ಶಾಸಕರು ಪ್ರಾಮಾಣಿಕರಾಗಿದ್ರೆ ತನಿಖೆ ಮಾಡಿಸಲಿ: ತಂಗಡಗಿ

ಜೂ.4ರಂದು ಜಿಪಂ ಕಚೇರಿ ಮುಂದೆ ಧರಣಿ ದಾಖಲೆ ಬಿಡುಗಡೆ ಬಳಿಕ ರಸ್ತೆ ಕೆಲಸ ಮಾಡಿಸ್ತಿದ್ದಾರೆ

Team Udayavani, May 24, 2020, 10:32 AM IST

ಶಾಸಕರು ಪ್ರಾಮಾಣಿಕರಾಗಿದ್ರೆ ತನಿಖೆ ಮಾಡಿಸಲಿ: ತಂಗಡಗಿ

ಕೊಪ್ಪಳ: ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ 78 ಕಾಮಗಾರಿಗಳು ಬೋಗಸ್‌ ಆಗಿರುವ ವಿಚಾರದಲ್ಲಿ ಶಾಸಕ ಬಸವರಾಜ ದಡೇಸುಗೂರು ಅವರು ಪ್ರಾಮಾಣಿಕರಾಗಿದ್ದರೆ ತನಿಖೆ ಮಾಡಿಸಲಿ. ಇಲ್ಲವಾದರೆ ಜೂ.4ರಂದು ಜಿಪಂ ಕಚೇರಿ ಎದುರು ಕಾಂಗ್ರೆಸ್‌ ಮುಖಂಡರೊಂದಿಗೆ ಧರಣಿ ನಡೆಸಬೇಕಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಚೆಗೆ ಕನಕಗಿರಿ ಕ್ಷೇತ್ರದಲ್ಲಿ 4 ಕೋಟಿ ರೂ. ವೆಚ್ಚದ 78 ಕಾಮಗಾರಿಗಳು ಬೋಗಸ್‌ ಆಗಿವೆ. ಬಿಲ್‌ ಎತ್ತುವಳಿ ಮಾಡಿದ್ದಾರೆಂದು ದಾಖಲೆಗಳ ಸಮೇತ ಸುದ್ದಿಗೋಷ್ಠಿ ಮಾಡಿದ್ದೆ. ಇದರಿಂದ ಎಚ್ಚೆತ್ತ ಶಾಸಕರು, ಆ ರಸ್ತೆ ಕಾಮಗಾರಿ ಆರಂಭ ಮಾಡಿದ್ದಾರೆ. ನನ್ನಲ್ಲಿ ಮೊದಲು ಕೆಲಸ ಮಾಡದೇ ಇರುವ ಹಾಗೂ ಈಗ ಕೆಲ ರಸ್ತೆ ಕಾಮಗಾರಿ ಮಾಡುತ್ತಿರುವ ಫೋಟೋ, ವಿಡಿಯೋ ದಾಖಲೆ ಇವೆ ಎಂದರು.

