ನೀರು ಹರಿಸಲು ಅನುಮತಿ ಕೋರಿ ಪತ್ರ
•ಸರ್ಕಾರಕ್ಕೆ ಅಭಿಯಂತರ ಪತ್ರ •40 ಟಿಎಂಸಿ ನೀರು ಸಂಗ್ರಹ •ಜಲಾನಯನ ಪ್ರದೇಶದಲ್ಲಿ ಮಳೆ ಚುರುಕು
Team Udayavani, Aug 6, 2019, 1:19 PM IST
ಗಂಗಾವತಿ: ಕಾಲುವೆಗಳಿಗೆ ನೀರು ಹರಿಸುವಂತೆ 21ನೇ ಉಪಕಾಲುವೆ ರೈತರು ತುಂಗಭದ್ರಾ ಯೋಜನಾಧಿಕಾರಿಗೆ ಮನವಿ ಸಲ್ಲಿಸಿದರು.
ಗಂಗಾವತಿ: ತುಂಗಭದ್ರಾ ಡ್ಯಾಂನಲ್ಲಿ ಪ್ರಸ್ತುತ 40 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಒಳಹರಿವು ಉತ್ತಮವಾಗಿದೆ. ಕಾಲುವೆಗಳಿಗೆ ನೀರು ಹರಿಸಲು ಅನುಮತಿ ನೀಡುವಂತೆ ರಾಜ್ಯ ಸರಕಾರಕ್ಕೆ ತುಂಗಭದ್ರಾ ಯೋಜನೆ ಮುಖ್ಯ ಅಭಿಯಂತರ ಪತ್ರ ಬರೆದು ಮನವಿ ಮಾಡಿದ್ದಾರೆ.
ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು ಡ್ಯಾಂನ ಒಳಹರಿವು ಉತ್ತಮವಾಗಿದೆ. ಸುಗ್ಗಿ ಬೆಳೆಗೆ ನೀರು ಕಲ್ಪಿಸಲು ಅಚ್ಚುಕಟ್ಟು ಪ್ರದೇಶದ ರೈತರು ಸಂಘ ಸಂಸ್ಥೆಯವರು ನಿರಂತರ ಒತ್ತಡ ಹೇರುತ್ತಿದ್ದಾರೆ. ರೈತರ ಹಿತದೃಷ್ಟಿಯಿಂದ ಕಾಲುವೆಗಳಿಗೆ ನೀರು ಹರಿಸುವುದು ಅವಶ್ಯವಾಗಿದೆ. ಸದ್ಯದ ಡ್ಯಾಂನ ನೀರಿನ ಸ್ಥಿತಿಗತಿ ಕುರಿತು ಪತ್ರದಲ್ಲಿ ವಿವರಣೆ ನೀಡಲಾಗಿದೆ.
ಈ ಭಾರಿ ಮುಂಗಾರು ಮಳೆ ತಡವಾಗಿ ಬಂದಿದ್ದರಿಂದ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದು, ಜುಲೈ ಕೊನೆ ಮತ್ತು ಆಗಸ್ಟ್ ಮೊದಲ ವಾರದಲ್ಲಿ ಒಳಹರಿವು ಹೆಚ್ಚಾಗಿದೆ. ಪ್ರಸ್ತುತ ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಭತ್ತದ ಒಂದು ಬೆಳೆಗಾಗುವಷ್ಟು ನೀರು ಸಂಗ್ರಹವಿದೆ. ಕಳೆದ ವಾರ ಕುಡಿಯುವ ನೀರಿನ ನೆಪದಲ್ಲಿ ಡ್ಯಾಂನಿಂದ ಪ್ರತಿ ದಿನ 1700 ಕ್ಯೂಸೆಕ್ಸ್ ನೀರನ್ನು ಎಡದಂಡೆ ಪ್ರಸ್ತುತ 1200 ಕ್ಯೂಸೆಕ್ಸ್ ನೀರನ್ನು ಬಲದಂಡೆ ಕಾಲುವೆ ಮೂಲಕ ಬಳ್ಳಾರಿ ಮತ್ತು ಆಂಧ್ರಪ್ರದೇಶಕ್ಕೆ ಹರಿಸಲಾಗುತ್ತಿದೆ. ಸದ್ಯ ಒಳಹರಿವು 20 ಸಾವಿರ ಕ್ಯೂಸೆಕ್ಸ್ ದಾಟುವ ಸಂಭವವಿದ್ದು, ಕಾಲುವೆಗೆ ನೀರು ಹರಿಸಲು ಸರಕಾರದಿಂದ ಪರವಾನಗಿ ಕೋರಲಾಗಿದೆ. ಈಗಾಗಲೇ ಕೊಪ್ಪಳ, ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳ ಸಂಸದರು ಅಚ್ಚುಕಟ್ಟು ಪ್ರದೇಶದ ಶಾಸಕರು ಪ್ರತಿ ದಿನ ಡ್ಯಾಂನಲ್ಲಿ ಸಂಗ್ರಹವಾಗುವ ನೀರಿನ ಪ್ರಮಾಣ ಮತ್ತು ಕಾಲುವೆಗಳಿಗೆ ನೀರು ಹರಿಸುವಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು