ವೀರಶೈವರು ವಿಶಾಲ ದೃಷ್ಟಿಕೋನ ಬೆಳೆಸಿಕೊಳ್ಳಲಿ


Team Udayavani, Feb 2, 2020, 2:18 PM IST

kopala-tdy-1

ಕುಷ್ಟಗಿ: ವೀರಶೈವ ಧರ್ಮದಲ್ಲಿನ ಒಳಪಂಗಡಗಳ ಸಂಕುಚಿತ ಭಾವನೆ ತೊರೆದು, ಸಮಗ್ರ ವೀರಶೈವ ಧರ್ಮದ ವಿಶಾಲ ದೃಷ್ಟಿಕೋನ ಬೆಳೆಸಿಕೊಳ್ಳಬೇಕು ಎಂದು ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನಮಠದ ಶ್ರೀ ಜಗದ್ಗರು ಡಾ| ಅಭಿನವ ಅನ್ನದಾನ ಮಹಾಸ್ವಾಮೀಜಿ ಹೇಳಿದರು.

ಇಲ್ಲಿನ ಬುತ್ತಿ ಬಸವೇಶ್ವರ ಸಭಾಮಂಟಪದಲ್ಲಿ ಶ್ರೀ ಬುತ್ತಿ ಬಸವೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಅಧ್ಯಾತ್ಮ ಪ್ರವಚನದ ಸಾನೀಧ್ಯವಹಿಸಿ ಮಾತನಾಡಿದ ಅವರು, ವೀರಶೈವ ಧರ್ಮಿಯರಲ್ಲಿ ಮುಸ್ಲಿಂ ಸಮಾಜದವರು ಧರ್ಮ ಕಾರ್ಯಗಳಿಗೆ ಸೇರುವ ಹಾಗೆ, ವೀರಶೈವರೆಲ್ಲರೂ ಇಂತಹ ಧರ್ಮ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಾಮರಸ್ಯ ಮೂಡಿಸಬೇಕು. ವೀರಶೈವರು ಎಲ್ಲಿಯವರೆಗೂ ಕೊರಳಲ್ಲಿ ಲಿಂಗ ಧರಿಸುವುದಿಲ್ಲವೋ ಅಲ್ಲಿಯವರೆಗೂ ವೀರಶೈವ ವಿಶಾಲ ಭಾವನೆ ಬರುವುದಿಲ್ಲ. ಲಿಂಗ ಧರಿಸಿ ಪೂಜಿಸುವುದರಿಂದ ನಮ್ಮ ಮನಸ್ಸು ಪವಿತ್ರವಾಗಲಿದೆ. ದೇವರಲ್ಲಿ ಭಕ್ತಿ, ಸಮಾಜದಲ್ಲಿ ಒಳ್ಳೆಯ ಕಾರ್ಯದ ಮೂಲಕ ಅಧ್ಯಾತ್ಮ ಶಕ್ತಿ ಒಲಿಸಿಕೊಳ್ಳಲು ಸಾಧ್ಯವಿದೆ ಎಂದರು.

ವಿಜ್ಞಾನ ಎಷ್ಟೇ ಮುಂದುವರಿದರು ವಿಜ್ಞಾನ ಹಾಗೂ ಅಧ್ಯಾತ್ಮ ಸಮನ್ವಯವಾದರೆ ಜೀವನಪರಿಪೂರ್ಣವಾಗಲು ಸಾಧ್ಯವಿದ್ದು, ಅಧ್ಯಾತ್ಮ ಶಕ್ತಿ ಒಲಿಸಿಕೊಳ್ಳಲು ಮನಸ್ಸನ್ನು ಪವಿತ್ರವನ್ನಾಗಿಸಬೇಕಿದೆ. ಎಲ್ಲರ ಕಲ್ಯಾಣದಿಂದ ತನ್ನ ಕಲ್ಯಾಣವಾಗುವುದು ಅಧ್ಯಾತ್ಮ ಶಕ್ತಿಯಿಂದ ಮಾತ್ರ ಸಾಧ್ಯವಿದ್ದು, ಎಲ್ಲರಲ್ಲೂ ಉತ್ತಮ ವಿಚಾರಗಳು ವ್ಯಕ್ತಗೊಳ್ಳಲು ಇಂತಹ ಅಧ್ಯಾತ್ಮ ಪ್ರವಚನದಿಂದ ಸಾಧ್ಯ. ಈ ಹಿನ್ನೆಲೆಯಲ್ಲಿ ಹಿರಿಯರು, ಯುವಕರು, ಮಾತೆಯರು ಆಸಕ್ತಿಯಿಂದ ಭಾಗವಹಿಸಬೇಕು. ನಾವು ವೀರಶೈವರು, ನಮ್ಮಲ್ಲಿ ಭಾವೈಕ್ಯತೆ, ಸಾಮರಸ್ಯ ಮೂಡಲು ಶ್ರೀ ಮಠದ ಇಂತಹ ಪ್ರವಚನದಲ್ಲಿ ತಪ್ಪದೇ ಭಾಗವಹಿಸಬೇಕು ಎಂದರು.

ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮನುಷ್ಯ ಮನುಷ್ಯನಾಗಿಸಲು ಅಧ್ಯಾತ್ಮ ಪ್ರವಚನಗಳು ಪೂರಕವಾಗಿವೆ. ಸಮಾಜದಲ್ಲಿ ದುಡ್ಡಿಗಿಂತ ಮಾನಸಿಕ ನೆಮ್ಮದಿ ಮುಖ್ಯವಾಗಿದ್ದು, ಇಂತಹ ಅಧ್ಯಾತ್ಮ ಪ್ರವಚನಗಳ ಮೂಲಕ ಮಾನಸಿಕ, ನೆಮ್ಮದಿ, ಶಾಂತಿ ತಂದುಕೊಳ್ಳಬಹುದಾಗಿದೆ ಎಂದರು.

ಹಾಲಕೆರೆ ಸಂಸ್ಥಾನಮಠದ ಉತ್ತರಾಧಿಕಾರಿ, ಶ್ರೀ ಮುಪ್ಪಿನ ಬಸವಲಿಂಗದೇವರು ಮಾತನಾಡಿ, ಕುಷ್ಟಗಿಯಲ್ಲಿ ಹಾಲಕೆರೆ ಅನ್ನದಾನ ಸಂಸ್ಥಾನಮಠದ ಶಾಖಾ ಮಠದಿಂದ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕಾರ್ಯಗಳು ನಿರಂತರವಾಗಿರಲು ಆಶಯ ವ್ಯಕ್ತಪಡಿಸಿದರು.

ಕೊಟ್ಟೂರು ದೇಶಿಕರು, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರಪ್ಪ ಬಳೂಟಗಿ, ಸೋಮಶೇಖರ ವೈಜಾಪೂರ, ವಿಜಯಕುಮಾರ ಹಿರೇಮಠ, ವೀರಶೈವ ಲಿಂಗಾಯತ್‌ ಸಂಘಟನಾ ಟ್ರಸ್ಟ್‌ ಅಧ್ಯಕ್ಷ ಮಲ್ಲಿಕಾರ್ಜುನ ಮಸೂತಿ, ರವಿಕುಮಾರ ಹಿರೇಮಠ, ಬಾಪುಗೌಡ ಪಾಟೀಲ, ಡಾ| ಭೀಮನಗೌಡ್ರು, ದೊಡ್ಡಪ್ಪ ಕಂದಗಲ್‌, ವೀರಣ್ಣ ಬಳಿಗಾರ, ನಾಗಯ್ಯ ಹಿರೇಮಠ ಮತ್ತಿತರರು ಭಾಗವಹಿಸಿದ್ದರು. ಇದಕ್ಕೂ ಮುನ್ನ ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನಮಠದ ಶ್ರೀ ಜಗದ್ಗರು ಡಾ| ಅಭಿನವ ಅನ್ನದಾನ ಮಹಾಸ್ವಾಮಿಗಳ ಪುರ ಪ್ರವೇಶದ ಮೆರವಣಿಗೆ ಜರುಗಿತು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.