ಪಿಡಿಒ ಕೇಂದ್ರ ಸ್ಥಾನದಲ್ಲೇ ಇರಲಿ

•ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ•ಕಚೇರಿಗಳಲ್ಲಿ ಶೌಚಾಲಯ ನಿರ್ಮಿಸಿ

Team Udayavani, Jun 16, 2019, 11:44 AM IST

kopala-tdy-1..

ಯಲಬುರ್ಗಾ: ತಾಪಂ ಸಭಾಭವನದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಅಧ್ಯಕ್ಷ ಎಚ್. ವಿಶ್ವನಾಥರಡ್ಡಿ ಮಾತನಾಡಿದರು.

ಯಲಬುರ್ಗಾ: ಪಿಡಿಒಗಳು ಕಡ್ಡಾಯವಾಗಿ ಕಾರ್ಯ ನಿರ್ವಹಿಸುವ ಗ್ರಾಪಂ ಕೇಂದ್ರ ಸ್ಥಾನದಲ್ಲಿ ವಾಸಿಸಬೇಕು ಹಾಗೂ ಗ್ರಾಪಂ ರಿಜಿಸ್ಟರ್‌ ಪುಸ್ತಕದಲ್ಲಿ ತಮ್ಮ ನಿತ್ಯ ದಿನಚರಿ ಬರೆಯುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಜಿಪಂ ಅಧ್ಯಕ್ಷ ಎಚ್. ವಿಶ್ವನಾಥರಡ್ಡಿ ಪಿಡಿಒಗಳಿಗೆ ಸೂಚಿಸಿದರು.ಎಚ್. ವಿಶ್ವನಾಥರಡ್ಡಿ ಎಚ್. ವಿಶ್ವನಾಥರಡ್ಡಿ

ಪಟ್ಟಣದ ತಾಪಂ ಸಭಾಭವನದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಿಡಿಒಗಳು ತಮ್ಮ ಹೊಣೆಗಾರಿಕೆಯನ್ನು ಅರಿತು ಕಾರ್ಯನಿರ್ವಹಿಸಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಮುಂದಾಗಿ ಎಂದರು.

ತಾಲೂಕಿನಲ್ಲಿ ಕುಡಿಯುವ ನೀರು ಪೂರೈಕೆ ಮಾಡಿದ ಟ್ಯಾಂಕರ್‌ ಮಾಲೀಕರಿಗೆ ಹಾಗೂ ಖಾಸಗಿ ಬೋರ್‌ವೆಲ್ ಮಾಲೀಕರಿಗೆ ವಿಳಂಬ ಮಾಡದೇ ಬಿಲ್ ಪಾವತಿ ಮಾಡುವಂತೆ ತಹಸೀಲ್ದಾರ್‌ ಅವರಿಗೆ ಸೂಚಿಸಿದರು.

ಪಿಡಿಒಗೆ ನೋಟಿಸ್‌ ನೀಡಿ: ತಾಳಕೇರಿ ಗ್ರಾಮದಲ್ಲಿ ವಿಪರೀತ ನೀರಿನ ಸಮಸ್ಯೆ ಉದ್ಭವಿಸಿದೆ. ಪರಿಹಾರಕ್ಕೆ ಗ್ರಾಪಂ ಆಡಳಿತ ಮುಂದಾಗಿಲ್ಲ ಸಭೆ ನಡೆಯುವುದು ಗೊತ್ತಿದ್ದರೂ ಸಭೆಗೆ ಆಗಮಿಸಿಲ್ಲ ಆದರಿಂದ ಅವರಿಗೆ ನೋಟಿಸ್‌ ನೀಡುವಂತೆ ತಾಪಂ ಇಒ ಡಿ. ಮೋಹನಗೆ ಸೂಚಿಸಿದರು.

ಜಿಪಂ ಸದಸ್ಯ ಹನುಮಂತಗೌಡ ಪಾಟೀಲ ಮಾತನಾಡಿ, ಯರೇಹಂಚಿನಾಳ ಹಾಗೂ ಲಕಮಾಪುರ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಸಾಕಷ್ಟಿದೆ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಪಂ ಸದಸ್ಯರು ಹೇಳುವ ಕುಡಿವ ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ ಕಡ್ಡಾಯವಾಗಿ ಜಿಪಂ ಸದಸ್ಯರೊಂದಿಗೆ ಭೇಟಿ ನೀಡಿ ತುರ್ತಾಗಿ ಕುಡಿವ ನೀರಿನ ಸಮಸ್ಯೆ ಹೋಗಲಾಡಿಸಲು ಮುಂದಾಗಬೇಕು ಎಂದು ಕುಡಿಯುವ ನೀರು ನೈರ್ಮಲ್ಯ ಎಇಇ ತಿರುಕನಗೌಡ ಅವರಿಗೆ ಸೂಚಿಸಿದರು.

ಶಾಲೆಗೆ ಭೇಟಿ ನೀಡಿ: ಕ್ಷೇತ್ರ ಶಿಕ್ಷಣಾಧಿಕಾರಿ ತಾಲೂಕಿನ ಪ್ರತಿಯೊಂದು ಶಾಲೆಗಳಿಗೆ ಭೇಟಿ ನೀಡಿ ಸಮಸ್ಯೆ ಪರಿಹಾರಕ್ಕೆ ಮುಂದಾಗುವ ಕಾರ್ಯ ಮಾಡಿ ಎಂದು ಬಿಇಒ ಶರಣಪ್ಪ ವಟಗಲ್ ಅವರಿಗೆ ಸೂಚಿಸಿದರು.

ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ರುದ್ರಪ್ಪ ಮರಕಟ್ ಮಾತನಾಡಿ, ಬೋದೂರು ಗ್ರಾಮದಲ್ಲಿ ಶಾಲೆಯಲ್ಲಿ ಬಿಸಿಯೂಟ ತಯಾರಿಸಲು ಕುಡಿವ ನೀರಿನ ಸಮಸ್ಯೆ ಇದೆ. ಹೀಗಾಗಿ ಬಿಸಿಯೂಟ ತಯಾರಿಸಲು ತೊಂದರೆಯಾಗುತ್ತಿದೆ ಎಂದರು. ಬೋದೂರು ಶಾಲೆಯಲ್ಲಿ ಕುಡಿವ ನೀರಿನ ಸಮಸ್ಯೆ ನನ್ನ ಗಮನಕ್ಕೆ ಬಂದಿಲ್ಲ ಎಂದು ಬಿಇಒ ಹೇಳುತ್ತಿದ್ದಂತೆ ಜಿಪಂ ಅಧ್ಯಕ್ಷರು ಬಿಇಒ ಅವರನ್ನು ತೀವ್ರವಾಗಿ ತರಾಟೆ ತೆಗೆದುಕೊಂಡರು. 14ನೇ ಹಣಕಾಸು ಯೋಜನೆ ಕ್ರಿಯಾಯೋಜನೆಗೆ ತಾಲೂಕಿನ 36 ಗ್ರಾಪಂಗಳ ಪೈಕಿ ಒಂದೇ ಗ್ರಾಪಂನವರು ಅನುಮೋದನೆ ಪಡೆದಿದ್ದಾರೆ. ಉಳಿದ ಗ್ರಾಪಂನವರು ಕ್ರಿಯಾಯೋಜನೆ ತಯಾರಿಸಿಕೊಂಡು ಅನುಮೋದನೆ ಪಡೆದು ಕುಡಿವ ನೀರು ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯ ಮಾಡಲು ಮುಂದಾಗಿ ಎಂದು ಜಿಪಂ ಸಿಇಒ ಆರ್‌.ಎಸ್‌. ಪೆದ್ದಪ್ಪಯ್ಯ ಅವರು ಪಿಡಿಒಗಳಿಗೆ ಸೂಚಿಸಿದರು. ತಾಪಂ ಅಧ್ಯಕ್ಷೆ ಲಕ್ಷ್ಮೀ ಗೌಡ್ರ, ಉಪಾಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ, ಜಿಪಂ ಸದಸ್ಯರಾದ ಪ್ರೇಮಾ ಕುಡಗುಂಟಿ, ನೀಲಮ್ಮ ಭಾವಿಮನಿ ಹಾಗೂ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.