ಗ್ರಂಥಾಲಯಕ್ಕೆ ಬೇಕಿದೆ ಸ್ಪರ್ಧಾತ್ಮಕ ಹೊತ್ತಿಗೆ


Team Udayavani, Oct 18, 2019, 1:16 PM IST

kopala-tdy-2

ಕೊಪ್ಪಳ: ಸಾರ್ವಜನಿಕರಿಗೆ ಜ್ಞಾನದ ಬೆಳಕು ನೀಡುತ್ತಿರುವ ಗ್ರಂಥಾಲಯಗಳೇ ಇಂದು ನೂರೆಂಟು ಸಮಸ್ಯೆ ಎದುರಿಸುತ್ತಿವೆ. ಆಧುನಿಕತೆಗೆ ತಕ್ಕಂತೆ ಸರ್ಕಾರಗಳು ಗ್ರಂಥಾಲಯಗಳಿಗೆ ಹೈಟೆಕ್‌ ಟಚ್‌ ನೀಡಿ ಉನ್ನತೀರಕಿಸಬೇಕಿದೆ. ಇದಕ್ಕೆ ಕೊಪ್ಪಳದ ಜಿಲ್ಲಾ ಗ್ರಂಥಾಲಯವು ಎದುರು ನೋಡುತ್ತಿದೆ. ಸ್ಪರ್ಧಾತ್ಮ ಪರೀಕ್ಷೆಗೆ ತಕ್ಕಂತೆ ಪುಸ್ತಕಗಳ ಬೇಡಿಕೆಯೂ ಹೆಚ್ಚಿದೆ.

ಹೌದು. ರಾಯಚೂರು ಜಿಲ್ಲೆಯಿಂದ ಬೇರ್ಪಟ್ಟು ಕೊಪ್ಪಳ ಜಿಲ್ಲೆಯಾಗಿ ಎರಡು ದಶಕ ಕಳೆದಿದೆ. ಆಗಲೇ ಜಿಲ್ಲಾ ಕೇಂದ್ರದಲ್ಲಿ ಗ್ರಂಥಾಲಯ ಆರಂಭವಾಗಿದೆ. ಆಗ ಗ್ರಂಥಾಲಯಕ್ಕೆ ಇದ್ದ ಓದುಗರ ಸಂಖ್ಯೆಗಿಂತ ಈಗಿನ ಓದುಗರ ಸಂಖ್ಯೆಯಲ್ಲಿ ಅಧಿ ಕವಾಗಿವಾಗಿದೆ. ಆದರೆ ಸರ್ಕಾರಗಳು ಜ್ಞಾನದ ಕೇಂದ್ರಗಳನ್ನು ಉನ್ನತೀಕರಿಸುವ ಗೋಜಿಗೆ ಹೋಗುತ್ತಿಲ್ಲ. ಜಿಲ್ಲಾ ಗ್ರಂಥಾಲಯಕ್ಕೆ ಸ್ವಂತ ಕಟ್ಟಡವಿದ್ದು, 70-80 ಆಸನ ಸಾಮರ್ಥ್ಯ ಹೊಂದಿದೆ. ಪ್ರಸ್ತುತ ಗ್ರಂಥಾಲಯಕ್ಕೆ 800ರಿಂದ 1000 ಓದುಗರು ಆಗಮಿಸುತ್ತಿದ್ದು,

ಇರುವ ಕಟ್ಟಡ ಯಾವುದಕ್ಕೂ ಸಾಲುತ್ತಿಲ್ಲ. ಕೆಲವರು ಆಸನದಲ್ಲಿ ಕುಳಿತು ಓದುತ್ತಿದ್ದರೆ, ಹಲವರು ನಿಂತುಕೊಂಡೇ ಓದುವ ಸ್ಥಿತಿ ಜಿಲ್ಲಾ ಕೇಂದ್ರದಲ್ಲಿದೆ. ಗ್ರಂಥಾಲಯ ಒಂದೇ ಅಂತಸ್ಥಿನ ಮಹಡಿಯಾಗಿದ್ದು, ಮೇಲಂತಸ್ಥಿನ ಕೊಠಡಿಗಳನ್ನು ನಿರ್ಮಿಸಿದರೆ ಓದುಗರ ಸಂಖ್ಯೆ ಇನ್ನಷ್ಟು ಹೆಚ್ಚಳವಾಗಲಿದೆ. ಮಹಿಳಾ ವಿಭಾಗ, ವಿವಿಧ ಪುಸ್ತಕಗಳ ವಿಭಾಗ ಆರಂಭಿಸುವ ಜೊತೆಗೆ ಜನರಿಗೆ ಕುಳಿತು ಓದಲು ವ್ಯವಸ್ಥೆ ಮಾಡಬೇಕಿದೆ.

ಸ್ಪರ್ಧಾತ್ಮಕ ಪುಸ್ತಕಗಳಿಗೆ ಬೇಡಿಕೆ: ಐದು ವರ್ಷದ ಹಿಂದೆ ಸಾಹಿತ್ಯಾಸಕ್ತ, ಕಾದಂಬರಿ ಸೇರಿದಂತೆ ವಿವಿಧ ಗ್ರಂಥಗಳನ್ನು ಓದಲು ಹೆಚ್ಚು ಜನ ಆಗಮಿಸುತ್ತಿದ್ದರು. ಪ್ರಸ್ತುತ ಹಿರಿಯರಿಗಿಂತ ಯುವಕರು ಹೆಚ್ಚು ಆಗಮಿಸುತ್ತಿದ್ದಾರೆ. ಗ್ರಂಥಾಲಯಕ್ಕೆ ಕಾದರಂಬರಿ ಆಧಾರಿತ ಪುಸ್ತಕ ಹೆಚ್ಚು ಪೂರೈಕೆ ಮಾಡಲಾಗುತ್ತಿದೆ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಲು ವಿದ್ಯಾರ್ಥಿಗಳು ಹೆಚ್ಚಾಗಿ ಗ್ರಂಥಾಲಯಕ್ಕೆ ಆಗಮಿಸುತ್ತಿದ್ದಾರೆ. ಅವರ ಆಸಕ್ತಿಗೆ ತಕ್ಕಂತೆ ಸ್ಪರ್ಧಾತ್ಮಕ ಪುಸ್ತಕಗಳ ಪೂರೈಸಬೇಕಿದೆ. ಆದರೆ ಪುಸ್ತಕಗಳ ಆಯ್ಕೆ ಸಮಿತಿ ರಾಜ್ಯ ಮಟ್ಟದಲ್ಲಿ ಈ ಪ್ರಕ್ರಿಯೆ ನಡೆಸಲಿದ್ದು, ಆಯ್ದ ಪುಸ್ತಕ ಆಯ್ಕೆ ಮಾಡಿ ನೇರ ಗ್ರಂಥಾಲಯಕ್ಕೆ ಪೂರೈಸುತ್ತಿದೆ. ಹೀಗಾಗಿ ಜಿಲ್ಲಾ ಹಾಗೂ ತಾಲೂಕು ಹಂತದಲ್ಲಿ ಯಾವುದೇ ಆಯ್ಕೆ ಇರುವುದಿಲ್ಲ. ರಾಜ್ಯ ಮಟ್ಟದಿಂದ ಬಂದ ಪುಸ್ತಕಗಳನ್ನು ಓದುಗರಿಗೆ ಪೂರೈಸಬೇಕಿದೆ. ಸರ್ಕಾರ ಇಂತಹ ಸೂಕ್ಷ್ಮ ವಿಚಾರ ಅರಿತು ಕೇಂದ್ರಗಳಿಗೆ ಸ್ಪರ್ಧಾತ್ಮಕ ಪುಸ್ತಕಗಳ ಪೂರೈಕೆ ಮಾಡಬೇಕಿದೆ. ಅಲ್ಲದೇ, ಹಳೇಯ ಗ್ರಂಥಾಲಯಕ್ಕೆ ಇ-ಗ್ರಂಥಾಲಯದ ವ್ಯವಸ್ಥೆ ಜಾರಿ ಮಾಡಬೇಕಿದೆ.

ಜಿಲ್ಲಾ ಕೇಂದ್ರಕ್ಕೊಂದೇ ಗ್ರಂಥಾಲಯ: ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ಕೊಪ್ಪಳದಲ್ಲಿ ಕೇವಲ ಒಂದೇ ಗ್ರಂಥಾಲಯವಿದೆ. ಸ್ಥಳೀಯರು ಮಾತ್ರ ನಗರ ಪ್ರದೇಶಕ್ಕೆ ಪ್ರತ್ಯೇಕ ಗ್ರಂಥಾಲಯ ಆರಂಭಿಸಬೇಕು. ಅಲ್ಲದೇ ಜಿಲ್ಲಾ ಕೇಂದ್ರದ ವಿವಿಧ ಭಾಗಗಳಲ್ಲಿ ಶಾಖೆ ಆರಂಭಿಸಿ ಹಿರಿಯರಿಗೆ, ಯುವಕರಿಗೆ, ಮಹಿಳೆಯರಿಗೆ ಅನುವು ಮಾಡಿಕೊಡಬೇಕೆಂಬ ಒತ್ತಾಯ ಕೇಳಿ ಬಂದಿವೆ. ಶಾಖೆಗಳು ಆರಂಭವಾದರೆ ಹಿರಿಯರು ದೂರದ ಗ್ರಂಥಾಲಯಕ್ಕೆ ಬಂದು ಹೋಗುವ ಪ್ರಮೆಯ ತಪ್ಪಲಿದೆ.

ಖಾಲಿ ಜಾಗಕ್ಕಾಗಿ ನಡೆದಿದೆ ಹೋರಾಟ: ನಗರದ ಸಾಹಿತ್ಯ ಭವನದ ಪಕ್ಕದಲ್ಲೇ ಗ್ರಂಥಾಲಯ ಇತ್ತು. ಅದು ನಗರಸಭೆ ಮಳಿಗೆಗಳ ಮಧ್ಯೆ ಮರೆಯಾಗಿತ್ತು. ಪ್ರಸ್ತುತ ನಗರಸಭೆ ತನ್ನ ಹಳೆಯ ಮಳಿಗೆಗಳನ್ನು ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ. ಆದರೆ ಸಾರ್ವಜನಿಕರು ಗ್ರಂಥಾಲಯದ ಮುಂಭಾಗದಲ್ಲಿ ಖಾಲಿ ಜಾಗವನ್ನು ಗ್ರಂಥಾಲಯಕ್ಕೆ ಮೀಸಲಿಟ್ಟರೆ ಭವಿಷ್ಯದ ದೃಷ್ಟಿಯಲ್ಲಿ ಅನುಕೂಲವಾಗಲಿದೆ. ಪುನಃ ಇಲ್ಲಿ ಕಟ್ಟಡ ಕಟ್ಟಿ ಗ್ರಂಥಾಲಯದ ವಾತಾವರಣ ಹಾಳು ಮಾಡುವುದು ಸರಿಯಲ್ಲ ಎನ್ನುವ ಭಾವನೆ ವ್ಯಕ್ತವಾಗಿದೆ. ಈ ಕುರಿತಂತೆ ಸಾಹಿತಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಸಂಸದ ಸಂಗಣ್ಣ ಕರಡಿ ಅವರು ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಒಟ್ಟಿನಲ್ಲಿ ಜಿಲ್ಲಾ ಕೇಂದ್ರದಲ್ಲಿರುವ ಗ್ರಂಥಾಲಯವು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಜಿಲ್ಲಾಡಳಿತ, ಜನಪ್ರತಿನಿ ಧಿಗಳು ಈ ಬಗ್ಗೆ ಕಾಳಜಿ ವಹಿಸಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕಿದೆ. ಜೊತೆಗೆ ಯುವ ಪೀಳಿಗೆಗೆ ತಕ್ಕಂತೆ ವಿವಿಧ ಪುಸ್ತಕಗಳನ್ನು ಪೂರೈಸುವ ಕೆಲಸ ಮಾಡಬೇಕಿದೆ.

 

-ದತ್ತು ಕಮ್ಮಾರ

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.