ಪುರಸಭೆಯಾಗಿ ಮೇಲ್ದರ್ಜೆಗೇರಿದರೂ ಸಿಕ್ಕಿಲ್ಲ ಸೌಲಭ್ಯ


Team Udayavani, Feb 22, 2020, 2:33 PM IST

kopala-tdy-1

ಕಾರಟಗಿ: ಗ್ರಾಪಂನಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದರೂ ಪಟ್ಟಣದ ಕೆಲ ವಾರ್ಡ್‌ ಗಳಲ್ಲಿ ಮೂಲಸೌಕರ್ಯ ಇಲ್ಲದಂತಾಗಿವೆ. ಪಟ್ಟಣದ 2 ಮತ್ತು 3ನೇ ವಾರ್ಡ್‌ನಲ್ಲಿ ಕುಡಿವ ನೀರಿಗಾಗಿ ಕೊರೆಯಿಸಿದ ಬೋರ್‌ವೆಲ್‌ ಗಳಿವೆ. ಆದರೂ ಸಮರ್ಪಕ ಕುಡಿವ ನೀರು ಪೂರೈಕೆಯಿಲ್ಲ. ಕಿರು ನೀರಿನ ತೊಟ್ಟಿಗಳಿವೆ ಆದರೆ ಸಮರ್ಪಕ ನಿರ್ವಹಣೆ ಇಲ್ಲ. ಎರಡು ಕೈಪಂಪ್‌ ಕೊಳವೆಬಾವಿಗಳಿವೆ ಅದರಲ್ಲಿ ಒಂದು ದುರಸ್ತಿಗೀಡಾಗಿ 7 ತಿಂಗಳು ಕಳೆದರೂ ಪುರಸಭೆ ಸಿಬ್ಬಂದಿ ದುರಸ್ತಿಗೆ ಮುಂದಾಗಿಲ್ಲ.

ಗ್ರಾಪಂ ಅಧಿಕಾರವ ಧಿಯಲ್ಲಿ ನಿರ್ಮಿಸಿದ ಮಹಿಳಾ ಶೌಚಾಲಯವಿದೆ. ಆದರೂ ಪುರಸಭೆ ವತಿಯಿಂದ 2, 3ನೇ ವಾರ್ಡ್‌ ಗಳಲ್ಲಿ 2017-18ನೇ ಸಾಲಿನ 14ನೇ ಹಣಕಾಸು ಯೋಜನೆಯಡಿ ನಿರ್ಮಿಸಿದ ಮಹಿಳಾ ಸಮುದಾಯ ಶೌಚಾಲಯಗಳಿಗೆ ನೀರು ಪೂರೈಕೆಯಿಲ್ಲ. ದೀಪದ ವ್ಯವಸ್ಥೆ ಇಲ್ಲ. ಇದರಿಂದಾಗಿ ವಾರ್ಡ್‌ ಮಹಿಳೆಯರು ಹಳೆಯ ಶೌಚಾಲಯವನ್ನೇ ಬಳಸುತ್ತಿದ್ದಾರೆ. ಬೀದಿದೀಪಗಳ ವ್ಯವಸ್ಥೆ ಇಲ್ಲವಾಗಿದೆ.

ನಿರ್ವಹಣೆಗಾರರ ತಾರತಮ್ಯ ನೀತಿಯಿಂದ ಕೆಲ ವಾರ್ಡ್‌ಗಳಲ್ಲಿ ಸೌಲಭ್ಯಗಳು ಕಾಣುವುದು ಅಪರೂಪ. ಬೀದಿ, ದೀಪಗಳಿಲ್ಲದೆ ವಾರ್ಡ್‌ ನಲ್ಲಿ ಕತ್ತಲಲ್ಲಿ ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಚರಂಡಿಗಳ ತ್ಯಾಜ್ಯಗಳ ನಿರ್ವಹಣೆ ಇಲ್ಲದೇ ಸೊಳ್ಳೆಗಳು ಹುಟ್ಟಿಕೊಂಡು ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತಿವೆ. ಈಗಾಗಲೇ ವಾರ್ಡ್‌ನ ಹಲವಾರು ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಮಸ್ಯೆಗಳ ಕುರಿತು ವಾರ್ಡ್‌ ಸದಸ್ಯರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಪುರಸಭೆಗೆ ಸರಕಾರದಿಂದ ಸಾಕಷ್ಟು ಅನುದಾನ ಬರುತ್ತಿದ್ದರೂ ಅಭಿವೃದ್ಧಿ ಕಾರ್ಯಗಳಿಗೆ ಸಮರ್ಪಕವಾಗಿ ವಿನಿಯೋಗವಾಗದೇ ದುರ್ಬಳಕೆಯಾಗುತ್ತಿದೆ. ಅಲ್ಲದೆ ಸ್ಥಳೀಯವಾಗಿ ಪುರಸಭೆಗೆ ಸಾಕಷ್ಟು ಅದಾಯವಿದೆ ಆದರೂ ಅಧಿಕಾರಿಗಳ ನಿರ್ಲಕ್ಷ್ಯ ‌ದಿಂದ ಅಭಿವೃದ್ಧಿ ಶೂನ್ಯವಾಗಿದೆ ಎನ್ನುತ್ತಾರೆ ವಾರ್ಡ್‌ ನಿವಾಸಿಗಳು. ಯಾರಿಗೆ ಹೇಳಿದರೂ ವಾರ್ಡ್‌ ಸಮಸ್ಯೆ ಪರಿಹಾರವಾಗಿಲ್ಲ. ನೀರಿಗಾಗಿ ಹೊಲಗದ್ದೆಗಳಿಗೆ ಅಲೆಯುವುದು ವಾರ್ಡ್‌ ಸದಸ್ಯರಿಗೆ ನಿತ್ಯ ಕಂಡರೂ ಕೂಡ ಚಕಾರವೆತ್ತುತ್ತಿಲ್ಲ. ವಾರ್ಡ್‌ ಗೆ ಕಾಂಕ್ರೀಟ್‌ ರಸ್ತೆ ನಿರ್ಮಾಣ ಮಾಡಿ, ಕುಡಿವ ನೀರಿಗೆ ಪೈಪ್‌ಲೈನ್‌ ಮಾಡಿಸಿ ಎಂದು ಮನವಿ ಮಾಡಿದ್ದೇವೆ ಆದರೂ ನೀರು ಪೂರೈಕೆ ಮಾಡುತ್ತಿಲ್ಲ ಎಂದು ವಾರ್ಡ್‌ ನಿವಾಸಿ ಕನಕಮ್ಮ ಅಳಲು ತೋಡಿಕೊಂಡರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.