ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತದ ನಾಟಿ ಡೌಟು!
•ಕೈಕೊಟ್ಟ ಮುಂಗಾರು•ಒಂದು ಬೆಳೆಗಾಗುವಷ್ಟು ನೀರಿಲ್ಲ ಡ್ಯಾಂನಲ್ಲಿ•ದಾರಿ ಕಾಣದಂತಾದ ರೈತಾಪಿ ವರ್ಗ
Team Udayavani, Jul 29, 2019, 9:12 AM IST
ಗಂಗಾವತಿ: ಭೂಮಿ ಹದ ಮಾಡಿಕೊಳ್ಳುತ್ತಿರುವ ರೈತರು.
ಗಂಗಾವತಿ: ಮುಂಗಾರು ಮಳೆ ಕೈಕೊಟ್ಟಿದ್ದರಿಂದ ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಅತ್ಯಂತ ಕಡಿಮೆ ಇದ್ದು, ಮುಂಗಾರು ಬೆಳೆಗಾಗುವಷ್ಟು ನೀರು ಸಹ ಸಂಗ್ರಹವಾಗಿಲ್ಲ. ಮತ್ತೂಮ್ಮೆ ರೈತಾಪಿ ವರ್ಗ ಸಂಕಷ್ಟದಲ್ಲಿದ್ದು, ಅಚ್ಚುಕಟ್ಟು ಪ್ರದೇಶದ ಬಹುತೇಕ ಗ್ರಾಮೀಣ ಜನರು ದುಡಿಮೆಗಾಗಿ ಬೆಂಗಳೂರು ಸೇರಿ ವಿವಿಧೆಡೆ ಗುಳೆ ಹೊರಟಿದ್ದಾರೆ.
ಪ್ರಸ್ತುತ ತುಂಗಭದ್ರಾ ಡ್ಯಾಂ ನಲ್ಲಿ 25 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಕಳೆದ ವರ್ಷ 93 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು. ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ತಡವಾಗಿದ್ದರಿಂದ ಜುಲೈ ಅಂತ್ಯವಾದರೂ ಜಲಾಶಯ ಬರಿದಾಗಿದೆ. ಇದರಿಂದ ಅಚ್ಚುಕಟ್ಟು ಪ್ರದೇಶದ ರೈತರು ಭತ್ತ ನಾಟಿ ಮಾಡದೇ ಪ್ರತಿ ದಿನ ಜಲಾಶಯದ ನೀರಿನ ಮಟ್ಟವನ್ನು ನೋಡುವಂತಾಗಿದೆ. ಮುಂಗಾರು ಭತ್ತದ ನಾಟಿ ರೈತರ ಕೈಸೇರಲು ಕನಿಷ್ಠ 45 ಟಿಎಂಸಿ ಅಡಿ ನೀರು ಬೇಕಾಗುತ್ತದೆ. ಜಲಾಶಯದಲ್ಲಿ ಇದೀಗ 25 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಒಳಹರಿವು ಸಹ ಕಳೆದ ವರ್ಷಕ್ಕೆ ಹೋಲಿಸಿದರೆ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ.
ಅಚ್ಚುಕಟ್ಟು ಪ್ರದೇಶದಲ್ಲಿ ಸುಮಾರು 12 ಲಕ್ಷ ಎಕರೆ ಪ್ರದೇಶ ನೀರಾವರಿಗೊಳಪಟ್ಟಿದ್ದು, ಸರಕಾರ ನಿಯಮಗಳ ಪ್ರಕಾರ 8 ಲಕ್ಷ ಎಕರೆ ಪ್ರದೇಶ ನೀರಾವರಿ ಪ್ರದೇಶವಾಗಿದೆ. ಕಳೆದ ವರ್ಷವೂ ಸಹ ಸರಕಾರ ನಿರ್ಲಕ್ಷ ್ಯದ ಪರಿಣಾಮವಾಗಿ ಆಗಸ್ಟ್ ಎರಡನೇ ವಾರ ಮುಂಗಾರು ಹಂಗಾಮಿನ ನೀರನ್ನು ಕಾಲುವೆಗೆ ಹರಿಸಲಾಗಿತ್ತು. ರೈತರು ಮುಂಗಡವಾಗಿ ಭತ್ತದ ಸಸಿ ಮಡಿ (ಭತ್ತದ ಸಸಿ) ಹಾಕಿದ್ದರಿಂದ ಆಗಸ್ಟ್ ಕೊನೆಯ ವಾರದ ವೇಳೆಗೆ ಭತ್ತದ ನಾಟಿ ಕಾರ್ಯ ಮುಗಿಸಿದ್ದರು.
