Dotihala: ಸರಕಾರಿ ಆಂಗ್ಲ ಶಾಲೆಗಳಲ್ಲಿ ಸೌಲಭ್ಯ-ಶಿಕ್ಷಕರ ಕೊರತೆ

ಬಿಡುಗಡೆಯಾಗದ ಅನುದಾನ ; ಬಡ ಮಕ್ಕಳಿಗಾಗಿ ಸಾವಿರ ಶಾಲೆ ಆರಂಭ

Team Udayavani, Sep 8, 2023, 2:41 PM IST

11-dotihala

ದೋಟಿಹಾಳ: ಕಳೆದ ನಾಲ್ಕೈದು ವರ್ಷಗಳ ಹಿಂದೆ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಿರುವುದು ಪಾಲಕರಲ್ಲಿ ಸಂತಸ ತಂದಿದೆಯಾದರೂ ಶಿಕ್ಷಕರ ಕೊರತೆ ಹಾಗೂ ಮೂಲಸೌಲಭ್ಯಗಳ ಕೊರತೆಯಿಂದಾಗಿ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಶುರುವಾಗಿದೆ.

ಹಿಂದೆ ಎಚ್‌.ಡಿ ಕುಮಾರಸ್ವಾಮಿ ಮೈತ್ರಿ ಸರಕಾರ ಗ್ರಾಮೀಣ ಭಾಗದ ಬಡ, ಹಿಂದುಳಿದ ವರ್ಗದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸುಮಾರು ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ರಾಜ್ಯದಲ್ಲಿ ಆರಂಭಿಸಲಾಯಿತು.

ಈ ಶಾಲೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿತ್ತು. ಆದರೆ ಇದುವರೆಗೆ ಅನುದಾನ ಬಿಡುಗಡೆ ಮಾಡಿಲ್ಲ. ಈ ಶಾಲೆಗಳಿಗೆ ಇದುವರೆಗೂ ಯಾವ ಶಿಕ್ಷಕರನ್ನೂ ನೇಮಿಸಿಲ್ಲ. ಇದರಿಂದ ಮಕ್ಕಳ ಶಿಕ್ಷಣ ಕುಂಠಿತಗೊಳ್ಳುತ್ತಿದೆ. ಈ ಬಗ್ಗೆ ಯಾರೂ ಯೋಚನೆ ಮಾಡುತ್ತಿಲ್ಲ. ಸದ್ಯ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ನುರಿತ ಆಂಗ್ಲ ಶಿಕ್ಷಕರ ಬದಲು ಕನ್ನಡ ಮಾಧ್ಯಮದ ಶಿಕ್ಷಕರೇ ಇಂಗ್ಲಿಷ್‌ ಮಾಧ್ಯಮದಲ್ಲಿ ಪಾಠ ಮಾಡಬೇಕಾದ ದುಃಸ್ಥಿತಿ ಇದೆ.

ಸಮರ್ಪಕ ಬೋಧನೆ ಕೊರತೆ: ಸರಕಾರಿ ಶಾಲೆಗಳಲ್ಲಿ ಇರುವ ಕನ್ನಡ ಮಾಧ್ಯಮದ ಶಿಕ್ಷಕರಿಗೆ 15 ದಿನಗಳ ಕಾಲ ತರಬೇತಿ ಕೊಟ್ಟು ಇಂಗ್ಲಿಷ್‌ ಪಾಠ ಮಾಡಲು ಹೇಳಿದ್ದರಿಂದ ಮಕ್ಕಳಿಗೆ ಸಮರ್ಪಕ ಬೋಧನೆ ಸಿಗುತ್ತಿಲ್ಲ ಎಂಬ ದೂರು ಪಾಲಕರಿಂದ ಕೇಳಿ ಬಂದಿದೆ. ಶಿಕ್ಷಕರಿಗೆ ಇಂಗ್ಲಿಷ್‌ ಬಾರದಿದ್ದ ಮೇಲೆ ಮಕ್ಕಳಿಗೆ ಹೇಗೆ ಇಂಗ್ಲಿಷ್‌ ಪಾಠ ಮಾಡುತ್ತಾರೆ ಎಂಬುದು ಪಾಲಕರ ಪ್ರಶ್ನೆ.

