Gangavati ಔಷಧಿಕೊಳ್ಳಲು, ಮಕ್ಕಳ ಫೀಸ್ ಕಟ್ಟಲು ವೇತನ ಬಿಡುಗಡೆಗೆ ಉಪನ್ಯಾಸಕರ ಆಗ್ರಹ
Team Udayavani, Dec 13, 2023, 5:36 PM IST
ಗಂಗಾವತಿ: ಕುಟುಂಬದಲ್ಲಿ ಅನಾರೋಗ್ಯ ಇರುವವರಿಗೆ ಔಷಧಿಕೊಳ್ಳಲು, ಮಕ್ಕಳ ಶಾಲಾ ಕಾಲೇಜು ಫೀಸ್ ಕಟ್ಟಲು,ಕಿರಾಣಿ ಬಾಕಿ ಪಾವತಿಸಲು ಹಣವಿಲ್ಲ ಸಾಲ ಮಾಡಿ ಬದುಕು ನಡೆಸುತ್ತಿದ್ದು ಮೂರು ತಿಂಗಳ ವೇತನ ಪಾವತಿಸುವಂತೆ ಆಗ್ರಹಿಸಿ ಕೊಲ್ಲಿನಾಗೇಶ್ವರರಾವ್ ಸರಕಾರಿ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕರು ಪ್ರಾಚಾರ್ಯರ ವಿರುದ್ಧ ಪ್ರತಿಭಟನೆ ನಡೆಸಿ ಕೂಡಲೇ ಮಧ್ಯ ಪ್ರವೇಶ ಮಾಡಿ ವೇತನ ಬಿಡುಗಡೆ ಮಾಡಿಸುವಂತೆ ಮುಖ್ಯಮಂತ್ರಿಗಳಿಗೆ, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಗಳಿಗೆ,ಮಾನವ ಹಕ್ಕು ಆಯೋಗ,ಉನ್ನತ ಶಿಕ್ಷಣ ಖಾತೆ ಸಚಿವರಿಗೆ, ಆಯುಕ್ತರಿಗೆ, ಜಂಟಿ ನಿರ್ದೇಶಕರಿಗೆ ಮನವಿ ಪತ್ರಗಳನ್ನು ಅಂಚೆ ಮೂಲಕ ಅತಿಥಿ ಉಪನ್ಯಾಸಕರು ಸಲ್ಲಿಸಿದರು.
ಅಕ್ಕಪಕ್ಕದ ಕಾಲೇಜುಗಳ ಪ್ರಾಚಾರ್ಯರು ಅತಿಥಿ ಉಪನ್ಯಾಸಕರ ವೇತನ ಮಾಡಿದ್ದು ಗಂಗಾವತಿ ಕಾಲೇಜಿನ ಪ್ರಾಚಾರ್ಯ 78 ಜನರ ಪೈಕಿ 13 ಜನರ ವೇತನ ಪಾವತಿ ಮಾಡಿದ್ದು ಉಳಿದವರು ಜೀವನ ನಡೆಸುವುದು ಕಷ್ಟವಾಗಿದೆ. ಕಳೆದ ಮೂರು ತಿಂಗಳಿಂದ ಸಂಬಳವಿಲ್ಲದೆ ಅತಿಥಿ ಉಪನ್ಯಾಸಕರ ಜೀವನ ನರಕ ಸದೃಶವಾಗಿದೆ. ಸಾಲ ಸೋಲ ಮಾಡಿ ಜೀವನ ಸಾಗಿಸುತಿದ್ದು ಸಂಬಳ ನೀಡಬಾರದು ಎನ್ನುವ ಯಾವುದೇ ಲಿಖಿತ ಆದೇಶವಿಲ್ಲದೇ ಸಂಬಳ ನೀಡದೇ ಸತಾಯಿಸಲಾಗುತ್ತಿದೆ. ಸಂಬಳವಿಲ್ಲದೆ ಜೀವನ ನಡೆಸುವುದು ಕಷ್ಟಕರವಾಗಿದೆ.ಕಿರಾಣಿ,ಮಕ್ಕಳ ಫೀಸ್, ಔಷಧಿ ದಿನನಿತ್ಯ ಖರ್ಚಿಗೆ ಹಣವಿಲ್ಲದೇ ಒದ್ದಾಡುತ್ತಿರುವ ಮೂರು ತಿಂಗಳ ವೇತನ ಬಿಡುಗಡೆ ಮಾಡಬೇಕು. ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸಿ.ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕೆಂದು ಮನವಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಎ.ಕೆ.ಮಹೇಶಕುಮಾರ. ಬಸವರಾಜ ಗೌಡನಬಾವಿ, ಪಾಗುಂಡಪ್ಪ, ಕಳಕಪ್ಪ, ದೊಡ್ಡ ಬಸಮ್ಮ ಶಾಹೀನ್ ಕೌಸರ್, ಲಕ್ಷ್ಮೀ ಚಿದ್ರಿ, ರೇಣುಕಾ, ಪರ್ವಿನ್ ಸುಲ್ತಾನ್, ಮುದುಕನಗೌಡ,ಬಾಲಪ್ಪ ನಾಯಕ, ಗುಂಡೂರು ಪವನ್ ಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