ಜೀವನ ಸಾಧನೆಯಲ್ಲ ಶೋಧನೆಯಾಗಲಿ: ವಿನಯ ಗುರೂಜಿ


Team Udayavani, Feb 1, 2021, 2:10 PM IST

Life is not about achievement: Vinaya Guruji

ಕೊಪ್ಪಳ: ಮನುಷ್ಯನ ಜೀವನವೆಂಬುದು ಸಾಧನೆ ಮಾಡುವುದಲ್ಲ. ನಮ್ಮೊಳಗೆ ನಾವು ಶೋಧನೆ ಮಾಡಬೇಕು. ಆದರೆ ಇಂದಿನ ವ್ಯವಸ್ಥೆಯಲ್ಲಿ ನಾವೆಲ್ಲರೂ ಹೊರಗೆ ಮನುಷ್ಯರಂತೆ ನಟನೆ ಮಾಡುತ್ತಿದ್ದೇವೆ. ಆದರೆ ನಿಜವಾದ ಮನುಷ್ಯರಲ್ಲ. ಆದ್ದರಿಂದ ಪ್ರತಿಯೊಬ್ಬರು ಭಗವದ್ಗೀತೆ ಪಠಿಸಿದರೇ ಸಾಲದು, ಅದನ್ನು ಅನುಸರಿಸಬೇಕು ಎಂದು ಅವಧೂತ ಶ್ರೀ ವಿನಯ ಗುರೂಜಿ ಹೇಳಿದರು.

ತಾಲೂಕಿನ ಕಿಡದಾಳ ಗ್ರಾಮದಲ್ಲಿನ ಶಾರದಾ ಇಂಟರ್‌ ನ್ಯಾಷನಲ್‌ ಸ್ಕೂಲ್‌ ಮತ್ತು ಕಾಲೇಜ್‌ ಸಭಾಂಗಣದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ದೇಶವು ಮಮ್ಮಿ, ಡ್ಯಾಡಿ ಸಂಸ್ಕೃತಿಯಿಂದ  ಹಾಳಾಗುತ್ತಿದೆ. ಶಾಲೆಗಳಲ್ಲಿ ನಾವು ಬದುಕು, ಸಂಸ್ಕಾರ ಕಲಿಸುತ್ತಿಲ್ಲ. ಇದರಿಂದ ಕಲಿಯುವ ಮಕ್ಕಳು ತಪ್ಪಾಗಿ ಬದುಕು ಸಾಗಿಸಲು ನಿರ್ಧರಿಸುತ್ತಾರೆ. ಆದ್ದರಿಂದ ಅವರಿಗೆ ನಾವು ಸಂಸ್ಕಾರ ಕೊಡಬೇಕಾಗಿದೆ.

ಪ್ರತಿಯೊಂದು ಶಾಲೆಯಲ್ಲೂ ಭಗವದ್ಗೀತೆಯ ಪಾಠವಾಗಬೇಕಾಗಿದೆ. ಪ್ರತಿದಿನ ಅರ್ಧ ಗಂಟೆಅದನ್ನು ಪಠಣ ಮಾಡಿ ಅನುಸರಿಸುವುದನ್ನು  ಮಕ್ಕಳಿಗೆ ಕಲಿಸಿಕೊಡುವ ಅಗತ್ಯವಿದೆ ಎಂದರು.

