ಸರ್ಕಾರಿ ಶಾಲೆಗೆ ಸೌಲಭ್ಯ ಕೊರತೆ


Team Udayavani, Jan 24, 2020, 5:21 PM IST

kopala-tdy-1

ದೋಟಿಹಾಳ: ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆಯೇ ಹೊರತು. ಶಾಲೆಯ ಮೂಲ ಉದ್ದೇಶವನ್ನೇ ಮರೆಯುತ್ತಿದೆ. ಇದರಿಂದ ಮಕ್ಕಳು ಉತ್ತಮ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಸರಕಾರ ಮಕ್ಕಳ ಶಿಕ್ಷಣಕ್ಕೆ ಶಿಕ್ಷಕರು ನೀಡದೆ. ಬಿಸಿಯೂಟ, ಕ್ಷೀರಭಾಗ್ಯ ಇನ್ನಿತರ ಯೋಜನೆಗಳನ್ನು ಮಾತ್ರ ಜಾರಿಗೆ ತಂದು ಶಾಲೆ ಹಾಜರಾತಿ ಹೆಚ್ಚಿಸುವ ಪ್ರಯತ್ನಿಸುತ್ತಿದೆ ಹೊರತು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಲು ಮುಂದಾಗುತ್ತಿಲ್ಲ ಎಂಬುದು ಸಾರ್ವಜನಿಕರ ಅಭಿಪ್ರಾಯ.

ಮಾದಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4-5 ತಿಂಗಳಿನಿಂದ ವಿಷಯವಾರು ಶಿಕ್ಷಕರಿಲ್ಲದೇ, ಶಿಕ್ಷಣದಿಂದ ಮಕ್ಕಳ ಮುಂದಿನ ಭವಿಷ್ಯ ಅತಂತ್ರವಾಗಿದೆ. ಈ ಶಾಲೆಯಲ್ಲಿ ಒಟ್ಟು 123 ಮಕ್ಕಳಿದ್ದು 5 ಶಿಕ್ಷಕರ ಹುದ್ದೆಗಳಲ್ಲಿ ಸದ್ಯ ಇಬ್ಬರು ಮಾತ್ರ ಇದ್ದಾರೆ. ಮೂರು ಹುದ್ದೆಗಳು ಖಾಲಿ ಇವೆ. ಒಬ್ಬ ಶಿಕ್ಷಕಿ ಹೆರಿಗೆ ರಜೆಯ ಮೇಲೆ ತರಳಿದ್ದಾರೆ. ಉಳಿದ ಒಬ್ಬ ಶಿಕ್ಷಕ ಶಾಲೆಯ ದಾಖಲಾತಿಗಳು ಸರಿಪಡಿಸಿಕೊಂಡು. ಇಬ್ಬರ ಅತಿಥಿ ಶಿಕ್ಷಕರ ನಡುವೆ ಶಾಲೆ ನಡೆಯುತ್ತಿದೆ.

