ಕುಷ್ಟಗಿ : ತಡೆಗೋಡೆಗೆ ಢಿಕ್ಕಿ ಹೊಡೆದ ಬೈಕ್ : ತಂದೆ ಮಗಳು ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ
Team Udayavani, Jul 4, 2022, 8:35 PM IST
ಕುಷ್ಟಗಿ : ಕುಷ್ಟಗಿ-ಹೊಸಪೇಟೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಲೋಹದ ತಡೆಗೋಡೆಗೆ ಬೈಕ್ ಢಿಕ್ಕಿ ಹೊಡೆದು ತಂದೆ- ಮಗಳು ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತೊಂಡಿಹಾಳ ಗ್ರಾಮದ ಬಸಯ್ಯ ಕಳಕಯ್ಯ ಹಿರೇಮಠ (29) ಹಾಗೂ 5 ವರ್ಷದ ಮಗಳು ಅಕ್ಷರ ಎಂದು ಗುರುತಿಸಲಾಗಿದೆ.
ಕುಷ್ಟಗಿಯ ಶರಣಯ್ಯ ಹಿರೇಮನ್ನಾಪೂರ ಅವರ ಮನೆಗೆ ಬಂದಿದ್ದ ಈ ಕುಟುಂಬ ಬೈಕ್ ನಲ್ಲಿ ಬಸಯ್ಯ ಹಾಗು 28 ವರ್ಷದ ಪತ್ನಿ ಶಾಂತಮ್ಮ ಜೊತೆಗೆ ಇಬ್ಬರು ಮಕ್ಕಳಾದ 5 ವರ್ಷದ ಅಕ್ಷರ, 3 ವರ್ಷದ ಶ್ರೀಶೈಲ ತಮ್ಮ ಸ್ವಗ್ರಾಮ ತೊಂಡಿಹಾಳ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದರು.
ವಣಗೇರಾ ಮೇಲ್ಸೇತುವೆ ದಾಟಿದ ವೇಳೆ ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೋಹದ ತಡೆಗೋಡೆಗೆ ಢಿಕ್ಕಿ ಹೊಡೆದಿದ್ದರಿಂದ ಬಸಯ್ಯ ಹಿರೇಮಠ ಹಾಗೂ ಮಗಳು ಅಕ್ಷರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತನ ಪತ್ನಿ ಶಾಂತಮ್ಮ ಮಗ ಶ್ರೀಶೈಲ ಗಂಭೀರವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸಿಪಿಐ ನಿಂಗಪ್ಪ ರುದ್ರಪ್ಪಗೋಳ, ಪಿಎಸೈ ತಿಮ್ಮಣ್ಣ ನಾಯಕ ಭೇಟಿ ನೀಡಿ ಪರಿಶೀಲಿಸಿದರು.
ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ದೆಹಲಿ ಶಾಸಕರ ವೇತನ ಶೇ.66ಕ್ಕೆ ಏರಿಕೆ: ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