ಮುಂಗಾರು ಮಾಯ: ಬತ್ತಿದ ತುಂಗಭದ್ರಾ

•ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲ•ನದಿ ಪಾತ್ರದ ಗ್ರಾಮಗಳಲ್ಲಿ ಹಾಹಾಕಾರ

Team Udayavani, Jul 24, 2019, 12:30 PM IST

kopala-tdy-2

ಗಂಗಾವತಿ: ಮುಂಗಾರು ಮಳೆ ಕೈಕೊಟ್ಟಿದ್ದರಿಂದ ತುಂಗಭದ್ರಾ ನದಿಯಲ್ಲಿದ್ದ ನೀರು ಬತ್ತಿ ಹೋಗಿದ್ದು, ನದಿ ಪಾತ್ರದ ಗ್ರಾಮಗಳಲ್ಲಿ ನೀರಿನ ಕೊರತೆಯುಂಟಾಗಿದೆ. ನದಿಯಲ್ಲಿ ನೀರು ಬತ್ತಿರುವುದರಿಂದ ಮೀನುಗಳು ಸಾವನ್ನಪ್ಪಿವೆ. ನದಿ ಪಾತ್ರದಲ್ಲಿರುವ ರೈತರು ಭತ್ತ ನಾಟಿ ಮಾಡಲು ಹಾಕಿದ್ದ ಸಸಿ(ಭತ್ತದ)ಮಡಿಗಳು ಸಂಪೂರ್ಣ ಒಣಗಿದ್ದು, ರೈತರು ಸಾವಿರಾರು ರೂ. ನಷ್ಟಕ್ಕೊಳಗಾಗಿದ್ದಾರೆ.

ನದಿ ಪಾತ್ರದ ಗ್ರಾಮಗಳಾದ ಉಳೇನೂರು ಬೆನ್ನೂರು, ಢಣಾಪೂರ, ಬೆನ್ನೂರು, ಕಕ್ಕರಗೋಳ, ಶಾಲಿಗನೂರು, ಜಮಾಪೂರ ಭಾಗದಲ್ಲಿರುವ ರೈತರ ಭೂಮಿ ತುಂಗಭದ್ರಾ ಎಡದಂಡೆ ಕಾಲುವೆಯಿಂದ ನೀರಾವರಿ ಆಗುತ್ತಿದ್ದರೂ ಅನಧಿಕೃತ ಅಚ್ಚುಕಟ್ಟು ಪ್ರದೇಶ ಹೆಚ್ಚಾಗಿರುವುದರಿಂದ ಕೊನೆ ಭಾಗಕ್ಕೆ ಕಾಲುವೆ ನೀರು ತಲುಪುತ್ತಿಲ್ಲ. ರೈತರು ನದಿ ಮೂಲಕ ನೀರನ್ನು ಗದ್ದೆಗೆ ಹರಿಸಿ ಭತ್ತ ಬೆಳೆಯಲಾಗುತ್ತಿದ್ದು, ಕಳೆದ ವರ್ಷದಿಂದ ಮಳೆಯ ಕೊರತೆಯಿಂದಾಗಿ ನದಿಯಲ್ಲಿ ನೀರು ಇಲ್ಲದಂತಾಗಿದೆ. ನದಿಯಲ್ಲಿ ನೀರಿನ ಕೊರತೆಯಿಂದ ನೂರಾರು ಮೀನುಗಳು ಸಾವನಪ್ಪಿವೆ. ಸುತ್ತಲಿನ ಗ್ರಾಮಗಳ ಜನರು ಮೀನು ಹಿಡಿದು ಮಾರುತ್ತಿದ್ದಾರೆ. ನದಿ ಪಾತ್ರದ ಗ್ರಾಮಗಳಿಗೆ ತುಂಗಭದ್ರಾ ನದಿಯಿಂದ ಕುಡಿವ ನೀರನ್ನು ಪೂರೈಕೆ ಮಾಡಲಾಗುತ್ತಿದ್ದು, ನದಿ ಬತ್ತಿದ್ದರಿಂದ ಕುಡಿಯುವ ನೀರಿಗೂ ತಾತ್ವರವಾಗಿದೆ. ಬೋರ್‌ವೆಲ್ಗಳೂ ಬತ್ತಿರುವುದರಿಂದ ಜನರಿಗೆ ದಿಕ್ಕು ತೋಚದಂತಾಗಿದೆ.

