ಕೆರೆ- ಕಟ್ಟೆಗಳು ಜನರ ಜೀವನಾಡಿ

ಚಿಕ್ಕಮನ್ನಾಪುರ ಕೆರೆಗೆ ಬಾಗಿನ ಅರ್ಪಣೆ; ಕೆರೆಗಳ ಪುನಶ್ಚೇತನದಿಂದ ರೈತರಿಗೆ ನೆಮ್ಮದಿ

Team Udayavani, May 30, 2022, 10:59 AM IST

6

ಯಲಬುರ್ಗಾ: ಕೆರೆ, ಕಟ್ಟೆಗಳು ಜನರ ಜೀವನದ ಜೀವನಾಡಿ ಇದ್ದಂತೆ. ಕಾಲಕಾಲಕ್ಕೆ ಅವುಗಳನ್ನು ಅಭಿವೃದ್ಧಿ ಮಾಡುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದೆ ಎಂದು ಕುಷ್ಟಗಿಯ ಮದ್ದಾನಿ ಹಿರೇಮಠದ ಶ್ರೀಕರಿಬಸವ ಸ್ವಾಮೀಜಿ ಹೇಳಿದರು.

ತಾಲೂಕಿನ ಚಿಕ್ಕಮನ್ನಾಪುರ ಗ್ರಾಮದ ಹೊರ ವಲಯದಲ್ಲಿರುವ ಕೆರೆ ಮಳೆಯಿಂದಾಗಿ ಭರ್ತಿಯಾದ ಹಿನ್ನೆಲೆಯಲ್ಲಿ ಬಾಗಿನ ಅರ್ಪಣೆ, ಪೂಜಾ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಕೆರೆ, ಕಟ್ಟೆಗಳನ್ನು ನಿರ್ಮಿಸಿದಾಗ ಮಾತ್ರ ರೈತರು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗುತ್ತದೆ. ಇತ್ತೀಚೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ಸಹ ಕೆರೆಗಳ ಅಭಿವೃದ್ಧಿ ಕಾರ್ಯಕ್ಕೆ ಮುಂದಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ತಾಲೂಕಿನಲ್ಲಿ ಈ ಹಿಂದೆ 2008-09ರಲ್ಲಿ ಶಾಸಕರಾಗಿದ್ದ ಈಶಣ್ಣ ಗುಳಗಣ್ಣವರ್‌ ಅವರ ಪರಿಶ್ರಮದಿಂದ ಈ ಗ್ರಾಮದಲ್ಲಿ ಸುಮಾರು 58 ಎಕರೆ ವಿಸ್ತೀರ್ಣದಲ್ಲಿ ಹೊಸದಾಗಿ ಕೆರೆಯನ್ನು ಕಟ್ಟುವ ಮೂಲಕ ಈ ಭಾಗದ ಗ್ರಾಮೀಣ ಪ್ರದೇಶದ ರೈತರ ಜಮೀನುಗಳಿಗೆ ಅಂತರ್ಜಲ ವೃದ್ಧಿಗೆ ಕಾರಣಿಕರ್ತರಾಗಿದ್ದಾರೆ ಎಂದು ಮಾಜಿ ಶಾಸಕ ಈಶಣ್ಣನವರನ್ನು ಶ್ರೀಗಳು ಸ್ಮರಿಸಿದರು.