ಮುಂಗಾರು ಹಂಗಾಮಿನ ಭತ್ತದ ಬೆಳೆ ಜುಲೈ ಮೊದಲ ವಾರದಲ್ಲಿ ನಾಟಿಯಾದರೆ ಮುಂದಿನ ಚಳಿಗಾಲಕ್ಕೆ ಸಿಗದೇ ಉತ್ತಮ ಇಳುವರಿ ಬರುತ್ತದೆ. ಚಳಿಗಾಲದಲ್ಲಿ ಭತ್ತ ತೆನೆ ಬಿಚ್ಚುವಾಗ ಚಳಿಗೆ ಸಿಕ್ಕು ತೆನೆ ಸರಿಯಾಗಿ ಬೆಳೆಯುವುದಿಲ್ಲ. ಪ್ರತಿ ವರ್ಷ ಚಳಿಗಾಲ ಆರಂಭಕ್ಕೂ ಮೊದಲು ಭತ್ತ ತೆನೆ ಬಿಚ್ಚುವ ಹಾಗೆ ರೈತರು ನಾಟಿ ಮಾಡುವುದು ಅಚ್ಚುಕಟ್ಟು ಪ್ರದೇಶದ ರೈತರ ರೂಢಿಯಾಗಿದೆ. ಈ ಭಾರಿ ಇನ್ನೂ ಸಹ ಡ್ಯಾಂನಲ್ಲಿ ನೀರು ಸಂಗ್ರಹವಾಗಿಲ್ಲ. ಆದರೂ ಕೆಲ ರೈತರು ಆಗಷ್ಟ ಕೊನೆಯ ವಾರಕ್ಕೆ ಡ್ಯಾಂಗೆ ನೀರು ಬಂದು ಕಾಲುವೆಗಳಿಗೆ ಹರಿಸುತ್ತಾರೆಂಬ ನಂಬಿಕೆಯಿಂದ ಸಸಿ ಮಡಿ ಹಾಕಿದ್ದಾರೆ. ಇನ್ನೂ ಸ್ವಲ್ಪ ರೈತರು ನದಿ ದಂಡೆ ಮತ್ತು ಪಂಪ್ ಸೆಟ್ ಹೊಂದಿರುವವರು ಈಗಾಗಲೇ ಭತ್ತ ನಾಟಿ ಮಾಡಿದ್ದಾರೆ. ಈ ಪ್ರಮಾಣ ಶೇ.05ರಷ್ಟು ಮಾತ್ರ ಕಾಲುವೆಯಿಂದಲೇ ಅತೀ ಹೆಚ್ಚು ನೀರಾವರಿ ಪ್ರದೇಶ ಇರುವುದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ.
ಕುಡಿಯುವ ನೀರಿನ ನೆಪದಲ್ಲಿ ಪೋಲು: ಕುಡಿಯುವ ನೆಪದಲ್ಲಿ ಎಡದಂಡೆ ಕಾಲುವೆಗೆ ಸುಮಾರು 1.5 ಟಿಎಂಸಿ ಅಡಿಯಷ್ಟು ನೀರನ್ನು ಹರಿಸಲಾಗುತ್ತಿದ್ದು ಮೇಲ್ಭಾಗದಲ್ಲಿ ಬಹುತೇಕ ಉಪಕಾಲುವೆಯ ಮೂಲಕ ನೀರು ಪೋಲಾಗುತ್ತಿದೆ. ಇದರಿಂದ ಪ್ರಸ್ತುತ ಡ್ಯಾಂನಲ್ಲಿ ಸಂಗ್ರಹವಾದ ನೀರನ್ನು ಅಧಿಕಾರಿಗಳು ಸರಿಯಾದ ನಿರ್ವಹಣೆಯಿಲ್ಲದೇ ಪೋಲು ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ರೈತರು ವ್ಯಾಪಕ ಟೀಕೆ ಮಾಡುತ್ತಿದ್ದಾರೆ.
ರಾಯಚೂರು, ಮಾನ್ವಿ, ಸಿಂಧನೂರು ಭಾಗದಲ್ಲಿರುವ ಕೆರೆ ಕೃಷಿ ಹೊಂಡಗಳನ್ನು ಭರ್ತಿ ಮಾಡಿ ಕೂಡಲೇ ಕಾಲುವೆ ನೀರನ್ನು ನಿಲ್ಲಿಸಿ 50 ಟಿಎಂಸಿ ಅಡಿ ನೀರು ಸಂಗ್ರಹವಾದ ಕೂಡಲೇ ರೈತರಿಗೆ ನೀರು ಹರಿಸಲು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗಮನ ಹಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ಗ್ರಾಮೀಣ ಭಾಗದ ಜನರೆಲ್ಲ ದುಡಿಯಲು ಗುಳೆ:
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