ರಾಯಚೂರಿಗೆ ಮಾತ್ರ ನೀರು: ಕುಡಿಯುವ ನೀರು ಇಲ್ಲದೇ ತೊಂದರೆಯಾಗಿರುವ ರಾಯಚೂರು ಜಿಲ್ಲೆಯ ತಾಲೂಕುಗಳಿಗೆ ತುಂಗಭದ್ರಾ ಜಲಾಶಯದಿಂದ ಎಡದಂಡೆ ಕಾಲುವೆ ಮೂಲಕ 1.5 ಟಿಎಂಸಿ ಅಡಿ ನೀರನ್ನು ಹರಿಸಲಾಗುತ್ತಿದೆ. ಜು. 31ರ ವರೆಗೆ ನೀರನ್ನು ಹರಿಸಲು ಕಲಬುರ್ಗಿ ವಿಭಾಗೀಯ ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದಾರೆ. ಮಳೆ ಕೊರತೆ ಹಿನ್ನೆಲೆಯಲ್ಲಿ ರಾಯಚೂರಿನ ಕೆರೆಗಳನ್ನು ಭರ್ತಿ ಮಾಡಿಕೊಳ್ಳಬೇಕಿದೆ. ಇದಕ್ಕಾಗಿ ಎಡದಂಡೆ ಕಾಲುವೆಯುದ್ಧಕ್ಕೂ ಕೊಪ್ಪಳ ಜಿಲ್ಲಾಧಿಕಾರಿ ನಿಷೇಧಾಜ್ಞೆ ಹೇರಿದ್ದಾರೆ. ಗಂಗಾವತಿ, ಕಾರಟಗಿ, ಕನಕಗಿರಿ ತಾಲೂಕುಗಳಲ್ಲೂ ಮಳೆ ಕೊರತೆಯಿದ್ದು, ಇಲ್ಲಿಯೂ ಕುಡಿಯುವ ನೀರಿನ ಅಭಾವವುಂಟಾಗಿದೆ. ನದಿಯ ಮೂಲಕ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತಿದ್ದು, ನದಿ ಸಂಪೂರ್ಣ ಬತ್ತಿದೆ. ಸ್ವಲ್ಪ ಪ್ರಮಾಣದ ನೀರನ್ನು ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ಭಾಗದ ಕೆರೆ, ಕೃಷಿ ಹೊಂಡ ಹಾಗೂ ಎಡದಂಡೆ ಮತ್ತು ಉಪಕಾಲುವೆಗಳ ಮೂಲಕ ನದಿಗೆ ಹರಿಸಬೇಕು. ಜಲಾಶಯದಲ್ಲಿ ಸಂಗ್ರಹವಾಗಿರುವ ಸುಮಾರು 18 ಟಿಎಂಸಿ ಅಡಿ ನೀರಿನಲ್ಲಿ ಕೊಪ್ಪಳ ಜಿಲ್ಲೆಯ ತಾಲೂಕುಗಳಿಗೆ ಕುಡಿಯಲು ಹಾಗೂ ಇಲ್ಲಿರುವ ಕೆರೆ, ಕೃಷಿಹೊಂಡ ಭರ್ತಿ ಮಾಡುವ ಮೂಲಕ ಜನಜಾನುವಾರುಗಳಿಗೆ ಅನುಕೂಲ ಕಲ್ಪಿಸಬೇಕಿದೆ. ಕೊಪ್ಪಳ ಜಿಲ್ಲೆಯಲ್ಲಿ ಹೈನುಗಾರಿಕೆ ಮೂಲಕ ರೈತರು ಉತ್ತಮ ಹಣ ಪಡೆಯುತ್ತಿದ್ದು, ನೀರಿನ ಕೊರತೆಯಿಂದ ಹೈನುಗಾರಿಕೆ ಲಾಭ ಕಡಿಮೆಯಾಗಿದೆ. ಕಾಲುವೆ ಮೂಲಕ ಕುಡಿಯುವ ನೀರನ್ನು ಹರಿಸಿದರೆ ಹೈನುಗಾರಿಕೆ ಮಾಡುವವರಿಗೂ ಅನುಕೂಲ ಮಾಡಿದಂತಾಗುತ್ತದೆ.

