ಗಂಗಾವತಿ: ಆನೆಗೊಂದಿ ಬೆಟ್ಟದಲ್ಲಿ ಮತ್ತೆ ಪ್ರತ್ಯಕ್ಷವಾದ ಚಿರತೆ!
Team Udayavani, Oct 16, 2020, 11:23 AM IST
ಗಂಗಾವತಿ: ತಾಲೂಕಿನ ಆನೆಗೊಂದಿ ಬೆಟ್ಟಪ್ರದೇಶದ ಗ್ರಾಮಗಳಲ್ಲಿ ಚಿರತೆ ಹಾಗೂ ಕರಡಿ ಹಾವಳಿ ಮುಂದುವರಿದ್ದು ಗುರುವಾರ ಸಂಜೆ ಆನೆಗೊಂದಿ ತಳವಾರ ಘಟ್ಟ ಗುಡ್ಡದ ಗವಿಯಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿ ಜನರಲ್ಲಿ ಭಯವುಂಟು ಮಾಡಿದೆ.
ಕಳೆದ ಒಂದು ವಾರದಿಂದ ಆನೆಗೊಂದಿ ಸಾಣಾಪೂರ ಮಲ್ಲಾಪೂರ ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳ ಹತ್ತಿರ ಇರುವ ಬೆಟ್ಟ ಗುಡ್ಡ ಪ್ರದೇಶದಲ್ಲಿ ಚಿರತ ಮತ್ತು ಕರಡಿಗಳು ನಿತ್ಯವೂ ಪ್ರತ್ಯಕ್ಷವಾಗುತ್ತಿದ್ದು ಇದರಿಂದ ಜನರು ಗ್ರಾಮ ಬಿಟ್ಟು ಹೊರಗೆ ಬಾರದ ಸ್ಥಿತಿಯುಂಟಾಗಿದೆ. ಜಂಗ್ಲಿ ರಂಗಾಪೂರ ಗ್ರಾಮದ ಆಂಜನೇಯ ಸ್ವಾಮಿ ದೇಗುಲಕ್ಕೆ ಕರಡಿಗಳು ಆಗಮಿಸಿ ಬಾಗಿಲು ಮುರಿದು ಒಳಗಿದ್ದ ದೀಪದ ಎಣ್ಣೆ ಕುಡಿದು ಹೋಗಿವೆ. ಆದರೆ ಜನ ಜಾನುವಾರುಗಳಿಗೆ ತೊಂದರೆ ಕೊಟ್ಟಿಲ್ಲ. ಆನೆಗೊಂದಿ ತುಂಗಭದ್ರಾ ನದಿ ಹತ್ತಿರ ತಳವಾರ ಘಟ್ಟ ಬೆಟ್ಟದ ಗುಹೆಯಲ್ಲಿ ಚಿರತೆಯೊಂದು ಎರಡು ದಿನಗಳಿಂದ ವಾಸವಾಗಿದ್ದು ಅಗಾಗ ಗುಹೆಯಿಂದ ಹೊರಗೆ ಆಗಮಿಸಿ ಸಮೀಪದ ಕಲ್ಲು ಬಂಡೆಯ ಮೇಲೆ ಮಲಗುತ್ತಿದೆ.
ತಳವಾರ ಘಟ್ಟ ಬೆಟ್ಟದ ಗುಹೆ ಹತ್ತಿರ ಬೋನ್ ಇಟ್ಟು ಚಿರತೆ ಸೆರೆ ಹಿಡಿಯುವಂತೆ ಜನರು ಒತ್ತಾಯಿಸಿದ್ದಾರೆ.
ವಾಲಿಕೀಲ್ಲಾ ಆದಿಶಕ್ತಿ ದೇಗುಲದ ಬಳಿ ಗುರುವಾರ ಬೆಳಗಿನ ಜಾವ ಅರಣ್ಯ ಇಲಾಖೆಯ ಬೋನಿಗೆ 04 ವರ್ಷದ ಚಿರತೆ ಬಿದ್ದಿತ್ತು. ಈ ಮಧ್ಯೆ ತಳವಾರ ಘಟ್ಟ ಬೆಟ್ಟದಲ್ಲಿ ಚಿರತೆ ಕಂಡು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