ಬಜೆಟ್‌ನಲ್ಲಿ ಘೋಷಣೆಯಾದ ಜಾನಪದ ಲೋಕ ವಿರುಪಾಪುರಗಡ್ಡಿಯಲ್ಲಿ ಸ್ಥಾಪಿತವಾಗಲಿ

ಕಿಷ್ಕಿಂಧಾ ಬೆಟ್ಟ ಪ್ರದೇಶದ ಇತಿಹಾಸ ಸಾರಲು ಸಾಧ್ಯ... ಡಾ|ಶರಣಬಸಪ್ಪ ಕೋಲ್ಕಾರ್ ಮನವಿ

Team Udayavani, Jul 9, 2023, 7:22 PM IST

1wqqwewq

ಗಂಗಾವತಿ: ರಾಜ್ಯ ಸರಕಾರದ ಬಜೆಟ್‌ನಲ್ಲಿ ಕೊಪ್ಪಳ ಜಿಲ್ಲೆಗೆ ಜಾನಪದ ಲೋಕ ಸ್ಥಾಪನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದು ಇಡೀ ಜಿಲ್ಲೆಯ ಜನತೆಗೆ ಹರ್ಷ ತಂದಿದ್ದು ಈ ನಿಯೋಜಿತ ಜಾನಪದ ಲೋಕವನ್ನು ತಾಲೂಕಿನ ವಿಶ್ವಪರಂಪರಾ ಪ್ರದೇಶವಾಗಿರುವ ವಿರೂಪಾಪುರಗಡ್ಡಿಯಲ್ಲಿ ಸ್ಥಾಪಿಸುವ ಮೂಲಕ ಮೂಲ ಪರಂಪರೆಯನ್ನು ಉಳಿಸುವಂತೆ ಪ್ರಾಗೈತಿಹಾಸಿಕ ಸಂಶೋಧಕ ಡಾ|ಶರಣಬಸಪ್ಪ ಕೋಲ್ಕಾರ್ ಸರಕಾರವನ್ನು ಮನವಿ ಮಾಡಿದ್ದಾರೆ.

ಪ್ರಸ್ತುತ ಯೋಜಿತ ಜಾನಪದ ಲೋಕವನ್ನು ಪ್ರಾಗೈತಿಹಾಸಿಕವಾಗಿ, ಚಾರಿತ್ರಿಕವಾಗಿ, ಪೌರಾಣಿಕವಾಗಿ ಸಮೃದ್ಧ ಪರಂಪರೆ ಹೊಂದಿರುವ ಆನೆಗೊಂದಿ ಭಾಗದಲ್ಲಿ ಸ್ಥಾಪಿಸುವುದು ಅತ್ಯಂತ ಸಮಂಜಸವೆಂದು ಇತಿಹಾಸ ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ ಅಭಿಪ್ರಾಯಪಟ್ಟಿದ್ದಾರೆ.