1-3ನೇ ತರಗತಿಗೆ ಒಟ್ಟು 63 ಮಕ್ಕಳಿದ್ದಾರೆ. ಎರಡು ನಲಿ-ಕಲಿ ತರಗತಿಗಳನ್ನು ಮಾಡಿಕೊಂಡು ಶಾಲಾ ಪ್ರಭಾರಿ ಮುಖ್ಯಗುರುಗಳು ಪಾಠ ಮಾಡುತ್ತಾರೆ. ಉಳಿದ 4, 5, 6 ಮತ್ತು 7ನೇ ತರಗತಿಗಳ ಮಕ್ಕಳಿಗೆ ಅತಿಥಿ ಶಿಕ್ಷಕರೇ ಪಾಠ ಮಾಡಬೇಕಾಗಿದೆ. ಇದರಿಂದಾಗಿ ವಿಷಯವಾರು ಶಿಕ್ಷಕರಿಲ್ಲದ ಕಾರಣ ಗುಣಮಟ್ಟದ ಶಿಕ್ಷಣದಿಂದ ಮಕ್ಕಳು ವಂಚಿತರಾಗುತ್ತಿದ್ದಾರೆ. ಸರಕಾರಿ ಶಾಲೆಯನ್ನು ಅತಿಥಿ ಶಿಕ್ಷಕರ ಮೇಲೆ ಶಾಲೆ ಬಿಟ್ಟು ಹೋಗುವಂತ್ತಿಲ್ಲ. ಆದರೆ ಇಲ್ಲಿ ಶಾಲೆ ಕೆಲಸದ ನಿಮಿತ್ಯ ಪ್ರಭಾರಿ ಮುಖ್ಯಗುರು ಹೊರಗೆ ಹೋದರೆ ಅತಿಥಿ ಶಿಕ್ಷಕರೇ ಶಾಲೆಯನ್ನು ಮುನ್ನಡೆಸಿಕೊಂಡು ಹೋಗ ಬೇಕಾಗಿರುವುದು ಅನಿವಾರ್ಯವಾಗಿದೆ.

ಸರಕಾರ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುವ ಬದಲು ಮಕ್ಕಳ ಅನುಪಾತದಲ್ಲಿ ಎಲ್ಲಾ ಶಾಲೆಗಳಿಗೆ ಶಿಕ್ಷಕರನ್ನು ನಿಯೋಜಿಸಲು ಕ್ರಮಕೈಗೊಳ್ಳಬೇಕು ಎಂಬುದು ಪ್ರಜ್ಞಾವಂತ ನಾಗರಿಕ ಕಳಕಳಿಯಾಗಿದೆ. ನಮ್ಮ ಶಾಲೆಯ ಎಂಟು ಹುದ್ದೆಗಳಲ್ಲಿ ಸದ್ಯ ಇಬ್ಬರು ಮಾತ್ರ ಇದ್ದೇವೆ. ಶಿಕ್ಷಕಿಯೊಬ್ಬರು ಹೆರಿಗೆ ರಜೆಯಲ್ಲಿದ್ದಾರೆ. ಈಗ ನಾನು ಮತ್ತು ಇಬ್ಬರು ಅತಿಥಿ ಶಿಕ್ಷಕರು ಶಾಲೆಯಲ್ಲಿದ್ದೇವೆ ಎಂದು ಪ್ರಭಾರಿ ಮುಖ್ಯಗುರುಗಳಾದ ಬಸವರಾಜ ಅಂಬಳನೂರು ಹೇಳಿದರು.

ಶಾಲೆಯಲ್ಲಿ ಇತ್ತೀಚೆಗೆ ಒಬ್ಬ ಶಿಕ್ಷಕ ನಿವೃತ್ತಿ ಹೊಂದಿದ್ದಾರೆ. ಇನ್ನೊಬ್ಬರು ವರ್ಗಾವಣೆಯಾಗಿ ಹೋಗಿದ್ದಾರೆ. ಶಿಕ್ಷಕಿ ಹೆರಿಗೆ ರಜೆಯ ಮೇಲೆ ಹೋಗಿದ್ದಾರೆ. ಸರಿಯಾದ ಮಾಹಿತಿ ಕೊರತೆಯಿಂದ ಅಲ್ಲಿ ಶಿಕ್ಷಕ ಕೊರತೆ ಕಾಣುತ್ತಿದೆ. ಕೂಡಲೇ ಆ ಶಾಲೆಗೆ ಒಬ್ಬ ಶಿಕ್ಷಕರನ್ನು ನಿಯೋಜನೆ ಮಾಡುತ್ತೇವೆ. -ದಾವಲಸಾಬ ವಾಲಿಕಾರ್‌, ಶಿಕ್ಷಣ ಸಂಯೋಜಕರು ತಾವರಗೇರಾ

 

-ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.