
ಇದ್ದಕ್ಕಿದ್ದಂತೆ ಕುಷ್ಟಗಿಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ನಾಪತ್ತೆ: ಪತ್ನಿಯಿಂದ ದೂರು
Team Udayavani, Dec 6, 2022, 9:02 PM IST

ಕುಷ್ಟಗಿ: ಕುಷ್ಟಗಿಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ಕೊಂಡಗುರಿ ಅವರು, ಇದ್ದಕ್ಕಿದ್ದಂತೆ ಕಳೆದ 6 ದಿನಗಳಿಂದ ನಾಪತ್ತೆಯಾಗಿದ್ದಾರೆ.
ಮೂಲತಃ ಯಲಬುರ್ಗಾ ತಾಲೂಕಿನ ಹಿರೇಅರಳ ಗ್ರಾಮದ ನಿವಾಸಿ, ಕುಷ್ಟಗಿಯ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಯಾಗಿ ಸೇವೆಯಲ್ಲಿದ್ದರು. ರಾಘವೇಂದ್ರ ಕೊಂಡಗುರಿ ಅವರು, ಕಳೆದ ಡಿ.1ರಂದು ಬೆಳಗ್ಗೆ 10 ಗಂಟೆಗೆ ಕಛೇರಿ ಕೆಲಸಕ್ಕೆಂದು ಮನೆಯಿಂದ ನಿರ್ಗಮಿಸಿದ್ದಾರೆ ಎಂದು ಅವರ ಪತ್ನಿ ವಿದ್ಯಾಶ್ರೀ ಕೊಂಡಗುರಿ ಅವರು, ಡಿ.6 ರಂದು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ 37 ವರ್ಷದ ತಮ್ಮ ಪತಿ ರಾಘವೇಂದ್ರ ಕೊಂಡಗುರಿ ಕಾಣೆಯಾಗಿದ್ದಾನೆಂದು ದೂರು ನೀಡಿದ್ದಾರೆ.
ಸದರಿ ದೂರಿನಲ್ಲಿ ಡಿ.1ರಂದು ಅವರ ಪರಿಚಯಸ್ಥ ಹನುಮೇಶ ಕೊಂಡಗುರಿ ಅವರ ಬೈಕಿನಲ್ಲಿ ಬಸ್ ನಿಲ್ದಾಣದವರೆಗೂ ಬಂದಿದ್ದಾರೆ. ಅಲ್ಲಿಂದ ಕಛೇರಿಗೂ ಹೋಗದೇ ನಾಪತ್ತೆಯಾಗಿದ್ದಾರೆ. ಕಾಣೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ನೈಟ್ ಪ್ಯಾಂಟ್ ಕಪ್ಪು ಟೀ ಶರ್ಟ, ಬ್ರೌನ್ ಕಲರ್ ಜರ್ಕಿನ್ ಧರಿಸಿದ್ದಾರೆ. 6.0 ಫೀಟ್ ಎತ್ತರ, ದುಂಡು ಮುಖ, ಗೋದಿ ಮೈಬಣ್ಣ, ಸಾಧರಣ ಮೈಕಟ್ಟು ಇದ್ದು ಕನ್ನಡ, ಹಿಂದಿ, ಇಂಗ್ಲಿಷ್ ಮಾತನಾಡುತ್ತಾರೆಂದು ದೂರಿನಲ್ಲಿ ವಿವರಿಸಲಾಗಿದೆ.
ಕೃಷಿ ಅಧಿಕಾರಿ ರಾಘವೇಂದ್ರ ಕೊಂಡಗುರಿ ಅವರು ಕಾಣೆಯಾಗಿರುವುದು ನಿಖರವಾದ ಕಾರಣ ತಿಳಿದು ಬಂದಿಲ್ಲ. ಅವರ ಎರಡು ಮೋಬೈಲ್ ಮನೆಯಲ್ಲಿ ಬಿಟ್ಟು ಹೋಗಿದ್ದಾರೆ.
ಇದನ್ನೂ ಓದಿ: ಕಾಡಾನೆಗೆ ಕಬ್ಬು ನೀಡಲು ಹೋಗಿ 75 ಸಾವಿರ ರೂ. ದಂಡ ಕಟ್ಟಿದ ಲಾರಿ ಚಾಲಕ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ನೂರು- ಮುನ್ನೂರು ವರ್ಷದ ಬಗ್ಗೆ ಯೋಚಿಸಿ ಬಜೆಟ್ ಮಾಡಿದ್ದಾರೆ: ಸಿ.ಟಿ ರವಿ

ಬಜೆಟ್ ನಲ್ಲಿ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ: ಸುನಿಲ್ ಕುಮಾರ್

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ

ಧಾರವಾಡದ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಆಸೀಸ್ ವಿರುದ್ಧದ ಮೊದಲ ಟೆಸ್ಟ್ ನಿಂದ ಹೊರಬಿದ್ದ ಸ್ಟಾರ್ ಬ್ಯಾಟರ್: ಸೂರ್ಯಗೆ ಅವಕಾಶ ಸಾಧ್ಯತೆ

ಪುತ್ತೂರು: ಸ್ಕೂಟರ್-ಮಾರುತಿ ವ್ಯಾನ್ ಡಿಕ್ಕಿ; ಸವಾರ ಗಂಭೀರ ಗಾಯ

ಈ ಬಜೆಟ್ ಕರ್ನಾಟಕದ ಪಾಲಿಗೆ ಗೇಮ್ ಚೇಂಜರ್ : ತೇಜಸ್ವಿ ಸೂರ್ಯ

ಕೇಂದ್ರ ಬಜೆಟ್ 2023:ಸಿಹಿ ಸುದ್ದಿ-ಪ್ರಧಾನ್ ಮಂತ್ರಿ ಆವಾಸ್ ಯೋಜನೆಗೆ 79ಸಾವಿರ ಕೋಟಿ ಅನುದಾನ

‘ಹೊಂದಿಸಿ ಬರೆಯಿರಿʼ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್