ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ಅನುದಾನದ ಕೊರತೆ: ಕೆ.ರವೀಂದ್ರ ಶೆಟ್ಟಿ
Team Udayavani, May 26, 2022, 2:28 PM IST
ಕುಷ್ಟಗಿ: ಅಲೆಮಾರಿ – ಅರೆಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ಅನುದಾನದ ಕೊರತೆ ಇದ್ದು, ಸರ್ಕಾರದಿಂದ ಇನ್ನಷ್ಟು ಅನುದಾನದ ಅಗತ್ಯವಿದೆ ಎಂದು ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಹೇಳಿದರು.
ಕುಷ್ಟಗಿಯ ಹಳೆ ಪ್ರವಾಸಿ ಮಂದಿರದ ಸುದ್ದಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮದ ಅಧ್ಯಕ್ಷನಾಗಿ ಅಧಿಕಾರವಹಿಸಿಕೊಂಡು ಒಂದೂವರೆ ವರ್ಷಗಳಲ್ಲಿ 24 ಜಿಲ್ಲಾ ಪ್ರವಾಸ ಮಾಡಿದ್ದೇನೆ. ಪ್ರವರ್ಗ-1 ರಲ್ಲಿ ಬರುವ 46 ಜಾತಿಗಳು ಈ ನಿಗಮದ ವ್ಯಾಪ್ತಿಯಲ್ಲಿವೆ. ಜಿಲ್ಲಾ ಪ್ರವಾಸದಲ್ಲಿ ಈ ಸಮುದಾಯದ ಸ್ಥಿತಿ-ಗತಿ ಕಷ್ಟ ನಷ್ಟ ಅವರ ಅಹವಾಲು ಆಲಿಸಿ ಸರ್ಕಾರಕ್ಕೆ 250 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿದ್ದೇನೆ. ಸರ್ಕಾರ 6 ಕೋಟಿ ರೂ. ನೀಡಿದ್ದು, ಇಷ್ಟು ಅನುದಾನ ಸಾಲದಾಗಿದ್ದರೂ ನಿಗಮದ ವ್ಯಾಪ್ತಿಯ ಮೀರಿ ಕೆಲಸ ಮಾಡುತ್ತಿರುವೆ. ಮುಖ್ಯಮಂತ್ರಿಯವರು ಇನ್ನಷ್ಟು ಅನುದಾನ ಭರವಸೆ ನೀಡಿರುವುದಾಗಿ ತಿಳಿಸಿದರು.
ಪ್ರತಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಯಾ ಜಿಲ್ಲೆಯ ಹಾಗೂ ಅಧಿಕಾರಿಗಳಿಗೆ ಅಲೆಮಾರಿ, ಅರೆಅಲೆಮಾರಿ ಜನರ ಬೇಕು ಬೇಡಿಕೆಗಳನ್ನು ಪ್ರಸ್ತಾಪಿಸಿ ಸಮಸ್ಯೆಗಳನ್ನು ಪರಿಹಾರ ಕಂಡುಕೊಳ್ಳುವ ಕೆಲಸ ಮಾಡುತ್ತಿರುವೆ ಎಂದರು.
ನಾನು ಅಲೆಮಾರಿ ಜನಾಂಗಕ್ಕೆ ಸೇರಿದವನಾಗದೇ ಇದ್ದರೂ ಪ್ರವರ್ಗ-1 ಅಡಿಯಲ್ಲಿರುವ 46 ಸಮುದಾಯಗಳ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಡೇರೆ ಮುಕ್ತ ಕರ್ನಾಟಕ ನನ್ನ ಮಹಾತ್ವಾಕಾಂಕ್ಷೆ ಯೋಜನೆಯಾಗಿದ್ದು ಜಿಲ್ಲಾ ಪ್ರವಾಸದ ವೇಳೆಯಲ್ಲಿ ಶೇ.95 ಅಲೆಮಾರಿ ಅರೆ ಅಲೆಮಾರಿ ಸಮುದಾಯಕ್ಕೆ ಸ್ವಂತ ಜಾಗೆ ಸೂರು ಇಲ್ಲ. ರಾಜ್ಯದ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ತಾತ್ಕಾಲಿಕ ಟೆಂಟ್, ಗುಡಿಸಲಿನಲ್ಲಿ ವಾಸವಾಗಿರುವ ಜಾಗೆ ಸರ್ಕಾರಿ ಜಾಗೆ ಆಗಿದ್ದರೆ ಅಲೆಮಾರಿ ಸಮುದಾಯದವರಿಗೆ ನೀಡಲು ಕೋರಿದ್ದೇನೆ ಎಂದರು.
ಪೂಜಾಳಿಗೆ ಪ್ರೋತ್ಸಾಹ
ಪ್ರಸಕ್ತ ಎಸ್ಸೆಸ್ಸೆಲ್ಸಿ ಯಲಬುರ್ಗಾ ತಾಲೂಕಿನ ಹೊಸಳ್ಳಿಯ ಜೋಗಿ ಸಮುದಾಯದ ಪೂಜಾ ಎಸ್ಸೆಸ್ಸೆಲ್ಸಿ ಯಲ್ಲಿ 625ಕ್ಕೆ 620 ಅಂಕ ಪಡೆದಿದ್ದಾಳೆ. ಜೋಗಿ ಸಮುದಾಯದ ಪೂಜಾಳನ್ನು ಸನ್ಮಾನಿಸಿ ಕೊಪ್ಪಳ ನವಚೇತನ ಕಾಲೇಜಿನಲ್ಲಿ ಮುಂದಿನ ವಿದ್ಯಾಭ್ಯಾಸಕ್ಕಾಗಿ ಶಿಕ್ಷಣ ಹಾಗೂ ವಸತಿಗೆ 37 ಸಾವಿರ ರೂ. ವಯಕ್ತಿಕವಾಗಿ ನೀಡಿರುವೆ ಎಂದರು. ಈ ಸಂದರ್ಭದಲ್ಲಿ ಯಮನೂರಪ್ಪ ಬಂಗ್ಲೇರ್, ಯಮನೂರಪ್ಪ ಮಂಡಲಮರಿ, ಹನುಮೇಶ ಮೇಟಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