ಈ ಕಾಮಗಾರಿಗಳಲ್ಲಿ ಜೆಇ, ಎಇ, ಎಇಇ, ಗುತ್ತಿಗೆದಾರ ಸೇರಿ ಶಾಸಕರ ಮೇಲೂ ನಮಗೆ ಅನುಮಾನ ಬಂದಿದೆ. ಕೆಲಸ ಮಾಡದೇ ಬಿಲ್‌ ಎತ್ತುವಳಿ ಮಾಡುತ್ತಿದ್ದಾರೆ. ಈ ಬಗ್ಗೆ ತನಿಖೆಗೂ ಒತ್ತಾಯಿಸಿ, ಸಿಇಒಗೆ ಮನವಿ ಸಲ್ಲಿಸಿದ್ದೆ. ಸಿಇಒ ಸಹಿತ ವರದಿ ಬಂದ ಬಳಿಕ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಹಾಗಾಗಿ ಜೂ.4ರವರೆಗೂ ಅವರಿಗೆ ಗಡುವು ನೀಡಲಾಗಿದೆ. ಅಷ್ಟರೊಳಗೆ ಕ್ರಮ ಕೈಗೊಳ್ಳದಿದ್ದರೆ ಜಿಪಂ ಸಿಇಒ ಕಚೇರಿ ಮುಂದೆ ಧರಣಿ ನಡೆಸಲಿದ್ದೇವೆ ಎಂದರು.
ಬೋಗಸ್‌ ಬಿಲ್‌ ಕುರಿತು, ಆರ್‌ಡಿಪಿಆರ್‌ ಸಚಿವರು ಸೇರಿದಂತೆ ಸಂಬಂಧಿ ತ ಎಲ್ಲರಿಗು ಪತ್ರ ಬರೆದಿದ್ದೇನೆ. ಶಾಸಕ ಬಸವರಾಜ ದಡೇಸುಗೂರು ಅವರು ಬೋಗಸ್‌ ಆಗಿಲ್ಲ, ಅಕ್ರಮ ನಡೆದಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಹೇಳುತ್ತಿದ್ದಾರಲ್ಲ. ಹಾಗಾದರೆ, ಅವರು ಪ್ರಮಾಣಿಕರಾಗಿದ್ದರೆ ಇದನ್ನು ತನಿಖೆಗೆ ಒಪ್ಪಿಸಲಿ. ನಾನು ಈ ಹಿಂದೆ ಮಂತ್ರಿಯಾಗಿದ್ದಾಗ ನನ್ನ ಮೇಲೆ ಆಪಾದನೆ ಬಂದಾಗ ಸಿಒಡಿ ತನಿಖೆಗೆ ಒಪ್ಪಿಸಿದ್ದೆ. ಆ ತನಿಖಾ ವರದಿಯನ್ನಾದರೂ ಒಪ್ಪಿ ಬಿಜೆಪಿ ಸರ್ಕಾರ ಬಹಿರಂಗ ಪಡಿಸಲಿ ಎಂದರಲ್ಲದೇ, ನಾನು ಬಂಗಾರದ ಚಮಚ ಬಾಯಲ್ಲಿಟ್ಟುಕೊಂಡು ಬೆಳೆದಿಲ್ಲ.  ನಾನೊಬ್ಬ ಗೌಂಡಿ ಮಗ, ಬಡ ಕುಟುಂಬದಿಂದ ಬಂದಿದ್ದೇನೆ. ನನ್ನ ಆಸ್ತಿಯ ಕುರಿತು ಬೇಕಿದ್ದರೆ ಅವರದ್ದೇ ಸರ್ಕಾರ ತನಿಖೆ ಮಾಡಿಸಲಿ ಎಂದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುರೇಶ ಭೂಮರಡ್ಡಿ, ಕಾಟನ್‌ ಪಾಷಾ, ರಡ್ಡಿ ಶ್ರೀನಿವಾಸ ಇತರರು ಇದ್ದರು.

ರಾಜ್ಯ ಸರ್ಕಾರ ಗ್ರಾಮ ಪಂಚಾಯತಿಗೆ ನೇರ ಸದಸ್ಯರ ನಾಮ ನಿರ್ದೇಶನ ಮಾಡುವ ಚಿಂತನೆ ನಡೆಸಿದ್ದು, ಕೂಡಲೇ ಇದನ್ನು ಕೈಬಿಡಬೇಕು. ಇದರಿಂದ ಪಂಚಾಯತ್‌ ರಾಜ್‌ ವ್ಯವಸ್ಥೆಗೆ ಧಕ್ಕೆಯಾಗಲಿದೆ. ಈ ಕುರಿತು ನಾವೂ ಸರ್ಕಾರದ ಗಮನ ಸೆಳೆಯಲಿದ್ದೇವೆ. ಇನ್ನು ಸಚಿವ ಮಾಧುಸ್ವಾಮಿ ಅವರು ಮಹಿಳೆಗೆ ಅವಾಚ್ಯ ಶಬ್ದವನ್ನು ಬಳಸಿದ್ದು ಸರಿಯಲ್ಲ. ಕೂಡಲೇ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.
ಶಿವರಾಜ ತಂಗಡಗಿ, ಮಾಜಿ ಸಚಿವ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.