ಮುಂಗಾರು ಮಾಯ: ಬತ್ತಿದ ತುಂಗಭದ್ರಾ
•ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲ•ನದಿ ಪಾತ್ರದ ಗ್ರಾಮಗಳಲ್ಲಿ ಹಾಹಾಕಾರ
Team Udayavani, Jul 24, 2019, 12:30 PM IST
ಗಂಗಾವತಿ: ಮುಂಗಾರು ಮಳೆ ಕೈಕೊಟ್ಟಿದ್ದರಿಂದ ತುಂಗಭದ್ರಾ ನದಿಯಲ್ಲಿದ್ದ ನೀರು ಬತ್ತಿ ಹೋಗಿದ್ದು, ನದಿ ಪಾತ್ರದ ಗ್ರಾಮಗಳಲ್ಲಿ ನೀರಿನ ಕೊರತೆಯುಂಟಾಗಿದೆ. ನದಿಯಲ್ಲಿ ನೀರು ಬತ್ತಿರುವುದರಿಂದ ಮೀನುಗಳು ಸಾವನ್ನಪ್ಪಿವೆ. ನದಿ ಪಾತ್ರದಲ್ಲಿರುವ ರೈತರು ಭತ್ತ ನಾಟಿ ಮಾಡಲು ಹಾಕಿದ್ದ ಸಸಿ(ಭತ್ತದ)ಮಡಿಗಳು ಸಂಪೂರ್ಣ ಒಣಗಿದ್ದು, ರೈತರು ಸಾವಿರಾರು ರೂ. ನಷ್ಟಕ್ಕೊಳಗಾಗಿದ್ದಾರೆ.
ನದಿ ಪಾತ್ರದ ಗ್ರಾಮಗಳಾದ ಉಳೇನೂರು ಬೆನ್ನೂರು, ಢಣಾಪೂರ, ಬೆನ್ನೂರು, ಕಕ್ಕರಗೋಳ, ಶಾಲಿಗನೂರು, ಜಮಾಪೂರ ಭಾಗದಲ್ಲಿರುವ ರೈತರ ಭೂಮಿ ತುಂಗಭದ್ರಾ ಎಡದಂಡೆ ಕಾಲುವೆಯಿಂದ ನೀರಾವರಿ ಆಗುತ್ತಿದ್ದರೂ ಅನಧಿಕೃತ ಅಚ್ಚುಕಟ್ಟು ಪ್ರದೇಶ ಹೆಚ್ಚಾಗಿರುವುದರಿಂದ ಕೊನೆ ಭಾಗಕ್ಕೆ ಕಾಲುವೆ ನೀರು ತಲುಪುತ್ತಿಲ್ಲ. ರೈತರು ನದಿ ಮೂಲಕ ನೀರನ್ನು ಗದ್ದೆಗೆ ಹರಿಸಿ ಭತ್ತ ಬೆಳೆಯಲಾಗುತ್ತಿದ್ದು, ಕಳೆದ ವರ್ಷದಿಂದ ಮಳೆಯ ಕೊರತೆಯಿಂದಾಗಿ ನದಿಯಲ್ಲಿ ನೀರು ಇಲ್ಲದಂತಾಗಿದೆ. ನದಿಯಲ್ಲಿ ನೀರಿನ ಕೊರತೆಯಿಂದ ನೂರಾರು ಮೀನುಗಳು ಸಾವನಪ್ಪಿವೆ. ಸುತ್ತಲಿನ ಗ್ರಾಮಗಳ ಜನರು ಮೀನು ಹಿಡಿದು ಮಾರುತ್ತಿದ್ದಾರೆ. ನದಿ ಪಾತ್ರದ ಗ್ರಾಮಗಳಿಗೆ ತುಂಗಭದ್ರಾ ನದಿಯಿಂದ ಕುಡಿವ ನೀರನ್ನು ಪೂರೈಕೆ ಮಾಡಲಾಗುತ್ತಿದ್ದು, ನದಿ ಬತ್ತಿದ್ದರಿಂದ ಕುಡಿಯುವ ನೀರಿಗೂ ತಾತ್ವರವಾಗಿದೆ. ಬೋರ್ವೆಲ್ಗಳೂ ಬತ್ತಿರುವುದರಿಂದ ಜನರಿಗೆ ದಿಕ್ಕು ತೋಚದಂತಾಗಿದೆ.
