಾಡಿ, ಮಳೆ ಬಂದಾಗ ಮಳೆಯ ನೀರನ್ನು ಹಿಡಿದಿಟ್ಟುಕೊಳ್ಳಲು ಕೆರೆಯಿಂದ ಮಾತ್ರ ಸಾಧ್ಯವಿದೆ. ಈ ಕೆರೆಯ ಪ್ರದೇಶದಲ್ಲಿ ಆಳವಾಗಿ ಹೂಳೆತ್ತುವುದರಿಂದ ನೀರು ಸಂಗ್ರಹಣೆ ಸಾಮಾರ್ಥ್ಯ ಹೆಚ್ಚುವುದಲ್ಲದೇ ಅಂತರ್ಜಲ ಪ್ರಮಾಣ ಗಣನೀಯವಾಗಿ ಹೆಚ್ಚಲಿದೆ ಎಂದರು.

ಬಸವರಾಜ್‌ ಕುದರಿಮೋತಿ ಮಾತನಾಡಿ, ಕೆರೆಯ ಪ್ರದೇಶದಲ್ಲಿ ನೀರು ಬರಿದಾದಾಗ ಸುತ್ತಮುತ್ತಲಿನ ಪ್ರದೇಶದಲ್ಲಿ ಅಂತರ್ಜಲ ಕ್ಷೀಣಿಸಿ, ತಾಪತ್ರಯ ಎದುರಿಸಿದ ಅನುಭವವೂ ಇದೆ. ಹೀಗಾಗಿ ಕೆರೆ ಪ್ರದೇಶದಲ್ಲಿ ನೀರಿದ್ದರೆ ಅಂತರ್ಜಲ ಉಳಿಸಿಕೊಳ್ಳಲು ಸಾಧ್ಯವಿದೆ ಎಂದರು.

ಪುರಸಭೆ ಸದಸ್ಯ ವಸಂತ ಮೇಲಿನಮನಿ ಮಾತನಾಡಿ, ಕೆರೆಯೊಂದಿಗೆ ಭಾವನಾತ್ಮಕ ಸಂಬಂಧ ಉಳಿಯಲು ನಮ್ಮೂರ ಕೆರೆ ಎನ್ನುವ ಭಾವನೆ ಎಲ್ಲರಲ್ಲಿರಬೇಕು ಎಂದರು. ಕರ್ನಾಟಕ ಪ್ರಾಂತ ರೈತ ಸಂಘದ ಆರ್‌.ಕೆ. ದೇಸಾಯಿ ಮಾತನಾಡಿ, ಆಳ ಹೆಚ್ಚಾದಂತೆ ಕೊಳವೆಬಾವಿಯ ನೀರು ವಿಷಕಾರಿಯಾಗುತ್ತಿದೆ. ಇದನ್ನು ತಪ್ಪಿಸಲು ಕೆರೆ ಹೂಳೆತ್ತಿ ನೀರಿನ ಸಂಗ್ರಹ ಸಾಮಾರ್ಥ್ಯ ಹೆಚ್ಚಿಸಬೇಕಿದೆ. ತಾಲೂಕಿನ 41 ಕೆರೆಗಳಿದ್ದು, ಎಲ್ಲ ಕೆರೆಗಳ ಹೂಳೆತ್ತುವ ಕಾರ್ಯ ನಡೆದರೆ ಉಳಿದ ಕೆರೆಗಳ ಹೂಳೆತ್ತುವುದಕ್ಕೆ ಪ್ರೇರಣೆ ಸಿಗಲಿದೆ ಎಂದರು.

ಮಲ್ಲಿಕಾರ್ಜುನ ಮೇಟಿ ಮಾತನಾಡಿ, ಕೆರೆ ಹೂಳೆತ್ತುವ ಕೆಲಸಕ್ಕೆ ಒಂದೊಂದು ದಿನ ಒಂದು ಗ್ರಾಮ ಶ್ರಮದಾನ ನಿರ್ವಹಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾರ್ಯನಿರ್ವಹಿಸುವ ಕೂಲಿಕಾರರು ಒಂದು ದಿನದ ಕೂಲಿ ನೀಡಿ ಬೆಂಬಲಿಸಬೇಕೆಂದರು.

ಇದೇ ವೇಳೆ ಪರಸಪ್ಪ ಕತ್ತಿ, ದೊಡ್ಡಬಸವ ಬಯ್ನಾಪುರ, ಅಮರೇಶ್ವರ ಶೆಟ್ಟರ್‌, ಬಸೆಟೆಪ್ಪ ಕುಂಬಳಾವತಿ, ಪುರಸಭೆ ಸದಸ್ಯರಾದ ಕಲ್ಲೇಶ ತಾಳದ, ಚಿರಂಜೀವಿ ಹಿರೇಮಠ, ವೀರೇಶ ಬಂಗಾರಶೆಟ್ಟರ, ಸಿದ್ಧನಗೌಡ ತಳವಗೇರಾ, ಮಂಜುನಾಥ ಕಟ್ಟಿಮನಿ, ತಾಜುದ್ದೀನ್‌ ದಳಪತಿ, ಸಂಗನಗೌಡ ಜೇನರ್‌, ಹನಮಂತಪ್ಪ ಚೌಡ್ಕಿ, ಎಸ್‌.ಎಸ್‌. ಹಿರೇಮಠ, ಟಿ. ಬಸವರಾಜ್‌, ಜಗನ್ನಾಥ ಗೋತಗಿ, ಮಹಾಂತಯ್ಯ ಅರಳಲಿಮಠ ಮತ್ತಿತರಿದ್ದರು.

ಪ್ರಮುಖ ಅಂಶಗಳಿವು
■    ಕೊಪ್ಪಳ ಗವಿಸಿದ್ಧೇಶ್ವರ ಶ್ರೀಗಳ ನೇತೃತ್ವದಲ್ಲಿ ಕೆರೆ ಹೂಳೆತ್ತುವ ಶ್ರಮದಾನ.

■    ಕೆರೆ ಹೂಳೆತ್ತುವ ಕಾರ್ಯ. ನಿರ್ವಹಣೆಗೆ ಸಮಿತಿ ಅಸ್ತಿತ್ವ

■    ಜೆಸಿಬಿ, ಟಿಪ್ಪರ್‌, ಟ್ರ್ಯಾಕ್ಟರ್‌ ಸೇವೆಗೆ ಮುಕ್ತ ಅವಕಾಶ.

■    ಪಕ್ಷಬೇಧ ಮರೆತು ಶ್ರಮದಾನ.

■    ಕೆರೆ ಹೂಳೆತ್ತುವ ಕಾರ್ಯಕ್ಕೆ ಶಾಲಾ ಮಕ್ಕಳಿಂದ 1 ರೂ. ವಂತಿಗೆ

■    ನರೇಗಾ ಯೋಜನೆ ಕೂಲಿಕಾರರಿಂದ ಒಂದು ದಿನದ ವೇತನ.

■    ಕೆರೆ ಪ್ರದೇಶದಲ್ಲಿ ಹೂಳೆತ್ತುವುದಕ್ಕೆ ಸಕಾರಾತ್ಮಕ ಸ್ಪಂದನೆ.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.