ವಿಶ್ವ ಪರಂಪರೆಯ ತಾಣವಾದ ಹಂಪಿಯ ಒಂದು ಭಾಗವೇ ಆನೆಗೊಂದಿ ಪ್ರದೇಶ. ಪೌರಾಣಿಕವಾಗಿ ಪಂಪಾ ಕ್ಷೇತ್ರವೆಂದು, ರಾಮಾಯಣ ಮಹಾಕಾವ್ಯದ ಕಿಷ್ಕಿಂಧಾ ರಾಜ್ಯವೆಂದು ಪ್ರಸಿದ್ಧವಾಗಿದೆ .ಮತ್ತು ಇಲ್ಲಿಯೇ ಆಂಜನೇಯನ ಜನ್ಮಸ್ಥಳ ಅಂಜನಾದ್ರಿ ಇದ್ದು ಇದೀಗ ಭಾರತದಾದ್ಯಂತ ಅತ್ಯಂತ ಪ್ರಖ್ಯಾತಿ ಪಡೆದಿದೆ. ವಿಜಯನಗರ ಸಾಮ್ರಾಜ್ಯದ ಮಾತೃಸ್ಥಾನವು ಕೂಡ ಈ ಆನೆಗುಂದಿಯೇ ಆಗಿತ್ತು.ಇಲ್ಲಿಯ ಹಿರೇಬೆಣಕಲ್ ಸಹಿತ ಸುತ್ತಮುತ್ತಲು ಅನೇಕ ಪ್ರಾಚೀನ ಮಾನವನ ಅವಶೇಷಗಳು, ಸಾವಿರಾರು ಶಿಲಾಯುಗದ ಗವಿಚಿತ್ರಗಳು ಇದ್ದು ದಕ್ಷಿಣಭಾರತದ ಭೀಂಭೇಟ್ಕಾ ( ದೇಶದಲ್ಲಿಯೇ ಅತೀ ಹೆಚ್ಚಿನ ಗವಿ ಚಿತ್ರಗಳಿರುವ ಮಧ್ಯಪ್ರದೇಶದ ಸ್ಥಳ) ಎನಿಸಿದೆ.ಜೊತೆಗೆ ಚಾರಿತ್ರಿಕ ಕಾಲದ ಕೋಟೆ ಕೊತ್ತಲಗಳು, ದೇವಾಲಯ, ಮಂಟಪ, ಸ್ಮಾರಕ ,ಶಿಲ್ಪಗಳಿಂದ ಈ ಪ್ರದೇಶ ತುಂಬಿಹೋಗಿದೆ. ತುಂಗಭದ್ರಾ ನದಿ ಪರಿಸರದ ಈ ಪ್ರದೇಶ ನಿಭೀಡ ಬೆಟ್ಟಗುಡ್ಡಗಳಿಂದ ಕೂಡಿ ಪ್ರಾಕೃತಿಕವಾಗಿ ಅತ್ಯಂತ ರಮಣೀಯವಾಗಿದೆ. ಇಲ್ಲಿ ಅನೇಕ ಪ್ರಕಾರದ ಜಾನಪದ ಪರಂಪರೆ ಇನ್ನೂ ಜೀವಂತವಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರ ಆನೆಗುಂದಿ ಭಾಗದ ವಿರುಪಾಪುರ ಗಡ್ಡೆಯಲ್ಲಿ ಜಾನಪದ ಲೋಕವನ್ನು ಸ್ಥಾಪಿಸಬೇಕೆಂದು ಮನವಿ ಮಾಡಲಾಗುತ್ತಿದೆ .ಅಲ್ಲಿ ಸರಕಾರದ ಸುಮಾರು 300 ಎಕರೆಯಷ್ಟು ಜಮೀನು ಲಭ್ಯವಿದೆ. ಅದನ್ನ ಬಳಸಿಕೊಂಡು ಸುಂದರವಾದ ಜಾನಪದ ಲೋಕವನ್ನು ನಿರ್ಮಿಸಬಹುದಾಗಿದೆ. ಇದರಿಂದ ಅಂಜನಾದ್ರಿ ಆನೆಗೊಂದಿ ಭಾಗಕ್ಕೆ ಆಗಮಿಸುವ ದೇಶ ವಿದೇಶಗಳ ಪ್ರವಾಸಿಗರಿಗೆ ನಮ್ಮ ನಾಡಿನ ಜಾನಪದ ಪರಂಪರೆಯನ್ನು ಪರಿಚಯಿಸಲು ಅವಕಾಶವಾದಂತಾಗುತ್ತದೆ.

ಈ ಬಗೆಗೆ ಸರಕಾರ ಆಸಕ್ತಿಯನ್ನು ವಹಿಸಬೇಕು ಮತ್ತು ಜಿಲ್ಲಾಡಳಿತ ವಿರುಪಾಪುರ ಗಡ್ಡ್ಡಿಯಲ್ಲಿ ಜಾನಪದ ಲೋಕವನ್ನು ಸ್ಥಾಪಿಸಲು ಸರಕಾರಕ್ಕೆ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಬೇಕು.ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಶಾಸಕ ಜನಾರ್ದನ್ ರೆಡ್ಡಿ ಅವರು ತಕ್ಷಣ ಪ್ರಯತ್ನಶೀಲರಾಗಬೇಕೆಂದು ಕೋಲ್ಕಾರ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.