ಪಾಠ ಮಾಡಲು ಶಿಕ್ಷಕರ ನಕಾರ: 1ರಿಂದ 3ನೇ ತರಗತಿಯವರೆಗೆ ಆಂಗ್ಲ ಮಾಧ್ಯಮ ಶಾಲಾ ಮಕ್ಕಳಿಗೆ ಗ್ರಾಮೀಣ ಭಾಗದ ಶಿಕ್ಷಕರು ಪಾಠ ಮಾಡಲು ಬರುತ್ತಾರೆ. ಆದರೆ 4 ತರಗತಿಯಿಂದ ಆಂಗ್ಲ ಮಾಧ್ಯಮದ ಮಕ್ಕಳಿಗೆ ಬೊಧೀ ಸಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಮಕ್ಕಳು ಕನ್ನಡ, ಇಂಗ್ಲಿಷ್‌ ಯಾವುದನ್ನೂ ಸರಿಯಾಗಿ ಕಲಿಯಲಾಗದಂತಹ ಸ್ಥಿತಿ ಇದೆ ಎಂದು ಪಾಲಕರು ದೂರುತ್ತಾರೆ. ಆರಂಭದಲ್ಲಿ ಇಂಗ್ಲಿಷ್‌ ಮಾಧ್ಯಮದ 1ನೇ ತರಗತಿಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಪ್ರತಿ ಶಾಲೆಗೆ 30 ವಿದ್ಯಾರ್ಥಿಗಳು ಮಾತ್ರ ದಾಖಲಾತಿಗೆ ಅವಕಾಶವಿದ್ದರೂ ಕೆಲ ಶಾಲೆಗಳಲ್ಲಿ 30ಕ್ಕೂ ಹೆಚ್ಚು ಮಕ್ಕಳ ಅರ್ಜಿಗಳು ಬಂದ ಕಾರಣ ಲಾಟರಿಗಳ ಮೂಲಕ ಮಕ್ಕಳನ್ನು ಆಯ್ಕೆ ಮಾಡಲಾಗಿತ್ತು.

ಇತ್ತ ಕನ್ನಡವೂ ಇಲ್ಲ, ಅತ್ತ ಇಂಗ್ಲಿಷ್‌ ಇಲ್ಲ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ಒಟ್ಟು 10 ಸರಕಾರ ಆಂಗ್ಲ ಮಾಧ್ಯಮ ಶಾಲೆಗಳು ಆರಂಭಿಸಿದೆ. ಇದರಲ್ಲಿ ನಾಲ್ಕು ಶಾಲೆಗಳಲ್ಲಿ ಸದ್ಯ 5ನೇ ತರಗತಿ ಆರಂಭವಾಗಿದೆ. ಈ ಮಕ್ಕಳು ನವೋದಯ, ಮೊರಾರ್ಜಿ, ಸೈನಿಕ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ ಪಡೆಯಬೇಕಾದರೆ ಇವರು ಆಂಗ್ಲ ಮಾಧ್ಯಮದಲ್ಲಿ ಪರೀಕ್ಷೆ ಬರೆಯಬೇಕು. ಇತ್ತ ಕಡೆ ಕನ್ನಡವೂ ಇಲ್ಲ, ಅತ್ತ ಕಡೆ ಇಂಗ್ಲಿಷ್‌ ಶಿಕ್ಷಣವೂ ಇಲ್ಲ ಎನ್ನುವಂತಾಗಿದೆ.

ನನ್ನ ಮಗನನ್ನು ಎರಡು ವರ್ಷ ಆಂಗ್ಲ ಮಾಧ್ಯಮ ಶಾಲೆಗೆ ಕಳಿಸಿದೆ. ಅಲ್ಲಿ ಸರಿಯಾದ ಶಿಕ್ಷಣ ಸಿಗದ ಕಾರಣ ಮರಳಿ ಕನ್ನಡ ಶಾಲೆಗೆ ದಾಖಲಿಸಿದ್ದೇನೆ ಎಂದು ಹೇಳುತ್ತಾರೆ ಪಾಲಕ ಕೃಷ್ಣಪ್ಪ ಗುಡಸಲಿ. ದೋಟಿಹಾಳ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನುರಿತ ಶಿಕ್ಷಕರಿಲ್ಲದ ಕಾರಣ ಸುಮಾರು 6-7 ವಿದ್ಯಾರ್ಥಿಗಳು ಬೇರೆ ಶಾಲೆಗೆ ಹೋಗಿದ್ದಾರೆಂದು ಶಾಲಾ ಶಿಕ್ಷಕರು ಮಾಹಿತಿ ನೀಡಿದ್ದಾರೆ.

ನಮ್ಮ ಶಾಲೆಯಲ್ಲಿ 5ನೇ ತರಗತಿಯವರೆಗೆ ಆಂಗ್ಲ ಮಾಧ್ಯಮ ಇದೆ. ಆರಂಭದಲ್ಲಿ ಪಾಲಕರಲ್ಲಿ ಇದರ ಬಗ್ಗೆ ಹೆಚ್ಚಿನ ಆಸಕ್ತಿ ಇತ್ತು. ಸದ್ಯ ನುರಿತ ಶಿಕ್ಷರ ಕೊರತೆಯಿಂದ ಮಕ್ಕಳ ದಾಖಲಾತಿ ಕಡಿಮೆಯಾಗುತ್ತಿದೆ. ಈ ವರ್ಷ ಒಂದನೇ ತರಗತಿಗೆ ಕೇವಲ 12 ಮಕ್ಕಳು ದಾಖಲಾಗಿದ್ದಾರೆ. ಶಿವಾನಂದ ಪಂಪಣ್ಣನವರು, ಮುಖ್ಯ ಗುರುಗಳು, ಸ.ಮಾ.ಹಿ.ಪ್ರಾ.ಕಂದಕೂರ ಶಾಲೆ.

ರಾಜ್ಯದಲ್ಲಿ ಆಂಗ್ಲ ಮಾಧ್ಯಮ ಶಾಲೆ ಆರಂಭದಿಂದ ಸರಕಾರ ಈ ಶಾಲೆಗಳಿಗೆ ನುರಿತ ಶಿಕ್ಷಕರನ್ನು ನೇಮಕಾತಿ ಮಾಡಿಲ್ಲ. ಸದ್ಯ ಕನ್ನಡ ಮಾಧ್ಯಮದ ಶಿಕ್ಷಕರಿಗೆ 15 ದಿನಗಳ ಕಾಲ ತರಬೇತಿ ಪಡೆದ ಶಿಕ್ಷಕರು ಪಾಠ ಮಾಡುತ್ತಿದ್ದಾರೆ. ಶ್ರೀಶೈಲ ಬಿರಾದರ, ಡಿಡಿಪಿಐ, ಕೊಪ್ಪಳ.

ಸದ್ಯದಲ್ಲಿ ಕೋರ್ಟ್‌ನಲ್ಲಿರುವ ಶಿಕ್ಷಕರ ನೇಮಕಾತಿ ಪ್ರಕರಣ ಇತ್ಯರ್ಥವಾಗುವ ಸಾಧ್ಯತೆ ಇದೆ. ಇದಾದ ನಂತರ ಹಂತ ಹಂತವಾಗಿ ಶಿಕ್ಷಕರ ನೇಮಕಾತಿ ಮಾಡುತ್ತೇವೆ. ಮಧು ಬಂಗಾರಪ್ಪ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು.

ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.