ಕೇವಲ ರಸ್ತೆ, ಬಿಲ್ಡಿಂಗ್‌ ಶಾಲಾ-ಕಾಲೇಜು ಕಟ್ಟಿದರೆ ಅಭಿವೃದ್ಧಿಯಲ್ಲ. ಗ್ರಾಮೀಣ ಪ್ರದೇಶದ ಜನರ ಬದುಕು ಬಂಗಾರವಾಗಲು ಕೆರೆಗಳ ಪುನಶ್ಚೇತನಕ್ಕೆ ಕಾಯಕಲ್ಪ ಮಾಡಬೇಕು. ಆ ನಿಟ್ಟಿನಲ್ಲಿ ಅಂದು ಶಾಸಕರಾಗಿದ್ದ ಈಶಣ್ಣ ಗುಳಗಣ್ಣವರ ಈ ಭಾಗಕ್ಕೆ ದೊಡ್ಡ ಕೆರೆಗಳನ್ನು ನಿರ್ಮಿಸಿದ್ದರಿಂದ ಸುತ್ತಮುತ್ತಲಿನ ಹಳ್ಳಿಗಳಿಗೆ ಅನುಕೂಲವಾಗಿದ್ದು, ಹನಿ ನೀರಾವರಿಗೆ ಸಹಕಾರಿಯಾಗಿದೆ. ಇಂತಹ ಶಾಶ್ವತ ಯೋಜನೆಗಳು ಜನಸಾಮಾನ್ಯರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿವೆ. ಈಶಣ್ಣನವರು ಇಂದು ನಮ್ಮನ್ನು ಅಗಲಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದಲ್ಲಿ ಇಂದಿಗೂ ಜೀವಂತವಾಗಿವೆ ಎನ್ನುವುದು ಈ ಕೆರೆಗಳೇ ಸಾಕ್ಷಿ ಎಂದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ ಗುಳಗಣ್ಣವರ್‌ ಮಾತನಾಡಿ, ನಮ್ಮ ತಂದೆಯವರು ಶಾಸಕರಾಗಿದ್ದ ವೇಳೆ ಈ ಗ್ರಾಮಕ್ಕೆ ಕೆರೆಯನ್ನು ಮಂಜೂರು ಮಾಡಿಸಿದ್ದಾರೆ. ಪ್ರತಿವರ್ಷ ಮಳೆ ಬಂದಾಗ ದೊಡ್ಡ ಪ್ರಮಾಣದಲ್ಲಿ ನೀರು ಸಂಗ್ರಹಗೊಂಡು ವರ್ಷವಿಡಿ ಜನ, ಜಾನುವಾರು, ಜಮೀನುಗಳಿಗೆ ನೀರು ಉಪಯೋಗವಾಗುತ್ತಿರುವುದು ಸಂತಸ ತಂದಿದೆ. ಮುಂದಿನ ವರ್ಷದ ಬೇಸಿಗೆ ವೇಳೆಗೆ ಶ್ರೀಕರಿಬಸವೇಶ್ವರ ಸ್ವಾಮಿಗಳ ನೇತೃತ್ವದಲ್ಲಿ ನಮ್ಮ ಕುಟುಂಬ ಮತ್ತು ಅಭಿಮಾನಿಗಳ ವತಿಯಿಂದ ಈ ಕೆರೆಯ ಜೀರ್ಣೋದ್ಧಾರಕ್ಕೆ ಮುಂದಾಗುತ್ತೇವೆ. ಕ್ಷೇತ್ರದ ಜನರಿಗೆ ಸಮಾಜಮುಖೀ ಸೇವೆಗಾಗಿ ನಾವು ಸದಾ ಸಿದ್ಧರಿದ್ದೇವೆ ಎಂದರು.

ಗ್ರಾಪಂ ಅಧ್ಯಕ್ಷೆ ಸಿದ್ಧಮ್ಮ ತಳವಾರ, ಮುಖಂಡರಾದ ಶರಣಯ್ಯ ಹಿರೇಮಠ, ಸೋಮಣ್ಣ ಮೂಲಿ, ಸಂಗನಗೌಡ ಮಾಲಿಪಾಟೀಲ್‌, ವಿಜಯ ತಾಳಕೇರಿ, ಆದೇಶ ರೊಟ್ಟಿ, ಪ್ರಕಾಶ ಬೋರಣ್ಣನವರ, ಯಮನೂರಪ್ಪ ಬೇವೂರು, ಯಮನೂರಪ್ಪ ನಿಡಶೇಸಿ, ಧರೇಶ ಧೂಳಿ, ಪ್ರಭಾಕರ ನಿಡಶೇಸಿ, ಸೋಮಶೇಖರಗೌಡ ಸೋಂಪುರ, ಹನುಮಂತಪ್ಪ ಮುರಡಿ, ಪರಶುರಾಮ ನಿಡಶೇಸಿ, ಶಿವನಪ್ಪ ಕಬ್ಬಣ್ಣವರ, ನಿಂಗಪ್ಪ ದಳಪತಿ, ಮಾನಯ್ಯ ಕಮ್ಮಾರ, ಯೋಗೇಂದ್ರ ಕಮ್ಮಾರ, ಶರಣಮ್ಮ ಮೆಣೇದಾಳ, ಬಸಮ್ಮ ನಿಡಶೇಸಿ, ಶರಣಮ್ಮ, ಬಾಳಪ್ಪ ಲದ್ದಿ, ಮಾರುತಿ ಕೊಂಗಿ, ಶಂಕ್ರಪ್ಪ ಮೇಟಿ ಇತರರಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.