ರಾಯಚೂರಿಗೆ ಮಾತ್ರ ನೀರು: ಕುಡಿಯುವ ನೀರು ಇಲ್ಲದೇ ತೊಂದರೆಯಾಗಿರುವ ರಾಯಚೂರು ಜಿಲ್ಲೆಯ ತಾಲೂಕುಗಳಿಗೆ ತುಂಗಭದ್ರಾ ಜಲಾಶಯದಿಂದ ಎಡದಂಡೆ ಕಾಲುವೆ ಮೂಲಕ 1.5 ಟಿಎಂಸಿ ಅಡಿ ನೀರನ್ನು ಹರಿಸಲಾಗುತ್ತಿದೆ. ಜು. 31ರ ವರೆಗೆ ನೀರನ್ನು ಹರಿಸಲು ಕಲಬುರ್ಗಿ ವಿಭಾಗೀಯ ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದಾರೆ. ಮಳೆ ಕೊರತೆ ಹಿನ್ನೆಲೆಯಲ್ಲಿ ರಾಯಚೂರಿನ ಕೆರೆಗಳನ್ನು ಭರ್ತಿ ಮಾಡಿಕೊಳ್ಳಬೇಕಿದೆ. ಇದಕ್ಕಾಗಿ ಎಡದಂಡೆ ಕಾಲುವೆಯುದ್ಧಕ್ಕೂ ಕೊಪ್ಪಳ ಜಿಲ್ಲಾಧಿಕಾರಿ ನಿಷೇಧಾಜ್ಞೆ ಹೇರಿದ್ದಾರೆ. ಗಂಗಾವತಿ, ಕಾರಟಗಿ, ಕನಕಗಿರಿ ತಾಲೂಕುಗಳಲ್ಲೂ ಮಳೆ ಕೊರತೆಯಿದ್ದು, ಇಲ್ಲಿಯೂ ಕುಡಿಯುವ ನೀರಿನ ಅಭಾವವುಂಟಾಗಿದೆ. ನದಿಯ ಮೂಲಕ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತಿದ್ದು, ನದಿ ಸಂಪೂರ್ಣ ಬತ್ತಿದೆ. ಸ್ವಲ್ಪ ಪ್ರಮಾಣದ ನೀರನ್ನು ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ಭಾಗದ ಕೆರೆ, ಕೃಷಿ ಹೊಂಡ ಹಾಗೂ ಎಡದಂಡೆ ಮತ್ತು ಉಪಕಾಲುವೆಗಳ ಮೂಲಕ ನದಿಗೆ ಹರಿಸಬೇಕು. ಜಲಾಶಯದಲ್ಲಿ ಸಂಗ್ರಹವಾಗಿರುವ ಸುಮಾರು 18 ಟಿಎಂಸಿ ಅಡಿ ನೀರಿನಲ್ಲಿ ಕೊಪ್ಪಳ ಜಿಲ್ಲೆಯ ತಾಲೂಕುಗಳಿಗೆ ಕುಡಿಯಲು ಹಾಗೂ ಇಲ್ಲಿರುವ ಕೆರೆ, ಕೃಷಿಹೊಂಡ ಭರ್ತಿ ಮಾಡುವ ಮೂಲಕ ಜನಜಾನುವಾರುಗಳಿಗೆ ಅನುಕೂಲ ಕಲ್ಪಿಸಬೇಕಿದೆ. ಕೊಪ್ಪಳ ಜಿಲ್ಲೆಯಲ್ಲಿ ಹೈನುಗಾರಿಕೆ ಮೂಲಕ ರೈತರು ಉತ್ತಮ ಹಣ ಪಡೆಯುತ್ತಿದ್ದು, ನೀರಿನ ಕೊರತೆಯಿಂದ ಹೈನುಗಾರಿಕೆ ಲಾಭ ಕಡಿಮೆಯಾಗಿದೆ. ಕಾಲುವೆ ಮೂಲಕ ಕುಡಿಯುವ ನೀರನ್ನು ಹರಿಸಿದರೆ ಹೈನುಗಾರಿಕೆ ಮಾಡುವವರಿಗೂ ಅನುಕೂಲ ಮಾಡಿದಂತಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್