ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಭತ್ತದ ಬೆಳೆಗೆ ನೀರಿನ ಕೊರತೆ: ಆತಂಕದಲ್ಲಿ ರೈತರು
Team Udayavani, Feb 23, 2023, 1:26 PM IST
ಗಂಗಾವತಿ: ತುಂಗಭದ್ರಾ ಡ್ಯಾಂ ನಲ್ಲಿ ನೀರಿನ ಸರಿಯಾದ ನಿರ್ವಹಣೆ ಇಲ್ಲದೇ ನೀರಿನ ಕೊರತೆ ಉಂಟಾಗಿದೆ. ಇದರಿಂದ ಮುಂಗಾರು ಹಂಗಾಮಿನಲ್ಲಿ ಬೆಳೆದು ನಿಂತಿರುವ ಭತ್ತ ಹಾಗೂ ಇತರೆ ಬೆಳೆ ರೈತರ ಕೈ ಸೇರುವುದು ಅನುಮಾನವಾಗಿದ್ದು ಅಚ್ಚುಕಟ್ಟು ಪ್ರದೇಶದ ರೈತರು ಆತಂಕದಲ್ಲಿದ್ದಾರೆ.
ಸದ್ಯ ಡ್ಯಾಂನಲ್ಲಿ 33.286 ಟಿಎಂಸಿ ನೀರಿನ ಸಂಗ್ರಹವಿದ್ದು ನೀರಾವರಿ ಸಲಹಾ ಸಮಿತಿ ಸಭೆಯ ನಿರ್ಣಯದಂತೆ ಏ.10 ವರೆಗೆ ಎಡದಂಡೆ ಕಾಲುವೆಗೆ ನೀರು ಹರಿಸಲಾಗುತ್ತದೆ. ನೀರಿನ ಕೊರತೆಯ ಹಿನ್ನೆಲೆಯಲ್ಲಿ ಮಾ.20 ವರೆಗೆ ಮಾತ್ರ ಕಾಲುವೆಗೆ ನೀರು ಹರಿಸುವ ಸಾಧ್ಯತೆ ಇದೆ. ಇದರಿಂದ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತ ಭತ್ತ ಹಾಗೂ ಇತರೆ ಬೆಳೆಗಳಿಗೆ ನೀರಿನ ಕೊರತೆಯಾಗಲಿದೆ.
ತುಂಗಭದ್ರಾ ಕಾಡಾ ಮತ್ತು ಡ್ಯಾಂ ಅಧಿಕಾರಿಗಳ ನಿರ್ಲಕ್ಷ್ಯ ದಿಂದಾಗಿ ನೀರಿನ ಸರಿಯಾದ ನಿರ್ವಾಹಣೆ ಮಾಡದೇ ಕಾಲುವೆ ಮತ್ತು ನದಿಯ ಮೂಲಕ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಕ್ಕೆ ಡಿಸೆಂಬರ್ ತಿಂಗಳಲ್ಲಿ ಸುಮಾರು 17 ಟಿಎಂಸಿ ನೀರು ಹರಿಸಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಜಲಾನಯನ ಪ್ರದೇಶದಲ್ಲಿ ಕಳೆದ ವರ್ಷ ಉತ್ತಮ ಸತತ ಮಳೆಯಾಗಿ ಡ್ಯಾಂ ಭರ್ತಿಯಾಗಿ ಹೆಚ್ಚುವರಿ 500 ಟಿಎಂಸಿಗಿಂತಲೂ ಹೆಚ್ಚು ನೀರು ನದಿಗೆ ಹೋಗಿದ್ದು ಹಾಲಿ ಕಾಡಾ ಅಧ್ಯಕ್ಷರು ಸ್ವತಹ ಅಚ್ಚುಕಟ್ಟು ಪ್ರದೇಶದ ನಿವಾಸಿಯಾಗಿದ್ದರೂ ನೀರಿನ ನಿರ್ವಾಹಣೆ ಬಗ್ಗೆ ಕಾಳಜಿ ವಹಿಸಿಲ್ಲ ಎಂಬ ಆರೋಪ ರೈತರಿಂದ ಕೇಳಿ ಬರುತ್ತಿದೆ.
ಮನವಿ ಸಲ್ಲಿಕೆ: ಬೇಸಿಗೆ ಹಂಗಾಮಿನಲ್ಲಿ ಬೆಳೆದು ನಿಂತ ಭತ್ತದ ಹಾಗೂ ಇತರೆ ಬೆಳೆಗಳಿಗೆ ತುಂಗಭದ್ರಾ ಡ್ಯಾಂನಲ್ಲಿ 6 ಟಿಎಂಸಿ ನೀರಿನ ಕೊರತೆಯುಂಟಾಗುವ ಸಾಧ್ಯತೆ ಇದೆ. ಸದ್ಯ ಡ್ಯಾಂ ನಲ್ಲಿರುವ ನೀರಿನ ಪ್ರಮಾಣ ಮಾ.20 ವರೆಗೆ ಮಾತ್ರ ಸಿಗುವ ಸಾಧ್ಯತೆ ಇದ್ದು ಬೆಳೆದು ನಿಂತ ಬೆಳೆ ರೈತರ ಕೈ ಸೇರಲು ಭದ್ರ ಡ್ಯಾಂ ನಲ್ಲಿರುವ ಹೆಚ್ಚು 10 ಟಿಎಂಸಿ ನೀರನ್ನು ತುಂಗಭದ್ರಾ ಡ್ಯಾಂ ಗೆ ಹರಿಸಲು ಕ್ರಮ ಕೈಗೊಳ್ಳುವಂತೆ ಕಾಡಾ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ರೈತ ಮುಖಂಡ ತಿಪ್ಪೇರುದ್ರಸ್ವಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಜಲಸಂಪನ್ಮೂಲ ಸಚಿವಾಲಯದ ಮುಖ್ಯ ಕಾರ್ಯದರ್ಶಿ ರಾಕೇಶ ಸಿಂಗ್ ಸೇರಿ ಸಂಸದರು,ಸಚಿವರು ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