ಬಿಸಿಯೂಟಕ್ಕಿಲ್ಲಿ ಕಟ್ಟಿಗೆಯೇ ಗತಿ!


Team Udayavani, Jan 31, 2020, 5:10 PM IST

kopala-tdy-1

ದೋಟಿಹಾಳ: ಶೈಕ್ಷಣಿಕ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸರ್ವ ಶಿಕ್ಷಣ ಅಭಿಯಾನ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ವಿವಿಧ ಯೋಜನೆ ಜಾರಿಗೆ ತಂದಿವೆ.

ಆದರೆ ಹುಲಸಗೇರಿ ಪ್ರಾಥಮಿಕ ಶಾಲೆ ಮಾತ್ರ ಸೌಲಭ್ಯವಿಲ್ಲದೇ ಬಳಲುತ್ತಿದೆ. ಹುಲಸಗೇರಿ ಸರಕಾರಿ ಪ್ರಾಥಮಿಕ ಶಾಲೆ ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದು, ಸರಿಯಾದ ಅಡುಗೆ ಕೊಠಡಿಯಿಲ್ಲ. ಸಿಲಿಂಡರ್‌ ಕೊರತೆಯಿಂದ ಬಿಸಿಯೂಟ ಸಮಸ್ಯೆ ಹೇಳ ತೀರದಾಗಿದೆ.

ಸಿಲಿಂಡರ್‌ ಬದಲು ಕಟ್ಟಿಗೆ: ಹುಲಸಗೇರಿ ಸರಕಾರಿ ಪ್ರಾಥಮಿಕ ಶಾಲೆಯ 199 ವಿದ್ಯಾರ್ಥಿಗಳಿಗೆ ಬಿಸಿಯೂಟ ತಯಾರಿಸಲು ಅವಶ್ಯಕ ಸಿಲಿಂಡರ್‌ಗಳೇ ಇಲ್ಲದಾಗಿವೆ. ಬಿಸಿಯೂಟ ಪ್ರಾರಂಭವಾಗುವ ವೇಳೆ ಇಲಾಖೆ ಪೂರೈಸಿದ ಎರಡು ಸಿಲಿಂಡರ್‌ ಮಾತ್ರ. ಆದರೆ ಸರಕಾರದ ನಿಯಮದ ಪ್ರಕಾರ ಬಿಸಿಯೂಟ ಆರಂಭದಿಂದ ಇಲ್ಲಿಯವರಗೆ ಶಾಲೆಗೆ ತಿಂಗಳಿಗೆ 6 ಸಿಲಿಂಡರ್‌ ಪೂರೈಕೆಯಾಗುತ್ತಿವೆ ಎಂದು ಹೇಳಿದರೂ ಇದರಲ್ಲಿ ಕೇವಲ ಎರಡು ಸಿಲಿಂಡರ್‌ ಮಾತ್ರ ಪೂರೈಕೆಯಾಗುತ್ತಿದ್ದು, ಉಳಿದ ನಾಲ್ಕು ಸಿಲಿಂಡರಗಳ ಬಗ್ಗೆ ಮಾಹಿತಿ ಇಲ್ಲ.  ಇದರ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ತಿಂಗಳಿಗೆ ಕೇವಲ ಎರಡು ಸಿಲಿಂಡರ್‌ಗಳಲ್ಲಿ ಮಕ್ಕಳಿಗೆ ಅಡುಗೆ ಮಾಡಲು ಸಾಧ್ಯವಿಲ್ಲ.  ಹೀಗಾಗಿ ಬಿಸಿಯೂಟದ ತಯಾರಿಕೆಗೆ ಪರ್ಯಾಯವಾಗಿ ಕಟ್ಟಿಗೆ ಉಪಯೋಗಿಸಲಾಗುತ್ತಿದೆ ಬಿಸಿಯೂಟ ತಯಾರಕರು ತಿಳಿಸಿದರು.

ಶಾಲಾ ಆವರಣದಲ್ಲಿ ಅಡುಗೆ: ಸರಿಯಾದ ಬಿಸಿಯೂಟ ತಯಾರಿಸಲು ಅಡುಗೆ ಕೊಠಡಿ ಇಲ್ಲದ ಕಾರಣ ಸುಮಾರು ವರ್ಷಗಳಿಂದ ಈ ಶಾಲೆಯಲ್ಲಿ ಹೊರಗಡೆ ಬಿಸಿಯೂಟದ ಅಡುಗೆ ಮಾಡುತ್ತಿದ್ದಾರೆ. ಶಾಲಾವರಣದಲ್ಲಿ ಸಾಕಷ್ಟು ಜಾಗವಿದ್ದರೂ ಅಡುಗೆ ಕೊಠಡಿ ನಿರ್ಮಾಣ ಮಾಡದಿರುವುದು ಕಂಡು ಬರುತ್ತಿದೆ.  ಮಳೆಗಾಲದಲ್ಲಿ ಮಳೆ ಬಂದಾಗ ಸಣ್ಣ ಕೊಠಡಿಯಲ್ಲಿ ಅಡುಗೆ ಮಾಡಬೇಕು. ಇದರಿಂದಮಕ್ಕಳಿಗೆ ಸರಿಯಾದ ಸಮಯಕ್ಕೆ ಅಡುಗೆ ಮಾಡಲು ತೊಂದರೆಯಾಗುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಒಂದು ಅಡುಗೆ ಕೊಠಡಿ ನಿರ್ಮಿಸಲು ಕ್ರಮ ಕೈಗೊಳ್ಳಬೇಕಿದೆ.

ಬಿಸಿಯೂಟ ಆರಂಭದಿಂದ ಇಲ್ಲಿಯವರೆಗೂ ಶಾಲೆಗೆ ಕೇವಲ ಎರಡು ಸಿಲಿಂಡರ್‌ ಮಾತ್ರ ಪೂರೈಕೆಯಾಗಿವೆ. ಉಳಿದ ನಾಲ್ಕು ಸಿಲಿಂಡರ್‌ ಗಳ ಬಗ್ಗೆ ಮಾಹಿತಿ ಇಲ್ಲ. ಇದರ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ.- ಕಳಕಮಲ್ಲೇಶ್ವರ, ಶಾಲಾ ಮುಖ್ಯೋಪಾಧ್ಯಾಯರು.

 

-ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.