ಭಾರತ ನಿರ್ಮಾಣವಾಗಿರುವುದು ಕಾಸು, ಬಂಗಾರ, ವಜ್ರದಿಂದಲ್ಲ, ಸಂಸ್ಕಾರದಿಂದ. ಆದ್ದರಿಂದ ಆ ಸಂಸ್ಕಾರವನ್ನು ನಾವು ಮಕ್ಕಳಿಗೆ ಕಲಿಸಬೇಕಾಗಿದೆ. ದುಡ್ಡು ಮಾಡುವುದು ದೊಡ್ಡದಲ್ಲ, ಮಾಡಿದ ದುಡ್ಡನ್ನು ಸಂಸ್ಕಾರಯುತವಾಗಿ ಹೇಗೆ ಬಳಕೆ ಮಾಡಬೇಕು ಎನ್ನುವುದು ಮುಖ್ಯ. ಕಲ್ಲು ದೇವರಿಗೆ ಅರ್ಧ ಕೆಜಿ ತುಪ್ಪ ಸುರಿಯುವ ಬದಲು ಬಡ ಮಕ್ಕಳಿಗೆ ಆ ತುಪ್ಪ ನೀಡಿದರೇ ಅದುವೇ ಸಂಸ್ಕಾರ. ಆದರೆ, ನಾವು ಅದನ್ನು ಮಾಡುತ್ತಿಲ್ಲ. ಸಂಸ್ಕಾರ ನೀಡುವಾಗಲು ತಾರತಮ್ಯ ಮಾಡಲಾಗುತ್ತದೆ ಎಂದರು.

ಯಾವ ದೇವರು ಸಹ ನಮಗೆ ಬಂಗಾರದ ಕಳಸ ಮಾಡಿಸಿ, ಗೋಪುರ ಕಟ್ಟಿಕೊಡಿ ಎಂದು ಕೇಳಿಲ್ಲ. ನೀವು ಮಾಡುವ ತಪ್ಪಿನಿಂದಾಗಿ ಇಂದು ದೇವರ ಬಗ್ಗೆ ತಪ್ಪು ಕಲ್ಪನೆ ಮೂಡಿದೆ. ಯಾವ ದೇವರು ಸಹ ಇದನ್ನು ಕೊಡಿ ಎಂದು ಕೇಳುವುದೇ ಇಲ್ಲ. ಇದನ್ನು ಭಗವದ್ಗೀತೆ ಹೇಳುತ್ತದೆ. ಆದರೆ ನಾವು ಅದನ್ನು ಅನುಸರಿಸದೆ ಅದನ್ನು ತಪ್ಪಾಗಿ ಅರ್ಥೈಸಿ, ತಪ್ಪು ಸಂದೇಶ ನೀಡುತ್ತಿದ್ದೇವೆ ಎಂದರು.

ಇದನ್ನೂ ಓದಿ:ಯುವ ಮೋರ್ಚಾದಿಂದ ಸ್ವತ್ಛತಾ ಕಾರ್ಯಕ್ರಮ

ಉತ್ತರ ಕರ್ನಾಟಕದಲ್ಲಿ ಇಂದಿಗೂ ದಾಸೋಹ ಪರಂಪರೆಯಿದೆ. ಇದರಿಂದ ಇಲ್ಲಿ ದೇವರು ನೆಲೆಸಿದ್ದಾನೆ. ಇಂತಹ ದಾಸೋಹ ಪರಂಪರೆ ತೀರಾ ಅಗತ್ಯವಾಗಿದೆ. ನಿಮ್ಮ ದುಡಿಮೆಯಲ್ಲಿ ಒಂದಿಷ್ಟು ಪಾಲನ್ನು ದಾಸೋಹ ಅಥವಾ ಬಡ ಮಕ್ಕಳ ಕಲ್ಯಾಣಕ್ಕೆ ಮೀಸಲು ಇಟ್ಟರೆ ಅದುವೇ ನಿಜವಾದ ಸೇವೆ. ಪಾಲಕರೂ ಮಕ್ಕಳಿಗೆ ಬದುಕಿನ ಮೌಲ್ಯಗಳ ಪಾಠ ಹೇಳಿಕೊಡಬೇಕು. ಯಾವುದು ಮಾಡಬೇಕು ಯಾವುದು ಮಾಡಬಾರದು ಎನ್ನುವುದನ್ನು ತಿಳಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಚಕ್ರವರ್ತಿ ಅವರು ಶ್ರೀವಿನಯ ಗುರೂಜಿ ಅವರು ಪರಿಚಯಿಸಿದರು. ಆಡಳಿತ ಮಂಡಳಿಯ ಸಂಸ್ಥಾಪಕ ವಿ.ಆರ್‌. ಪಾಟೀಲ್‌, ಎಸ್‌.ಆರ್‌. ಪಾಟೀಲ್‌ ಹಾಗೂ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.