ಸೋನಿಯಾ ಗಾಂಧಿ ನಗರದ ಬಳಿ ಚಿರತೆ ಪ್ರತ್ಯಕ್ಷ
Team Udayavani, Jul 5, 2021, 9:47 PM IST
ಗಂಗಾವತಿ:ಆನೆಗೊಂದಿ ಭಾಗದಲ್ಲಿ ಪುನಃ ಚಿರತೆಗಳು ಪ್ರತ್ಯಕ್ಷವಾಗುತ್ತಿದ್ದು ಸೋಮವಾರ ಸಂಜೆ ಸೋನಿಯಾಗಾಂಧಿ ನಗರದ ಬಳಿ ಚಿರತೆಯೊಂದು ಗುಡ್ಡದ ಮೇಲೆ ಪ್ರತ್ಯಕ್ಷವಾಗಿದೆ. ಸ್ಥಳೀಯರು ಈ ಚಿರತೆಯ ಫೋಟೋವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.
ಆನೆಗೊಂದಿ ಭಾಗದ ಅಂಜನಾದ್ರಿ ಬೆಟ್ಟ ಸೇರಿದಂತೆ ಇತರೆ ಬೆಟ್ಟಗಳಲ್ಲಿ ಕಳೆದ 1 ವರ್ಷಗಳಿಂದ ಚಿರತೆಗಳು ಪ್ರತ್ಯಕ್ಷವಾಗಿದ್ದು ಈಗಾಗಲೇ ಜನರನ್ನು ಕೊಂದು ಹಾಕಿವೆ ಹಲವು ಜನ ಮತ್ತು ಜಾನುವಾರುಗಳ ಮೇಲೆ ಚಿರತೆಗಳು ದಾಳಿ ನಡೆಸಿವೆ.
ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಸುಮಾರು 3 ಚಿರತೆಗಳನ್ನು ಬೋನು ಇರಿಸಿ ಸೆರೆಹಿಡಿಯಲಾಗಿದೆ.ಚಿರತೆಯ ಉಪಟಳದಿಂದ ಸುಮಾರು ಇಪ್ಪತ್ತೈದು ದಿನಗಳ ಕಾಲ ಅಂಜನಾದ್ರಿ ಪಂಪಾಸರೋವರ ಆದಿಶಕ್ತಿ ದೇಗುಲಗಳನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧ ಮಾಡಲಾಗಿತ್ತು.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಚಿರತೆಯ ಚಲನವಲನ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ
ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