ಜಿಲ್ಲೆಯ ಕೆರೆಗಳಿಗೂ ನೀರು ಹರಿಸಿ: ರಾಯಚೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆಯಿಂದಾಗಿ ಎಡದಂಡೆ ಮೂಲಕ ರಾಯಚೂರಿಗೆ ನೀರು ಹರಿಸಲಾಗುತ್ತಿದೆ. ಗಂಗಾವತಿ, ಕನಕಗಿರಿ, ಕಾರಟಗಿ ತಾಲೂಕಿನಲ್ಲಿ ಮಳೆ ಕೊರತೆಯಿಂದ ಕುಡಿಯುವ ನೀರಿನ ತೊಂದರೆ ತಲೆದೋರಿದ್ದು, ಇಲ್ಲಿರುವ ಕೆರೆ, ಕೃಷಿ ಹೊಂಡಗಳಿಗೆ ಎಡದಂಡೆ ಉಪಕಾಲುವೆ ಮೂಲಕ ನೀರನ್ನು ಹರಿಸಬೇಕಿದೆ. ಕಲಬುರಗಿ ಪ್ರಾದೇಶಿಕ ಆಯುಕ್ತರು ಈ ಮೊದಲು ಹೊರಡಿಸಿ ಆದೇಶ ಮರುಪರಿಶೀಲಿಸಿ ಕೊಪ್ಪಳ ಜಿಲ್ಲೆಗಳ ತಾಲೂಕುಗಳಿಗೂ ಕುಡಿಯುವ ನೀರನ್ನು ಹರಿಸಲು ಸೂಚನೆ ನೀಡಬೇಕಿದೆ.
ತುಂಗಭದ್ರಾ ನದಿ ಸಂಪೂರ್ಣ ಬತ್ತಿ ಹೋಗಿದ್ದು, ಸಾವಿರಾರು ಮೀನುಗಳು ಸಾವನ್ನಪ್ಪಿವೆ. ನದಿ ನೀರು ಅವಲಂಬಿಸಿ ಕೃಷಿ ಮಾಡುವ ರೈತರ ಸಸಿ(ಭತ್ತದ)ಮಡಿಗಳು ಸಂಪೂರ್ಣ ಒಣಗಿದ್ದು, ಸಾವಿರಾರು ರೂ.ಗಳು ನಷ್ಟವಾಗಿದೆ. ನದಿ ಪಾತ್ರದ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು ಜಲಾಶಯದಿಂದ ಸ್ವಲ್ಪ ಪ್ರಮಾಣದ ನೀರನ್ನು ಕಾಲುವೆ ಮೂಲಕ ನದಿಗೆ ಹರಿಸಬೇಕಿದೆ. ಈಗಾಗಲೇ ಭತ್ತದ ಸಸಿ ಮಡಿಯಿಂದ ನಷ್ಟವಾಗಿರುವ ರೈತರಿಗೆ ಸರಕಾರ ಪರಿಹಾರ ನೀಡಬೇಕು. •ಯಮನೂರಪ್ಪ ಬೆನ್ನೂರು, ರೈತ
ನದಿ ಪಾತ್ರದ ಗ್ರಾಮಗಳಿಗೆ ತುಂಗಭದ್ರಾ ನದಿಯಿಂದ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತಿತ್ತು. ನದಿ ಸಂಪೂರ್ಣ ಬತ್ತಿರುವುದರಿಂದ ಕುಡಿಯುವ ನೀರಿನ ತೊಂದರೆ ಎದುರಾಗಿದ್ದು, ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿಗೆ ಪತ್ರ ಬರೆದು ಜಲಾಶಯದಿಂದ ನದಿ ಮತ್ತು ಕೆರೆ, ಕೃಷಿ ಹೊಂಡಗಳಿಗೆ ನೀರು ಹರಿಸುವಂತೆ ಮನವಿ ಮಾಡಲಾಗುತ್ತದೆ. ತುರ್ತಾಗಿ ಅಗತ್ಯವಿದ್ದ ಕಡೆ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ. •ಕವಿತಾ, ಕಾರಟಗಿ ತಹಶೀಲ್ದಾರ್‌
•ಕೆ.ನಿಂಗಜ್ಜ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.